AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸುಪ್ರೀಂ ಕೋರ್ಟ್ ಎದುರೇ ಬೆಂಕಿ ಹಚ್ಚಿಕೊಂಡ ದಂಪತಿ; ಪ್ರಾಣಾಪಾಯದಿಂದ ಪಾರು

ಯಾವ ಕಾರಣಕ್ಕಾಗಿ ಆ ಇಬ್ಬರು ಬೆಂಕಿ ಹಚ್ಚಿಕೊಂಡರು ಎಂಬ ವಿಚಾರ ಇನ್ನೂ ತಿಳಿದುಬಂದಿಲ್ಲ. ಆ ಇಬ್ಬರ ಹಿನ್ನೆಲೆಯ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Crime News: ಸುಪ್ರೀಂ ಕೋರ್ಟ್ ಎದುರೇ ಬೆಂಕಿ ಹಚ್ಚಿಕೊಂಡ ದಂಪತಿ; ಪ್ರಾಣಾಪಾಯದಿಂದ ಪಾರು
ಸುಪ್ರೀಂ ಕೋರ್ಟ್​ ಎದುರು ಬೆಂಕಿ ಹಚ್ಚಿಕೊಂಡ ದಂಪತಿ
TV9 Web
| Edited By: |

Updated on: Aug 16, 2021 | 5:58 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಸುಪ್ರೀಂ ಕೋರ್ಟ್ ಮುಂಭಾಗದಲ್ಲಿ ಗಂಡ-ಹೆಂಡತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ಆಘಾತಕಾರಿ ಘಟನೆ ಇಂದು ಬೆಳಗ್ಗೆ ನಡೆದಿದೆ. ಭಗವಾನ್ ದಾಸ್ ರಸ್ತೆಯಲ್ಲಿರುವ ಸುಪ್ರೀಂ ಕೋರ್ಟ್​ ಕಾಂಪ್ಲೆಕ್ಸ್​ ಎದುರಲ್ಲೇ ಗಂಡ-ಹೆಂಡತಿ ಬೆಂಕಿ ಹಚ್ಚಿಕೊಂಡಿದ್ದಾರೆ. ಹೀಗೆ ಬೆಂಕಿ ಹಚ್ಚಿಕೊಳ್ಳಲು ಕಾರಣವೇನೆಂಬ ಬಗ್ಗೆ ಇನ್ನೂ ತನಿಖೆ ನಡೆಯಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇಬ್ಬರು ಕೋರ್ಟ್​ನ ಗೇಟ್ ಬಳಿ ಬೆಂಕಿ ಹಚ್ಚಿಕೊಂಡಿದ್ದು ಕಂಡಕೂಡಲೆ ಸೆಕ್ಯುರಿಟಿ ಸಿಬ್ಬಂದಿ ಬ್ಲಾಂಕೆಟ್ ಅನ್ನು ತೆಗೆದುಕೊಂಡು ಓಡಿ ಹೋಗಿ ಬೆಂಕಿ ಆರಿಸಿದ್ದಾರೆ. ಗಾಯಗೊಂಡಿದ್ದ ಅವರಿಬ್ಬರನ್ನೂ ಪೊಲೀಸ್ ವ್ಯಾನ್​ನಲ್ಲಿ ರಾಮ್ ಮನೋಹರ್ ಲೂಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಬ್ಬರ ಮೈಮೇಲೆ ಸಾಕಷ್ಟು ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಯಾವ ಕಾರಣಕ್ಕಾಗಿ ಆ ಇಬ್ಬರು ಬೆಂಕಿ ಹಚ್ಚಿಕೊಂಡರು ಎಂಬ ವಿಚಾರ ಇನ್ನೂ ತಿಳಿದುಬಂದಿಲ್ಲ. ಆ ಇಬ್ಬರ ಹಿನ್ನೆಲೆಯ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಅವರ ಬಳಿಯಿದ್ದ ಐಡಿ ಕಾರ್ಡ್​ನಿಂದ ಅವರಿಬ್ಬರೂ ಗಂಡ-ಹೆಂಡತಿ ಎಂಬುದು ಗೊತ್ತಾಗಿದೆ. ಸುಪ್ರೀಂ ಕೋರ್ಟ್​ ಆವರಣದ ಒಳಗೆ ಹೋಗಲು ಐಡಿ ಕಾರ್ಡ್ ತೋರಿಸಿದ್ದ ಅವರಿಬ್ಬರಿಗೂ ಸೆಕ್ಯುರಿಟಿ ಸಿಬ್ಬಂದಿ ಒಳಗೆ ಹೋಗಲು ಬಿಟ್ಟಿರಲಿಲ್ಲ. ಅದಾದ ಬಳಿ ಅವರು ಬೆಂಕಿ ಹಚ್ಚಿಕೊಂಡಿದ್ದರು.

ಇದನ್ನೂ ಓದಿ: Crime News: ಪ್ರೀತಿಗಾಗಿ ಗೆಳೆಯನ ತಲೆಯನ್ನೇ ಕತ್ತರಿಸಿದ 17 ವರ್ಷದ ಯುವಕ; ತ್ರಿಕೋನ ಪ್ರೇಮಕತೆಯ ದುರಂತ ಅಂತ್ಯ

Murder: ಇದು ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಕತೆ!; ಸೇಡಿಗಾಗಿ ಹನಿಮೂನ್​ನಲ್ಲೇ ಹೆಂಡತಿಯನ್ನು ಕೊಂದ ಗಂಡ

(Crime News: Man and woman set themselves on fire outside Supreme Court premises)

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ