AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸುಪ್ರೀಂ ಕೋರ್ಟ್ ಎದುರೇ ಬೆಂಕಿ ಹಚ್ಚಿಕೊಂಡ ದಂಪತಿ; ಪ್ರಾಣಾಪಾಯದಿಂದ ಪಾರು

ಯಾವ ಕಾರಣಕ್ಕಾಗಿ ಆ ಇಬ್ಬರು ಬೆಂಕಿ ಹಚ್ಚಿಕೊಂಡರು ಎಂಬ ವಿಚಾರ ಇನ್ನೂ ತಿಳಿದುಬಂದಿಲ್ಲ. ಆ ಇಬ್ಬರ ಹಿನ್ನೆಲೆಯ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Crime News: ಸುಪ್ರೀಂ ಕೋರ್ಟ್ ಎದುರೇ ಬೆಂಕಿ ಹಚ್ಚಿಕೊಂಡ ದಂಪತಿ; ಪ್ರಾಣಾಪಾಯದಿಂದ ಪಾರು
ಸುಪ್ರೀಂ ಕೋರ್ಟ್​ ಎದುರು ಬೆಂಕಿ ಹಚ್ಚಿಕೊಂಡ ದಂಪತಿ
TV9 Web
| Edited By: |

Updated on: Aug 16, 2021 | 5:58 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಸುಪ್ರೀಂ ಕೋರ್ಟ್ ಮುಂಭಾಗದಲ್ಲಿ ಗಂಡ-ಹೆಂಡತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ಆಘಾತಕಾರಿ ಘಟನೆ ಇಂದು ಬೆಳಗ್ಗೆ ನಡೆದಿದೆ. ಭಗವಾನ್ ದಾಸ್ ರಸ್ತೆಯಲ್ಲಿರುವ ಸುಪ್ರೀಂ ಕೋರ್ಟ್​ ಕಾಂಪ್ಲೆಕ್ಸ್​ ಎದುರಲ್ಲೇ ಗಂಡ-ಹೆಂಡತಿ ಬೆಂಕಿ ಹಚ್ಚಿಕೊಂಡಿದ್ದಾರೆ. ಹೀಗೆ ಬೆಂಕಿ ಹಚ್ಚಿಕೊಳ್ಳಲು ಕಾರಣವೇನೆಂಬ ಬಗ್ಗೆ ಇನ್ನೂ ತನಿಖೆ ನಡೆಯಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇಬ್ಬರು ಕೋರ್ಟ್​ನ ಗೇಟ್ ಬಳಿ ಬೆಂಕಿ ಹಚ್ಚಿಕೊಂಡಿದ್ದು ಕಂಡಕೂಡಲೆ ಸೆಕ್ಯುರಿಟಿ ಸಿಬ್ಬಂದಿ ಬ್ಲಾಂಕೆಟ್ ಅನ್ನು ತೆಗೆದುಕೊಂಡು ಓಡಿ ಹೋಗಿ ಬೆಂಕಿ ಆರಿಸಿದ್ದಾರೆ. ಗಾಯಗೊಂಡಿದ್ದ ಅವರಿಬ್ಬರನ್ನೂ ಪೊಲೀಸ್ ವ್ಯಾನ್​ನಲ್ಲಿ ರಾಮ್ ಮನೋಹರ್ ಲೂಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಬ್ಬರ ಮೈಮೇಲೆ ಸಾಕಷ್ಟು ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಯಾವ ಕಾರಣಕ್ಕಾಗಿ ಆ ಇಬ್ಬರು ಬೆಂಕಿ ಹಚ್ಚಿಕೊಂಡರು ಎಂಬ ವಿಚಾರ ಇನ್ನೂ ತಿಳಿದುಬಂದಿಲ್ಲ. ಆ ಇಬ್ಬರ ಹಿನ್ನೆಲೆಯ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಅವರ ಬಳಿಯಿದ್ದ ಐಡಿ ಕಾರ್ಡ್​ನಿಂದ ಅವರಿಬ್ಬರೂ ಗಂಡ-ಹೆಂಡತಿ ಎಂಬುದು ಗೊತ್ತಾಗಿದೆ. ಸುಪ್ರೀಂ ಕೋರ್ಟ್​ ಆವರಣದ ಒಳಗೆ ಹೋಗಲು ಐಡಿ ಕಾರ್ಡ್ ತೋರಿಸಿದ್ದ ಅವರಿಬ್ಬರಿಗೂ ಸೆಕ್ಯುರಿಟಿ ಸಿಬ್ಬಂದಿ ಒಳಗೆ ಹೋಗಲು ಬಿಟ್ಟಿರಲಿಲ್ಲ. ಅದಾದ ಬಳಿ ಅವರು ಬೆಂಕಿ ಹಚ್ಚಿಕೊಂಡಿದ್ದರು.

ಇದನ್ನೂ ಓದಿ: Crime News: ಪ್ರೀತಿಗಾಗಿ ಗೆಳೆಯನ ತಲೆಯನ್ನೇ ಕತ್ತರಿಸಿದ 17 ವರ್ಷದ ಯುವಕ; ತ್ರಿಕೋನ ಪ್ರೇಮಕತೆಯ ದುರಂತ ಅಂತ್ಯ

Murder: ಇದು ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಕತೆ!; ಸೇಡಿಗಾಗಿ ಹನಿಮೂನ್​ನಲ್ಲೇ ಹೆಂಡತಿಯನ್ನು ಕೊಂದ ಗಂಡ

(Crime News: Man and woman set themselves on fire outside Supreme Court premises)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ