AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ

Crime News Today | ರಾಜು ನಂದೇಶ್ವರ ಕೊಲೆಯಾದ ಯುವಕ. ಆತನ ಜೊತೆ ಜಗಳವಾಡಿದ್ದ ದೇವಾಂಶ್ ವಘೋಡೆ ಕೋಪದಲ್ಲಿ ತನ್ನ ರೂಂ ಮೇಟ್​ ಅನ್ನೇ ಹತ್ಯೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ರಸ್ತೆ ಬದಿ ಬಿಸಾಡಿದ್ದಾನೆ.

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 09, 2021 | 5:10 PM

Share

ನಾಗ್ಪುರ: ಸಣ್ಣ ವಿಷಯಕ್ಕೆ ಶುರುವಾದ ಜಗಳ ಮಿತಿ ಮೀರಿ ಕೊನೆಗೆ ತನ್ನ ರೂಂ ಮೇಟ್ ಅನ್ನೇ ಗೆಳೆಯ ಕೊಂದಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಬಳಿ ಇರುವ ಡಾಬಾ ಎಂಬಲ್ಲಿ ನಡೆದಿದೆ. ಶನಿವಾರ ರಾತ್ರಿ ಗೆಳೆಯರಿಬ್ಬರ ನಡುವೆ ಜೋರಾಗಿ ಜಗಳವಾಗಿದೆ. ಈ ವೇಳೆ ಕೋಪದಲ್ಲಿ ಒಬ್ಬ ಇನ್ನೊಬ್ಬನನ್ನು ಕೊಲೆ ಮಾಡಿ, ಆತನ ಹೆಣವನ್ನು ಪ್ಯಾಕ್ ಮಾಡಿ ರಸ್ತೆ ಬದಿ ಎಸೆದು ಬಂದಿದ್ದಾನೆ. ನಂತರ ಕೊಲೆಯ ಸುಳಿವು ಸಿಗಬಾರದು ಎಂದು ರಾತ್ರಿಯಿಡೀ ಮನೆಯನ್ನು ಒರೆಸಿ, ಕ್ಲೀನ್ ಮಾಡಿ ಬೆಳಗಿನ ಜಾವ ಮಲಗಿದ್ದಾನೆ.

ರಾಜು ನಂದೇಶ್ವರ ಕೊಲೆಯಾದ ಯುವಕ. ಆತನ ಜೊತೆ ಶನಿವಾರ ರಾತ್ರಿ ಜಗಳವಾಡಿದ್ದ ದೇವಾಂಶ್ ವಘೋಡೆ ಕೋಪದಲ್ಲಿ ತನ್ನ ರೂಂ ಮೇಟ್​ ಅನ್ನೇ ಹತ್ಯೆ ಮಾಡಿದ್ದಾನೆ. ಚಾಕುವಿನಿಂದ ರಾಜುವಿಗೆ ಇರಿದು ಕೊಲೆ ಮಾಡಿದ ದೇವಾಂಶ್​ ಬಳಿಕ ಆತನ ತಲೆಗೆ ಚೂಪಾದ ವಸ್ತುವಿನಿಂದ ಹೊಡೆದಿದ್ದಾನೆ. ಬಳಿಕ ಆ ದೇಹವನ್ನು ಚೀಲದಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಬಿಸಾಡಿ ಬಂದಿದ್ದಾನೆ. ರೂಂ ತುಂಬ ರಕ್ತವಾಗಿದ್ದರಿಂದ ಬೆಳಗಿನ ಜಾವದವರೆಗೂ ಮನೆಯನ್ನು ಕ್ಲೀನ್ ಮಾಡಿದ್ದಾನೆ. ನಂತರ ನಿದ್ರೆ ಮಾಡಿದ್ದಾನೆ.

ರಾಜು ಮತ್ತು ದೇವಾಂಶ್ ಇಬ್ಬರೂ ಗ್ಯಾರೇಜ್ ಒಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಬೆಳಗ್ಗೆ ವಾಕಿಂಗ್ ಹೋದ ಸ್ಥಳೀಯರು ರಸ್ತೆ ಬದಿಯಲ್ಲಿ ಬಿದ್ದಿದ್ದ ಹೆಣವನ್ನು ನೋಡಿ ಸುತ್ತಮುತ್ತಲಿನವರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ವೇಳೆ ರಾಜು ಎಲ್ಲಿ ವಾಸವಾಗಿದ್ದ ಎಂಬ ಮಾಹಿತಿಯನ್ನು ಕಲೆಹಾಕಿದ ಪೊಲೀಸರು ದೇವಾಂಶ್​ನನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಕೊಲೆಯ ಸಂಗತಿ ಬಯಲಾಗಿದೆ.

ಇದನ್ನೂ ಓದಿ: Murder: ದಾವಣಗೆರೆ; ಅಕ್ರಮ ಸಂಬಂಧ ಮುಚ್ಚಿಡಲು ಪ್ರಿಯಕರನ ಜೊತೆ ಸೇರಿ ಹೆಂಡತಿಯಿಂದಲೇ ಗಂಡನ ಕೊಲೆ

Murder: ಇದು ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಕತೆ!; ಸೇಡಿಗಾಗಿ ಹನಿಮೂನ್​ನಲ್ಲೇ ಹೆಂಡತಿಯನ್ನು ಕೊಂದ ಗಂಡ

(Crime News Mechanic Murders Roommate Dumps Dead Body Sleeps After Cleaning Room In Nagpur)

Published On - 5:10 pm, Mon, 9 August 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್