AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬ್ಲಾಕ್ ಮ್ಯಾಜಿಕ್ ಶಂಕೆ; ವೃದ್ಧ ದಂಪತಿಯನ್ನು ಕೊಂದು, ಗುಡಿಸಲಲ್ಲಿ ಸುಟ್ಟು ಹಾಕಿದ ಯುವಕ

Murder News Today: ಮೃತ ದಂಪತಿಗಳು ಮಾಡಿದ ‘ಬ್ಲಾಕ್ ಮ್ಯಾಜಿಕ್’ನಿಂದಾಗಿ ತನ್ನ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿ ಅನುಮಾನದಿಂದ ಆ ಯುವಕ ಈ ಕೊಲೆ ಮಾಡಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

Crime News: ಬ್ಲಾಕ್ ಮ್ಯಾಜಿಕ್ ಶಂಕೆ; ವೃದ್ಧ ದಂಪತಿಯನ್ನು ಕೊಂದು, ಗುಡಿಸಲಲ್ಲಿ ಸುಟ್ಟು ಹಾಕಿದ ಯುವಕ
ಸಾಂಕೇತಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 18, 2022 | 2:06 PM

Share

ಜಬಲ್‌ಪುರ: ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ ಹಳ್ಳಿಯೊಂದರ ಬಳಿ ವೃದ್ಧ ದಂಪತಿಯನ್ನು ಅವರ ಗುಡಿಸಲಿನಲ್ಲಿ ಬೆಂಕಿ ಹಚ್ಚಿ ಕೊಲ್ಲಲಾಗಿದೆ. ಅವರ ದೇಹದ ಸುಟ್ಟ ಅವಶೇಷಗಳು ಪತ್ತೆಯಾದ ಕೆಲವೇ ದಿನಗಳಲ್ಲಿ ‘ಬ್ಲ್ಯಾಕ್ ಮ್ಯಾಜಿಕ್’ (Black Magic) ಅಭ್ಯಾಸ ಮಾಡಿದ ಶಂಕೆಯ ಮೇಲೆ ಅವರನ್ನು ಕೊಂದ ಆರೋಪದ ಮೇಲೆ ಅವರ ಸಂಬಂಧಿಯಾದ 27 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ (Murder) ಮಾಡಿದ ಆರೋಪಿಯನ್ನು ದಯಾರಾಮ್ ಕುಲಸ್ತೆ ಎಂದು ಗುರುತಿಸಲಾಗಿದ್ದು, ಆತ ಮೃತ ಸುಮೇರ್ ಸಿಂಗ್ ಕುಲಸ್ತೆ (60) ಮತ್ತು ಅವರ ಪತ್ನಿ ಸಿಯಾಬಾಯಿ (55) ಅವರ ಸೋದರಳಿಯನಾಗಿದ್ದಾನೆ.

ಆರೋಪಿಯನ್ನು ಸೋಮವಾರ ಬರೇಲಾ ಪೊಲೀಸ್ ಠಾಣೆ ವ್ಯಾಪ್ತಿಯ ಹಿನೋಟಿಯಾ ಗ್ರಾಮದಲ್ಲಿ ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಶಿವೇಂದ್ರ ಸಿಂಗ್ ತಿಳಿಸಿದ್ದಾರೆ. ಜನವರಿ 9 ಮತ್ತು 10ರ ಮಧ್ಯರಾತ್ರಿ ಚೌರೈ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಆರೋಪಿ ಸುಮೇರ್ ಸಿಂಗ್ ಮತ್ತು ಅವರ ಪತ್ನಿಯನ್ನು ಹರಿತವಾದ ಉಪಕರಣದಿಂದ ಕೊಂದು ಅವರ ಗುಡಿಸಲಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮೃತ ದಂಪತಿಗಳು ಮಾಡಿದ ‘ಬ್ಲಾಕ್ ಮ್ಯಾಜಿಕ್’ನಿಂದಾಗಿ ತನ್ನ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿ ಅನುಮಾನದಿಂದ ಆ ಯುವಕ ಈ ಕೊಲೆ ಮಾಡಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ದಯಾರಾಮ್ ತನ್ನ ತಂದೆಯ ಒಡೆತನದ ಭೂಮಿಯನ್ನು ಅತಿಕ್ರಮಣ ಮಾಡಿದ ಆರೋಪದ ಸುಮೇರ್ ಸಿಂಗ್ ವಿರುದ್ಧವೂ ಅವರು ದ್ವೇಷವನ್ನು ಹೊಂದಿದ್ದರು ಎನ್ನಲಾಗಿದೆ.

ತನಿಖೆಯ ಪ್ರಕಾರ, ಜನವರಿ 9ರಂದು ರಾತ್ರಿ ಚೌರೈ ಗ್ರಾಮದಲ್ಲಿದ್ದ ದಯಾರಾಮ್ ಕುಲಸ್ತೆ ಈ ಘಟನೆಯ ನಂತರ ನಾಪತ್ತೆಯಾಗಿದ್ದ ಎಂದು ಪೊಲೀಸ್ ತಿಳಿಸಿದ್ದಾರೆ. ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Murder: ಆಲ್ಕೋಹಾಲ್​ ಖರೀದಿಸಲು ಹಣ ಕೊಡದ ಗರ್ಭಿಣಿ ಹೆಂಡತಿಯನ್ನು ಕೊಂದ ಗಂಡ

Murder: ಮರುಮದುವೆಯಾಗಲು ಮುಂದಾದ 80 ವರ್ಷದ ತಂದೆಯನ್ನು ಕೊಚ್ಚಿ ಕೊಂದ ಮಗ!

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್