AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸುಪ್ರೀಂ ಕೋರ್ಟ್ ಎದುರೇ ಬೆಂಕಿ ಹಚ್ಚಿಕೊಂಡ ದಂಪತಿ; ಪ್ರಾಣಾಪಾಯದಿಂದ ಪಾರು

ಯಾವ ಕಾರಣಕ್ಕಾಗಿ ಆ ಇಬ್ಬರು ಬೆಂಕಿ ಹಚ್ಚಿಕೊಂಡರು ಎಂಬ ವಿಚಾರ ಇನ್ನೂ ತಿಳಿದುಬಂದಿಲ್ಲ. ಆ ಇಬ್ಬರ ಹಿನ್ನೆಲೆಯ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Crime News: ಸುಪ್ರೀಂ ಕೋರ್ಟ್ ಎದುರೇ ಬೆಂಕಿ ಹಚ್ಚಿಕೊಂಡ ದಂಪತಿ; ಪ್ರಾಣಾಪಾಯದಿಂದ ಪಾರು
ಸುಪ್ರೀಂ ಕೋರ್ಟ್​ ಎದುರು ಬೆಂಕಿ ಹಚ್ಚಿಕೊಂಡ ದಂಪತಿ
TV9 Web
| Edited By: |

Updated on: Aug 16, 2021 | 5:58 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಸುಪ್ರೀಂ ಕೋರ್ಟ್ ಮುಂಭಾಗದಲ್ಲಿ ಗಂಡ-ಹೆಂಡತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ಆಘಾತಕಾರಿ ಘಟನೆ ಇಂದು ಬೆಳಗ್ಗೆ ನಡೆದಿದೆ. ಭಗವಾನ್ ದಾಸ್ ರಸ್ತೆಯಲ್ಲಿರುವ ಸುಪ್ರೀಂ ಕೋರ್ಟ್​ ಕಾಂಪ್ಲೆಕ್ಸ್​ ಎದುರಲ್ಲೇ ಗಂಡ-ಹೆಂಡತಿ ಬೆಂಕಿ ಹಚ್ಚಿಕೊಂಡಿದ್ದಾರೆ. ಹೀಗೆ ಬೆಂಕಿ ಹಚ್ಚಿಕೊಳ್ಳಲು ಕಾರಣವೇನೆಂಬ ಬಗ್ಗೆ ಇನ್ನೂ ತನಿಖೆ ನಡೆಯಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇಬ್ಬರು ಕೋರ್ಟ್​ನ ಗೇಟ್ ಬಳಿ ಬೆಂಕಿ ಹಚ್ಚಿಕೊಂಡಿದ್ದು ಕಂಡಕೂಡಲೆ ಸೆಕ್ಯುರಿಟಿ ಸಿಬ್ಬಂದಿ ಬ್ಲಾಂಕೆಟ್ ಅನ್ನು ತೆಗೆದುಕೊಂಡು ಓಡಿ ಹೋಗಿ ಬೆಂಕಿ ಆರಿಸಿದ್ದಾರೆ. ಗಾಯಗೊಂಡಿದ್ದ ಅವರಿಬ್ಬರನ್ನೂ ಪೊಲೀಸ್ ವ್ಯಾನ್​ನಲ್ಲಿ ರಾಮ್ ಮನೋಹರ್ ಲೂಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಬ್ಬರ ಮೈಮೇಲೆ ಸಾಕಷ್ಟು ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಯಾವ ಕಾರಣಕ್ಕಾಗಿ ಆ ಇಬ್ಬರು ಬೆಂಕಿ ಹಚ್ಚಿಕೊಂಡರು ಎಂಬ ವಿಚಾರ ಇನ್ನೂ ತಿಳಿದುಬಂದಿಲ್ಲ. ಆ ಇಬ್ಬರ ಹಿನ್ನೆಲೆಯ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಅವರ ಬಳಿಯಿದ್ದ ಐಡಿ ಕಾರ್ಡ್​ನಿಂದ ಅವರಿಬ್ಬರೂ ಗಂಡ-ಹೆಂಡತಿ ಎಂಬುದು ಗೊತ್ತಾಗಿದೆ. ಸುಪ್ರೀಂ ಕೋರ್ಟ್​ ಆವರಣದ ಒಳಗೆ ಹೋಗಲು ಐಡಿ ಕಾರ್ಡ್ ತೋರಿಸಿದ್ದ ಅವರಿಬ್ಬರಿಗೂ ಸೆಕ್ಯುರಿಟಿ ಸಿಬ್ಬಂದಿ ಒಳಗೆ ಹೋಗಲು ಬಿಟ್ಟಿರಲಿಲ್ಲ. ಅದಾದ ಬಳಿ ಅವರು ಬೆಂಕಿ ಹಚ್ಚಿಕೊಂಡಿದ್ದರು.

ಇದನ್ನೂ ಓದಿ: Crime News: ಪ್ರೀತಿಗಾಗಿ ಗೆಳೆಯನ ತಲೆಯನ್ನೇ ಕತ್ತರಿಸಿದ 17 ವರ್ಷದ ಯುವಕ; ತ್ರಿಕೋನ ಪ್ರೇಮಕತೆಯ ದುರಂತ ಅಂತ್ಯ

Murder: ಇದು ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಕತೆ!; ಸೇಡಿಗಾಗಿ ಹನಿಮೂನ್​ನಲ್ಲೇ ಹೆಂಡತಿಯನ್ನು ಕೊಂದ ಗಂಡ

(Crime News: Man and woman set themselves on fire outside Supreme Court premises)

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ