AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಇಬ್ಬರು ಹೆಣ್ಣುಮಕ್ಕಳನ್ನು ಬಾವಿಗೆ ತಳ್ಳಿ, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ!

ಭಾನುವಾರ ಚತರ್​​ಪುರದ ಹಳ್ಳಿಯೊಂದರಲ್ಲಿ ಮಹಿಳೆ ತನ್ನ 10 ವರ್ಷ ಮತ್ತು 4 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಬಾವಿಗೆ ಹಾಕಿ, ನಂತರ ತಾನು ನೇಣು ಬಿಗಿದುಕೊಂಡಿದ್ದಾಳೆ.

Crime News: ಇಬ್ಬರು ಹೆಣ್ಣುಮಕ್ಕಳನ್ನು ಬಾವಿಗೆ ತಳ್ಳಿ, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ!
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 30, 2021 | 8:40 PM

Share

ಭೂಪಾಲ್: ಹೆತ್ತವರಿಗೆ ಹೆಗ್ಗಣವೂ ಮುದ್ದು ಎಂಬ ಮಾತೊಂದಿದೆ. ಆದರೆ, ಮಧ್ಯಪ್ರದೇಶದ ಚತರ್​ಪುರದಲ್ಲಿ 33 ವರ್ಷದ ಮಹಿಳೆ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬಾವಿಗೆ ಎಸೆದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅತ್ತೆಯ ಜೊತೆಗೆ ಮೊಬೈಲ್ ವಿಷಯಕ್ಕೆ ಜಗಳವಾಡಿದ ಸೊಸೆ ತನ್ನ ಇಬ್ಬರು ಮಕ್ಕಳನ್ನು ಬಾವಿಗೆಸೆದು, ತಾನು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.

ಭಾನುವಾರ ಚತರ್​​ಪುರದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಮಹಿಳೆ ತನ್ನ 10 ವರ್ಷ ಮತ್ತು 4 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಬಾವಿಗೆ ಹಾಕಿ, ನಂತರ ತಾನು ನೇಣು ಬಿಗಿದುಕೊಂಡಿದ್ದಾಳೆ. ಅದೃಷ್ಟವಶಾತ್ ಆ ಇಬ್ಬರು ಹೆಣ್ಣುಮಕ್ಕಳು ಬಾವಿಯ ಕಲ್ಲಿನ ಸಂದಿಯಲ್ಲಿ ಸಿಕ್ಕಿಹಾಕಿಕೊಂಡು ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಶನಿವಾರ ಸಂಜೆ ಆಕೆ ತನ್ನ ಅತ್ತೆಯೊಂದಿಗೆ ಜಗಳವಾಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಳ ಅತ್ತೆ ಆಕೆಯ ಮೊಬೈಲ್ ಫೋನನ್ನು ಕಿತ್ತುಕೊಂಡಿದ್ದರು. ಇದರಿಂದ ಕೋಪಗೊಂಡಿದ್ದ ಆಕೆ ಅತ್ತೆಯೊಂದಿಗೆ ಜಗಳವಾಡಿದ್ದಳು. ಇದೇ ವಿಷಯ ದೊಡ್ಡದಾಗಿ ಕೋಪಗೊಂಡ ಆಕೆ ಮರುದಿನ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ತೋಟದ ಮನೆಗೆ ಹೋಗಿದ್ದಾಳೆ. ಅಲ್ಲಿ ಮಕ್ಕಳನ್ನು ಬಾವಿಗೆ ತಳ್ಳಿ ಆನು ಮನೆಗೆ ಬಂದು ನೇಣು ಹಾಕಿಕೊಂಡಿದ್ದಾಳೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Crime News: ಬುಡಕಟ್ಟು ವ್ಯಕ್ತಿಯನ್ನು ಲಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಜನರು; ಗಂಭೀರವಾಗಿ ಗಾಯಗೊಂಡಾತ ಸಾವು

Crime News: ಸೊಸೆಯ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಮಾವ ಆತ್ಮಹತ್ಯೆ!

(Madhya Pradesh Woman Dies by Suicide After Throwing two Daughters Into Well)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ