AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸುಪ್ರೀಂ ಕೋರ್ಟ್ ಎದುರೇ ಬೆಂಕಿ ಹಚ್ಚಿಕೊಂಡ ದಂಪತಿ; ಪ್ರಾಣಾಪಾಯದಿಂದ ಪಾರು

ಯಾವ ಕಾರಣಕ್ಕಾಗಿ ಆ ಇಬ್ಬರು ಬೆಂಕಿ ಹಚ್ಚಿಕೊಂಡರು ಎಂಬ ವಿಚಾರ ಇನ್ನೂ ತಿಳಿದುಬಂದಿಲ್ಲ. ಆ ಇಬ್ಬರ ಹಿನ್ನೆಲೆಯ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Crime News: ಸುಪ್ರೀಂ ಕೋರ್ಟ್ ಎದುರೇ ಬೆಂಕಿ ಹಚ್ಚಿಕೊಂಡ ದಂಪತಿ; ಪ್ರಾಣಾಪಾಯದಿಂದ ಪಾರು
ಸುಪ್ರೀಂ ಕೋರ್ಟ್​ ಎದುರು ಬೆಂಕಿ ಹಚ್ಚಿಕೊಂಡ ದಂಪತಿ
TV9 Web
| Edited By: |

Updated on: Aug 16, 2021 | 5:58 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಸುಪ್ರೀಂ ಕೋರ್ಟ್ ಮುಂಭಾಗದಲ್ಲಿ ಗಂಡ-ಹೆಂಡತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ಆಘಾತಕಾರಿ ಘಟನೆ ಇಂದು ಬೆಳಗ್ಗೆ ನಡೆದಿದೆ. ಭಗವಾನ್ ದಾಸ್ ರಸ್ತೆಯಲ್ಲಿರುವ ಸುಪ್ರೀಂ ಕೋರ್ಟ್​ ಕಾಂಪ್ಲೆಕ್ಸ್​ ಎದುರಲ್ಲೇ ಗಂಡ-ಹೆಂಡತಿ ಬೆಂಕಿ ಹಚ್ಚಿಕೊಂಡಿದ್ದಾರೆ. ಹೀಗೆ ಬೆಂಕಿ ಹಚ್ಚಿಕೊಳ್ಳಲು ಕಾರಣವೇನೆಂಬ ಬಗ್ಗೆ ಇನ್ನೂ ತನಿಖೆ ನಡೆಯಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇಬ್ಬರು ಕೋರ್ಟ್​ನ ಗೇಟ್ ಬಳಿ ಬೆಂಕಿ ಹಚ್ಚಿಕೊಂಡಿದ್ದು ಕಂಡಕೂಡಲೆ ಸೆಕ್ಯುರಿಟಿ ಸಿಬ್ಬಂದಿ ಬ್ಲಾಂಕೆಟ್ ಅನ್ನು ತೆಗೆದುಕೊಂಡು ಓಡಿ ಹೋಗಿ ಬೆಂಕಿ ಆರಿಸಿದ್ದಾರೆ. ಗಾಯಗೊಂಡಿದ್ದ ಅವರಿಬ್ಬರನ್ನೂ ಪೊಲೀಸ್ ವ್ಯಾನ್​ನಲ್ಲಿ ರಾಮ್ ಮನೋಹರ್ ಲೂಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಬ್ಬರ ಮೈಮೇಲೆ ಸಾಕಷ್ಟು ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಯಾವ ಕಾರಣಕ್ಕಾಗಿ ಆ ಇಬ್ಬರು ಬೆಂಕಿ ಹಚ್ಚಿಕೊಂಡರು ಎಂಬ ವಿಚಾರ ಇನ್ನೂ ತಿಳಿದುಬಂದಿಲ್ಲ. ಆ ಇಬ್ಬರ ಹಿನ್ನೆಲೆಯ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಅವರ ಬಳಿಯಿದ್ದ ಐಡಿ ಕಾರ್ಡ್​ನಿಂದ ಅವರಿಬ್ಬರೂ ಗಂಡ-ಹೆಂಡತಿ ಎಂಬುದು ಗೊತ್ತಾಗಿದೆ. ಸುಪ್ರೀಂ ಕೋರ್ಟ್​ ಆವರಣದ ಒಳಗೆ ಹೋಗಲು ಐಡಿ ಕಾರ್ಡ್ ತೋರಿಸಿದ್ದ ಅವರಿಬ್ಬರಿಗೂ ಸೆಕ್ಯುರಿಟಿ ಸಿಬ್ಬಂದಿ ಒಳಗೆ ಹೋಗಲು ಬಿಟ್ಟಿರಲಿಲ್ಲ. ಅದಾದ ಬಳಿ ಅವರು ಬೆಂಕಿ ಹಚ್ಚಿಕೊಂಡಿದ್ದರು.

ಇದನ್ನೂ ಓದಿ: Crime News: ಪ್ರೀತಿಗಾಗಿ ಗೆಳೆಯನ ತಲೆಯನ್ನೇ ಕತ್ತರಿಸಿದ 17 ವರ್ಷದ ಯುವಕ; ತ್ರಿಕೋನ ಪ್ರೇಮಕತೆಯ ದುರಂತ ಅಂತ್ಯ

Murder: ಇದು ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಕತೆ!; ಸೇಡಿಗಾಗಿ ಹನಿಮೂನ್​ನಲ್ಲೇ ಹೆಂಡತಿಯನ್ನು ಕೊಂದ ಗಂಡ

(Crime News: Man and woman set themselves on fire outside Supreme Court premises)

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ