AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಶಾಲಾ ಶಿಕ್ಷಕನಿಗೆ ಜೀವ ಬೆದರಿಕೆ ಪತ್ರದ ಜೊತೆ ಬುಲೆಟ್ ಪಾರ್ಸಲ್

ಶಿಕ್ಷಕನಿಗೆ ಬಂದಿರುವ ಬೆದರಿಕೆ ಪತ್ರದಲ್ಲಿ ನಿನ್ನ ಸಾವಿನ ಸಂದೇಶವಿದು ಎಂದು ಬರೆದು ಕಳುಹಿಸಲಾಗಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

Crime News: ಶಾಲಾ ಶಿಕ್ಷಕನಿಗೆ ಜೀವ ಬೆದರಿಕೆ ಪತ್ರದ ಜೊತೆ ಬುಲೆಟ್ ಪಾರ್ಸಲ್
ಗನ್
TV9 Web
| Updated By: ಸುಷ್ಮಾ ಚಕ್ರೆ|

Updated on: Aug 20, 2021 | 12:49 PM

Share

ಮುಂಬೈ: ಮಹಾರಾಷ್ಟ್ರದ ದಹಿಸರ್ ಬಳಿ ಇರುವ ಶಾಲಾ ಶಿಕ್ಷಕನಿಗೆ ಜೀವ ಬೆದರಿಕೆ ಪತ್ರದ ಜೊತೆಗೆ ಬುಲೆಟ್​ಗಳನ್ನು ಪಾರ್ಸಲ್​​ನಲ್ಲಿ ಕಳುಹಿಸಲಾಗಿದೆ. ಈ ಕುರಿತು ದಹಿಸರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಬೆದರಿಕೆಯೊಡ್ಡಿರುವುದು ಯಾರೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಶಿಕ್ಷಕನಿಗೆ ಬಂದಿರುವ ಬೆದರಿಕೆ ಪತ್ರದಲ್ಲಿ ನಿನ್ನ ಸಾವಿನ ಸಂದೇಶವಿದು ಎಂದು ಬರೆದು ಕಳುಹಿಸಲಾಗಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಶಿಕ್ಷಕನ ಪೋಷಕರ ಮನೆಗೆ ಬಂದಿದ್ದ ಈ ಪತ್ರ ಹಾಗೂ ಪಾರ್ಸಲ್ ಅನ್ನು ಲೆಟರ್ ಬಾಕ್ಸ್​ನಲ್ಲಿ ಹಾಕಿ ಹೋಗಲಾಗಿತ್ತು. ಮಗನ ಹೆಸರಿಗೆ ಪಾರ್ಸಲ್ ಬಂದಿರುವುದರಿಂದ ಅದನ್ನು ಆ ಪೋಷಕರು ಶಿಕ್ಷಕನಿಗೆ ತಲುಪಿಸಿದ್ದರು. ಆ ಪಾರ್ಸಲ್ ಅನ್ನು ಟೀಚರ್ ಪೊಲೀಸ್ ಠಾಣೆಗೆ ತಂದು ದೂರು ನೀಡಿದ್ದಾರೆ.

ಈ ಪ್ರಕರಣದಲ್ಲಿ ಇದುವರೆಗೂ ಯಾವುದೇ ವ್ಯಕ್ತಿಯನ್ನು ಬಂಧಿಸಿಲ್ಲ. ಆದರೆ, ಇದಕ್ಕೂ ಮೊದಲು ಅತ್ಯಾಚಾರ ಹಾಗೂ ಪೋಕ್ಸೋ ಕೇಸ್​ನಲ್ಲಿ ಆ ಶಿಕ್ಷಕನ ಹೆಸರು ಕೂಡ ಕೇಳಿಬಂದಿತ್ತು. ಆತನ ವಿರುದ್ಧ ಕೇಸ್ ದಾಖಲಾಗಿತ್ತು. ಆ ಪ್ರಕರಣಕ್ಕೂ ಈ ಲೆಟರ್​ಗೂ ಏನಾದರೂ ಸಂಬಂಧವಿದೆಯಾ? ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಪತ್ರವನ್ನು ಲೆಟರ್ ಬಾಕ್ಸ್​ನಲ್ಲಿ ಹಾಕಿ ಹೋದವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಇದನ್ನೂ ಓದಿ: Crime News: ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ-ತಾಯಿ; ಹೆತ್ತವರೇ ವಿಲನ್ ಆದ ಕತೆಯಿದು

Crime News: ಕತ್ತು ಸೀಳಿ ಮಗನ ಕೊಂದ ತಾಯಿ: ವಿಚಾರಣೆ ವೇಳೆ ಬಯಲಾಯ್ತು ಎರಡು ಕೊಲೆ ರಹಸ್ಯ

(Crime News: Mumbai Teacher receives a Life threatening note bullets as parcel)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!