AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮೊಬೈಲ್ ಟವರ್​ಗಳಿಂದ ಚಿಪ್ ಕದಿಯುತ್ತಿದ್ದ ವ್ಯಕ್ತಿ ಬಂಧನ

Bengaluru News: ಕೊರೊನಾ ಕಾಲದಲ್ಲಿ ಆತನನ್ನು ಕಂಪನಿಯಿಂದ ಗೇಟ್ ಪಾಸ್ ನೀಡಲಾಗಿತ್ತು. ಕೆಲಸದಿಂದ ಆಚೆ ಹಾಕಿದ ಕಂಪನಿಯಿಂದಲೇ ಕಳ್ಳತನ ಮಾಡಿದ್ದ. ಕಳೆದ ಆರು ತಿಂಗಳ ಹಿಂದೆ ಕೆಲಸ ಕಳೆದುಕೊಂಡಿದ್ದ ಗಂಗಾಧರ್ ಕಳ್ಳತನದಲ್ಲಿ ತೊಡಗಿಸಿಕೊಂಡಿದ್ದ.

Crime News: ಮೊಬೈಲ್ ಟವರ್​ಗಳಿಂದ ಚಿಪ್ ಕದಿಯುತ್ತಿದ್ದ ವ್ಯಕ್ತಿ ಬಂಧನ
ಬಂಧಿತ ವ್ಯಕ್ತಿ
TV9 Web
| Edited By: |

Updated on:Oct 04, 2021 | 3:23 PM

Share

ಬೆಂಗಳೂರು: ಮೊಬೈಲ್​ ಟವರ್​ಗಳಲ್ಲಿ ಇರುವ ಚಿಪ್​ ಕದಿಯುತ್ತಿದ್ದ ಖತರ್ನಾಕ್ ಕಳ್ಳನನ್ನು ಸೆರೆ ಹಿಡಿಯಲಾಗಿದೆ. ಬೆಂಗಳೂರಿನ ಪೀಣ್ಯ ಪೊಲೀಸರಿಂದ ಗಂಗಾಧರ್​ ಎಂಬಾತನನ್ನು ಬಂಧಿಸಲಾಗಿದೆ. 25 ಲಕ್ಷ ರೂಪಾಯಿ ಮೌಲ್ಯದ 19 ಮೊಬೈಲ್ ಟವರ್ ಚಿಪ್ ವಶಕ್ಕೆ ಪಡೆಯಲಾಗಿದೆ. ಖಾಸಗಿ ಮೊಬೈಲ್ ಕಂಪೆನಿಯಲ್ಲಿ ಸೈಟ್ ಇಂಜಿನಿಯರ್ ಆಗಿದ್ದ ಗಂಗಾಧರ್ ಕದ್ದ ಚಿಪ್​ಗಳನ್ನು ನೂರಿನ್ನೂರು ರೂಪಾಯಿಗೆ ಮಾರುತ್ತಿದ್ದ ಎಂದು ತಿಳಿದುಬಂದಿದೆ.

ಗಂಗಾಧರ್ ಮೊಬೈಲ್ ಟವರ್​ಗಳಿಗೆ ಹೋಗಿ ಬೆಲೆಬಾಳೋ ಚಿಪ್ ಗಳನ್ನ ಕಳ್ಳತನ ಮಾಡ್ತಿದ್ದ. ಈ ಬಗ್ಗೆ ಮೊಬೈಲ್ ಕಂಪೆನಿಯವರು ಪೀಣ್ಯ ಠಾಣೆಗೆ ದೂರನ್ನು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರಿಂದ ಗಂಗಾಧರ್ ಬಂಧನವಾಗಿದೆ. ಐಟಿಐ ಓದಿದವನು ಎಲೆಕ್ಟ್ರಾನಿಕ್ ವಸ್ತುಗಳ ಮಾರಿ ಹಣ ಮಾಡಲು ತಂತ್ರ ಹೂಡಿದ್ದ. ಕೊರೊನಾ ಕಾಲದಲ್ಲಿ ಆತನನ್ನು ಕಂಪನಿಯಿಂದ ಗೇಟ್ ಪಾಸ್ ನೀಡಲಾಗಿತ್ತು. ಕೆಲಸದಿಂದ ಆಚೆ ಹಾಕಿದ ಕಂಪನಿಯಿಂದಲೇ ಕಳ್ಳತನ ಮಾಡಿದ್ದ. ಕಳೆದ ಆರು ತಿಂಗಳ ಹಿಂದೆ ಕೆಲಸ ಕಳೆದುಕೊಂಡಿದ್ದ ಗಂಗಾಧರ್ ಕಳ್ಳತನದಲ್ಲಿ ತೊಡಗಿಸಿಕೊಂಡಿದ್ದ.

ಟೆಲಿಕಾಂ ಕಂಪನಿಯ ಟವರ್​ಗಳ ಮ್ಯಾನೇಜ್ ಕೆಲಸ ನಿರ್ವಹಿಸುವ ಕಂಪನಿಯಲ್ಲಿ ಕೆಲಸಕ್ಕಿದ್ದ ಗಂಗಾಧರ್ ಟವರ್​ಗಳ ಸಂಪೂರ್ಣ ಮಾಹಿತಿ ಹೊಂದಿದ್ದ. ಕೆಲಸ ಕಳೆದುಕೊಂಡ ಬಳಿಕ ಹಣವಿಲ್ಲದೇ ಪರದಾಟ ಪಟ್ಟಿದ್ದ. ಬಳಿಕ ಈ ಕೃತ್ಯಕ್ಕೆ ಕೈ ಹಾಕಿದ್ದ ಎಂದು ಮಾಹಿತಿ ಲಭ್ಯವಾಗಿದೆ. ಪೀಣ್ಯ, ಕೊಣನಕುಂಟೆ, ಪುಲಕೇಶಿನಗರ ಸೇರಿದಂತೆ ಕನಕಪುರದಲ್ಲೂ ಚಿಪ್ ಕಳ್ಳತನ ಮಾಡಿದ್ದ.

ಕದ್ದ ಮಾಲಿನ ಮೌಲ್ಯ ಗೊತ್ತಿದ್ದು ಸರಿಯಾದ ಮೌಲ್ಯಕ್ಕೆ ಮಾರಲಾಗದೆ ಪರದಾಟ ಪಟ್ಟಿದ್ದ. ಬಳಿಕ ಗುಜಿರಿ ಅಂಗಡಿಗೆ ಐನೂರು ರೂಪಾಯಿಗೆ ಮಾರಿದ್ದ ಎಂದು ಕೂಡ ತಿಳಿದುಬಂದಿದೆ. ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಒಟ್ಟು 9 ಪ್ರಕರಣ ಪತ್ತೆಯಾಗಿದೆ. ಪೀಣ್ಯ ಪೊಲೀಸರು ಆರೋಪಿಯ ವಿಚಾರಣೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: Bengaluru Crime: ಮಾರಕಾಸ್ತ್ರಗಳಿಂದ ಹೊಡೆದು ಬೈಕ್​ನಲ್ಲಿ ತೆರಳುತ್ತಿದ್ದ ರೌಡಿ ಶೀಟರ್​​ ಹತ್ಯೆ

ಇದನ್ನೂ ಓದಿ: ನೆಲಮಂಗಲ: ಎಟಿಎಂನಲ್ಲಿದ್ದ ಹಣ ಕಳ್ಳತನಕ್ಕೆ ಯತ್ನಿಸಿ ವಿಫಲ ಪ್ರಯತ್ನ, ಪಾರ್ಕ್ ನಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿ ಅರೆಸ್ಟ್

Published On - 3:17 pm, Mon, 4 October 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ