AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಕೇವಲ 400 ರೂ.ಗಾಗಿ ಪ್ರೇಯಸಿಯ ಮೂಗನ್ನೇ ಕತ್ತರಿಸಿದ ಮಹರಾಯ!

Shocking News: ಸೋನುವಿನ ಗಂಡ 8 ವರ್ಷದ ಹಿಂದೆ ಸಾವನ್ನಪ್ಪಿದ್ದ. ಆಗಿನಿಂದ ಹೊಲದ ಕೆಲಸ ಮಾಡಿಕೊಂಡಿದ್ದ ಸೋನು ಬಳಿಕ ಲವ್ ಕುಶ್ ಪಟೇಲ್ ಜೊತೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದಳು.

Crime News: ಕೇವಲ 400 ರೂ.ಗಾಗಿ ಪ್ರೇಯಸಿಯ ಮೂಗನ್ನೇ ಕತ್ತರಿಸಿದ ಮಹರಾಯ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 29, 2021 | 5:31 PM

ಖಾಂಡ್ವಾ: ಕೋಪದ ಕೈಗೆ ಬುದ್ಧಿಯನ್ನು ಕೊಡಬಾರದು ಎಂಬ ಮಾತೊಂದಿದೆ. ಈ ಗಾದೆ ಹಳೆಯದಾದರೂ ಇಂದಿಗೂ ಅನ್ವಯವಾಗುತ್ತದೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 40 ವರ್ಷದ ವ್ಯಕ್ತಿಯೊಬ್ಬರು 35 ವರ್ಷದ ಮಹಿಳೆಯೊಂದಿಗೆ ಲಿವ್-ಇನ್ ರಿಲೇಷನ್​ಶಿಪ್​ನಲ್ಲಿದ್ದರು. ಆಲ್ಕೋಹಾಲ್ ಖರೀದಿಸಲು ಆಕೆ ಹಣ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯ ಮೂಗನ್ನೇ ಕತ್ತರಿಸಿರುವ ಆಘಾತಕಾರಿ ಘಟನೆ ನಡೆದಿದೆ.

ಶನಿವಾರ ಕೊಡಲಿಯಿಂದ ಬೆಳಗ್ಗೆ ತನ್ನ 35 ವರ್ಷದ ಗೆಳತಿಯ ಮೂಗನ್ನು ಕತ್ತರಿಸಿದ್ದಾನೆ. ಆರೋಪಿ ಲವ್ ಕುಶ್ ಪಟೇಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ಪಟೇಲ್ ಕಳೆದ ಎರಡು ವರ್ಷಗಳಿಂದ ಸೋನು ಜೊತೆ ಲಿವ್ ಇನ್ ರಿಲೇಶನ್ ಶಿಪ್​ನಲ್ಲಿದ್ದರು. ಪೊಲೀಸ್ ಅಧಿಕಾರಿಯ ಪ್ರಕಾರ, ಶನಿವಾರ ಬೆಳಗ್ಗೆ ಆತ ಮದ್ಯ ಖರೀದಿಸಲು 400 ರೂ. ನೀಡುವಂತೆ ಕೇಳಿದ್ದ. ಆದರೆ, ಆಕೆ ಹಣ ನೀಡಲು ನಿರಾಕರಿಸಿದ್ದಳು. ಇದರಿಂದ ಕುಪಿತಗೊಂಡ ಆತ ಅಲ್ಲೇ ಬಿದ್ದಿದ್ದ ಕೊಡಲಿಯನ್ನು ಎತ್ತಿಕೊಂಡು ಸೋನುವಿನ ಮೂಗನ್ನು ಕತ್ತರಿಸಿದ್ದಾನೆ. ಆಕೆಯ ಕೂಗು ಕೇಳಿದ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅಷ್ಟರಲ್ಲಿ ಪಟೇಲ್ ಓಡಿ ಹೋಗಿದ್ದಾನೆ. ಸೋನುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಆಕೆಯ ಮಾಹಿತಿಯ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪಟೇಲ್‌ಗಾಗಿ ಹುಡುಕಾಟ ನಡೆಸಿ, ಸಂಜೆಯ ವೇಳೆಗೆ ಅವರನ್ನು ಬಂಧಿಸಲಾಯಿತು. ಭಾನುವಾರ, ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಬಳಿಕ ಆತನನ್ನು ಜೈಲಿಗೆ ಕಳುಹಿಸಲಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸೋನುವಿನ ಗಂಡ 8 ವರ್ಷದ ಹಿಂದೆ ಸಾವನ್ನಪ್ಪಿದ್ದ. ಆಗಿನಿಂದ ಹೊಲದ ಕೆಲಸ ಮಾಡಿಕೊಂಡಿದ್ದ ಸೋನು ಬಳಿಕ ಲವ್ ಕುಶ್ ಪಟೇಲ್ ಜೊತೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದಳು. ಲವ್ ಕುಶ್ ಪಟೇಲ್ ಸದಾ ಕುಡಿದು ಮನೆಗೆ ಬರುತ್ತಿದ್ದ. ಪಟೇಲ್ ಕಳೆದ ಎರಡು ವರ್ಷಗಳಿಂದ ಸೋನು ಜೊತೆ ಲಿವ್ ಇನ್ ರಿಲೇಶನ್ ಶಿಪ್​ನಲ್ಲಿದ್ದ. ಶನಿವಾರ ಬೆಳಗ್ಗೆ ಆತ ಮದ್ಯ ಖರೀದಿಸಲು 400 ರೂ. ನೀಡುವಂತೆ ಕೇಳಿದ್ದ. ಆದರೆ ಆಕೆ ಹಣ ನೀಡಲು ನಿರಾಕರಿಸಿದ್ದಳು. ಇದರಿಂದ ಕುಪಿತಗೊಂಡ ಆತ ಅಲ್ಲೇ ಬಿದ್ದಿದ್ದ ಕೊಡಲಿಯನ್ನು ಎತ್ತಿಕೊಂಡು ಸೋನುವಿನ ಮೂಗನ್ನು ಕತ್ತರಿಸಿದ್ದಾನೆ. ಆಕೆಯ ಕೂಗು ಕೇಳಿದ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೂಗು ಕತ್ತರಿಸಿದ್ದರಿಂದ ಮಹಿಳೆಯ ಮುಖದಿಂದ ರಕ್ತ ಸೋರುತ್ತಿತ್ತು. ರಕ್ತಸಿಕ್ತವಾದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ತನ್ನ ಪ್ರಿಯಕರನ ವಿರುದ್ಧ ಸೋನು ದೂರು ನೀಡಿದ್ದು, ಆ ದೂರಿನ ಆಧಾರದಲ್ಲಿ ಪಟೇಲ್​ನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Crime News: ಹಸುಗೂಸಿನ ಮೈಗೆ ಬರೆ ಹಾಕಿ ಚಿತ್ರಹಿಂಸೆ ನೀಡಿದ ಬಾಲಕಿ; ಕಾರಣ ಕೇಳಿದ್ರೆ ಶಾಕ್ ಆಗ್ತೀರ

Shocking News: ಯುವತಿಯಿಂದಲೇ ಸಮಾಧಿ ತೋಡಿಸಿ, ಆಕೆಯನ್ನು ಕೊಂದು ಹೂತು ಹಾಕಿದ ಕಿರಾತಕರು!

Published On - 5:22 pm, Wed, 29 December 21

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್