AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ

Crime News Today | ರಾಜು ನಂದೇಶ್ವರ ಕೊಲೆಯಾದ ಯುವಕ. ಆತನ ಜೊತೆ ಜಗಳವಾಡಿದ್ದ ದೇವಾಂಶ್ ವಘೋಡೆ ಕೋಪದಲ್ಲಿ ತನ್ನ ರೂಂ ಮೇಟ್​ ಅನ್ನೇ ಹತ್ಯೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ರಸ್ತೆ ಬದಿ ಬಿಸಾಡಿದ್ದಾನೆ.

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 09, 2021 | 5:10 PM

ನಾಗ್ಪುರ: ಸಣ್ಣ ವಿಷಯಕ್ಕೆ ಶುರುವಾದ ಜಗಳ ಮಿತಿ ಮೀರಿ ಕೊನೆಗೆ ತನ್ನ ರೂಂ ಮೇಟ್ ಅನ್ನೇ ಗೆಳೆಯ ಕೊಂದಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಬಳಿ ಇರುವ ಡಾಬಾ ಎಂಬಲ್ಲಿ ನಡೆದಿದೆ. ಶನಿವಾರ ರಾತ್ರಿ ಗೆಳೆಯರಿಬ್ಬರ ನಡುವೆ ಜೋರಾಗಿ ಜಗಳವಾಗಿದೆ. ಈ ವೇಳೆ ಕೋಪದಲ್ಲಿ ಒಬ್ಬ ಇನ್ನೊಬ್ಬನನ್ನು ಕೊಲೆ ಮಾಡಿ, ಆತನ ಹೆಣವನ್ನು ಪ್ಯಾಕ್ ಮಾಡಿ ರಸ್ತೆ ಬದಿ ಎಸೆದು ಬಂದಿದ್ದಾನೆ. ನಂತರ ಕೊಲೆಯ ಸುಳಿವು ಸಿಗಬಾರದು ಎಂದು ರಾತ್ರಿಯಿಡೀ ಮನೆಯನ್ನು ಒರೆಸಿ, ಕ್ಲೀನ್ ಮಾಡಿ ಬೆಳಗಿನ ಜಾವ ಮಲಗಿದ್ದಾನೆ.

ರಾಜು ನಂದೇಶ್ವರ ಕೊಲೆಯಾದ ಯುವಕ. ಆತನ ಜೊತೆ ಶನಿವಾರ ರಾತ್ರಿ ಜಗಳವಾಡಿದ್ದ ದೇವಾಂಶ್ ವಘೋಡೆ ಕೋಪದಲ್ಲಿ ತನ್ನ ರೂಂ ಮೇಟ್​ ಅನ್ನೇ ಹತ್ಯೆ ಮಾಡಿದ್ದಾನೆ. ಚಾಕುವಿನಿಂದ ರಾಜುವಿಗೆ ಇರಿದು ಕೊಲೆ ಮಾಡಿದ ದೇವಾಂಶ್​ ಬಳಿಕ ಆತನ ತಲೆಗೆ ಚೂಪಾದ ವಸ್ತುವಿನಿಂದ ಹೊಡೆದಿದ್ದಾನೆ. ಬಳಿಕ ಆ ದೇಹವನ್ನು ಚೀಲದಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಬಿಸಾಡಿ ಬಂದಿದ್ದಾನೆ. ರೂಂ ತುಂಬ ರಕ್ತವಾಗಿದ್ದರಿಂದ ಬೆಳಗಿನ ಜಾವದವರೆಗೂ ಮನೆಯನ್ನು ಕ್ಲೀನ್ ಮಾಡಿದ್ದಾನೆ. ನಂತರ ನಿದ್ರೆ ಮಾಡಿದ್ದಾನೆ.

ರಾಜು ಮತ್ತು ದೇವಾಂಶ್ ಇಬ್ಬರೂ ಗ್ಯಾರೇಜ್ ಒಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಬೆಳಗ್ಗೆ ವಾಕಿಂಗ್ ಹೋದ ಸ್ಥಳೀಯರು ರಸ್ತೆ ಬದಿಯಲ್ಲಿ ಬಿದ್ದಿದ್ದ ಹೆಣವನ್ನು ನೋಡಿ ಸುತ್ತಮುತ್ತಲಿನವರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ವೇಳೆ ರಾಜು ಎಲ್ಲಿ ವಾಸವಾಗಿದ್ದ ಎಂಬ ಮಾಹಿತಿಯನ್ನು ಕಲೆಹಾಕಿದ ಪೊಲೀಸರು ದೇವಾಂಶ್​ನನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಕೊಲೆಯ ಸಂಗತಿ ಬಯಲಾಗಿದೆ.

ಇದನ್ನೂ ಓದಿ: Murder: ದಾವಣಗೆರೆ; ಅಕ್ರಮ ಸಂಬಂಧ ಮುಚ್ಚಿಡಲು ಪ್ರಿಯಕರನ ಜೊತೆ ಸೇರಿ ಹೆಂಡತಿಯಿಂದಲೇ ಗಂಡನ ಕೊಲೆ

Murder: ಇದು ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಕತೆ!; ಸೇಡಿಗಾಗಿ ಹನಿಮೂನ್​ನಲ್ಲೇ ಹೆಂಡತಿಯನ್ನು ಕೊಂದ ಗಂಡ

(Crime News Mechanic Murders Roommate Dumps Dead Body Sleeps After Cleaning Room In Nagpur)

Published On - 5:10 pm, Mon, 9 August 21

ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ