AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ

Crime News Today | ರಾಜು ನಂದೇಶ್ವರ ಕೊಲೆಯಾದ ಯುವಕ. ಆತನ ಜೊತೆ ಜಗಳವಾಡಿದ್ದ ದೇವಾಂಶ್ ವಘೋಡೆ ಕೋಪದಲ್ಲಿ ತನ್ನ ರೂಂ ಮೇಟ್​ ಅನ್ನೇ ಹತ್ಯೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ರಸ್ತೆ ಬದಿ ಬಿಸಾಡಿದ್ದಾನೆ.

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Aug 09, 2021 | 5:10 PM

Share

ನಾಗ್ಪುರ: ಸಣ್ಣ ವಿಷಯಕ್ಕೆ ಶುರುವಾದ ಜಗಳ ಮಿತಿ ಮೀರಿ ಕೊನೆಗೆ ತನ್ನ ರೂಂ ಮೇಟ್ ಅನ್ನೇ ಗೆಳೆಯ ಕೊಂದಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಬಳಿ ಇರುವ ಡಾಬಾ ಎಂಬಲ್ಲಿ ನಡೆದಿದೆ. ಶನಿವಾರ ರಾತ್ರಿ ಗೆಳೆಯರಿಬ್ಬರ ನಡುವೆ ಜೋರಾಗಿ ಜಗಳವಾಗಿದೆ. ಈ ವೇಳೆ ಕೋಪದಲ್ಲಿ ಒಬ್ಬ ಇನ್ನೊಬ್ಬನನ್ನು ಕೊಲೆ ಮಾಡಿ, ಆತನ ಹೆಣವನ್ನು ಪ್ಯಾಕ್ ಮಾಡಿ ರಸ್ತೆ ಬದಿ ಎಸೆದು ಬಂದಿದ್ದಾನೆ. ನಂತರ ಕೊಲೆಯ ಸುಳಿವು ಸಿಗಬಾರದು ಎಂದು ರಾತ್ರಿಯಿಡೀ ಮನೆಯನ್ನು ಒರೆಸಿ, ಕ್ಲೀನ್ ಮಾಡಿ ಬೆಳಗಿನ ಜಾವ ಮಲಗಿದ್ದಾನೆ.

ರಾಜು ನಂದೇಶ್ವರ ಕೊಲೆಯಾದ ಯುವಕ. ಆತನ ಜೊತೆ ಶನಿವಾರ ರಾತ್ರಿ ಜಗಳವಾಡಿದ್ದ ದೇವಾಂಶ್ ವಘೋಡೆ ಕೋಪದಲ್ಲಿ ತನ್ನ ರೂಂ ಮೇಟ್​ ಅನ್ನೇ ಹತ್ಯೆ ಮಾಡಿದ್ದಾನೆ. ಚಾಕುವಿನಿಂದ ರಾಜುವಿಗೆ ಇರಿದು ಕೊಲೆ ಮಾಡಿದ ದೇವಾಂಶ್​ ಬಳಿಕ ಆತನ ತಲೆಗೆ ಚೂಪಾದ ವಸ್ತುವಿನಿಂದ ಹೊಡೆದಿದ್ದಾನೆ. ಬಳಿಕ ಆ ದೇಹವನ್ನು ಚೀಲದಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಬಿಸಾಡಿ ಬಂದಿದ್ದಾನೆ. ರೂಂ ತುಂಬ ರಕ್ತವಾಗಿದ್ದರಿಂದ ಬೆಳಗಿನ ಜಾವದವರೆಗೂ ಮನೆಯನ್ನು ಕ್ಲೀನ್ ಮಾಡಿದ್ದಾನೆ. ನಂತರ ನಿದ್ರೆ ಮಾಡಿದ್ದಾನೆ.

ರಾಜು ಮತ್ತು ದೇವಾಂಶ್ ಇಬ್ಬರೂ ಗ್ಯಾರೇಜ್ ಒಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಬೆಳಗ್ಗೆ ವಾಕಿಂಗ್ ಹೋದ ಸ್ಥಳೀಯರು ರಸ್ತೆ ಬದಿಯಲ್ಲಿ ಬಿದ್ದಿದ್ದ ಹೆಣವನ್ನು ನೋಡಿ ಸುತ್ತಮುತ್ತಲಿನವರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ವೇಳೆ ರಾಜು ಎಲ್ಲಿ ವಾಸವಾಗಿದ್ದ ಎಂಬ ಮಾಹಿತಿಯನ್ನು ಕಲೆಹಾಕಿದ ಪೊಲೀಸರು ದೇವಾಂಶ್​ನನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಕೊಲೆಯ ಸಂಗತಿ ಬಯಲಾಗಿದೆ.

ಇದನ್ನೂ ಓದಿ: Murder: ದಾವಣಗೆರೆ; ಅಕ್ರಮ ಸಂಬಂಧ ಮುಚ್ಚಿಡಲು ಪ್ರಿಯಕರನ ಜೊತೆ ಸೇರಿ ಹೆಂಡತಿಯಿಂದಲೇ ಗಂಡನ ಕೊಲೆ

Murder: ಇದು ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಕತೆ!; ಸೇಡಿಗಾಗಿ ಹನಿಮೂನ್​ನಲ್ಲೇ ಹೆಂಡತಿಯನ್ನು ಕೊಂದ ಗಂಡ

(Crime News Mechanic Murders Roommate Dumps Dead Body Sleeps After Cleaning Room In Nagpur)

Published On - 5:10 pm, Mon, 9 August 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!