AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹುಡುಗಿಗೆ ಮೆಸೇಜ್ ಕಳಿಸಿದ್ದಕ್ಕೆ ಕೇರಳದ ಯುವಕನ ಕತ್ತು ಹಿಸುಕಿ ಕೊಲೆ

ನಿನ್ನೆ ರಾತ್ರಿ ವಿಪಿನ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಆತನನ್ನು ಥಳಿಸಿತ್ತು. ಹುಡುಗಿಗೆ ಮಸೇಜ್ ಕಳಿಸಿದ್ದರಿಂದ ಈ ಕೊಲೆ ನಡೆಸಿದ್ದು, ಇದರ ಹಿಂದೆ ಬೇರಾವ ಕಾರಣವೂ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Crime News: ಹುಡುಗಿಗೆ ಮೆಸೇಜ್ ಕಳಿಸಿದ್ದಕ್ಕೆ ಕೇರಳದ ಯುವಕನ ಕತ್ತು ಹಿಸುಕಿ ಕೊಲೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 12, 2021 | 7:21 PM

Share

ಅಲಪ್ಪುಳ: ಹುಡುಗಿಯೊಬ್ಬಳಿಗೆ ಮೆಸೇಜ್ ಕಳಿಸಿದ ಎಂಬ ಕಾರಣಕ್ಕೆ 7 ಜನರ ಗುಂಪೊಂದು ಯುವಕನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕೇರಳದ ಪೂಚಕ್ಕಲ್ ಎಂಬಲ್ಲಿ ನಡೆದಿದೆ. 37 ವರ್ಷದ ವಿಪಿನ್ ಲಾಲ್ ಹುಡುಗಿಯೊಬ್ಬಳಿಗೆ ಅಸಭ್ಯವಾಗಿ ಮೆಸೇಜ್ ಮಾಡಿದ್ದ. ಈ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ರಾತ್ರಿ ವಿಪಿನ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಆತನನ್ನು ಥಳಿಸಿತ್ತು. ಹುಡುಗಿಗೆ ಮಸೇಜ್ ಕಳಿಸಿದ್ದರಿಂದ ಈ ಕೊಲೆ ನಡೆಸಿದ್ದು, ಇದರ ಹಿಂದೆ ಬೇರಾವ ಕಾರಣವೂ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹುಡುಗಿಗೆ ಕಳುಹಿಸಿದ ಮೆಸೇಜ್ ನೋಡಿ ಕೋಪಗೊಂಡ ಆಕೆಯ ಸಂಬಂಧಿಕರು ನಿನ್ನೆ ನಡು ರಸ್ತೆಯಲ್ಲಿ ವಿಪಿನ್ ಲಾಲ್​ನನ್ನು ಅಡ್ಡ ಹಾಕಿದ್ದರು. ರಸ್ತೆಯಲ್ಲೇ ಥಳಿಸಿದ ಆ ಗುಂಪು ಬಳಿಕ ಆತನ ಉಸಿರುಗಟ್ಟಿಸಿ ಕೊಂದಿದ್ದಾರೆ.

ಹುಡುಗಿಗೆ ಏನು ಮೆಸೇಜ್ ಕಳುಹಿಸಿದ ಕಾರಣಕ್ಕೆ ಈ ಗಲಾಟೆ ನಡೆದಿದೆ ಎಂಬುದು ಇನ್ನೂ ಖಚಿತವಾಗಿಲ್ಲ. ಎರಡೂ ಕುಟುಂಬಗಳು ಈ ಹಿಂದಿನಿಂದಲೂ ಪರಿಚಿತರಾಗಿದ್ದರು ಎನ್ನಲಾಗಿದೆ. ಮೆಸೇಜ್​ಗೆ ಸಂಬಂಧಿಸಿದ ಗಲಾಟೆಯೇ ಈ ಹತ್ಯೆಗೆ ಕಾರಣ ಎನ್ನಲಾಗಿದೆ. ಈ ಕೊಲೆಯ ಹಿಂದಿರುವ ಇನ್ನೂ ಕೆಲವು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.

ಇದನ್ನೂ ಓದಿ: Crime News: ದರೋಡೆ ಬಳಿಕ ಮನೆಯವರ ಕಾಲಿಗೆ ಬಿದ್ದ ಕಳ್ಳರು; 6 ತಿಂಗಳಲ್ಲಿ ಕದ್ದ ಹಣ ವಾಪಾಸ್ ಕೊಡುತ್ತೇವೆಂದು ಪರಾರಿ!

Crime News: ಇಬ್ಬರು ಹೆಣ್ಣುಮಕ್ಕಳನ್ನು ಬಾವಿಗೆ ತಳ್ಳಿ, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ!

(Crime News Man Hacked to Death in Alappuzha following Dispute over Sending Message to Girl)

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!