AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಶಾಲಾ ಶಿಕ್ಷಕನಿಗೆ ಜೀವ ಬೆದರಿಕೆ ಪತ್ರದ ಜೊತೆ ಬುಲೆಟ್ ಪಾರ್ಸಲ್

ಶಿಕ್ಷಕನಿಗೆ ಬಂದಿರುವ ಬೆದರಿಕೆ ಪತ್ರದಲ್ಲಿ ನಿನ್ನ ಸಾವಿನ ಸಂದೇಶವಿದು ಎಂದು ಬರೆದು ಕಳುಹಿಸಲಾಗಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

Crime News: ಶಾಲಾ ಶಿಕ್ಷಕನಿಗೆ ಜೀವ ಬೆದರಿಕೆ ಪತ್ರದ ಜೊತೆ ಬುಲೆಟ್ ಪಾರ್ಸಲ್
ಗನ್
TV9 Web
| Edited By: |

Updated on: Aug 20, 2021 | 12:49 PM

Share

ಮುಂಬೈ: ಮಹಾರಾಷ್ಟ್ರದ ದಹಿಸರ್ ಬಳಿ ಇರುವ ಶಾಲಾ ಶಿಕ್ಷಕನಿಗೆ ಜೀವ ಬೆದರಿಕೆ ಪತ್ರದ ಜೊತೆಗೆ ಬುಲೆಟ್​ಗಳನ್ನು ಪಾರ್ಸಲ್​​ನಲ್ಲಿ ಕಳುಹಿಸಲಾಗಿದೆ. ಈ ಕುರಿತು ದಹಿಸರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಬೆದರಿಕೆಯೊಡ್ಡಿರುವುದು ಯಾರೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಶಿಕ್ಷಕನಿಗೆ ಬಂದಿರುವ ಬೆದರಿಕೆ ಪತ್ರದಲ್ಲಿ ನಿನ್ನ ಸಾವಿನ ಸಂದೇಶವಿದು ಎಂದು ಬರೆದು ಕಳುಹಿಸಲಾಗಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಶಿಕ್ಷಕನ ಪೋಷಕರ ಮನೆಗೆ ಬಂದಿದ್ದ ಈ ಪತ್ರ ಹಾಗೂ ಪಾರ್ಸಲ್ ಅನ್ನು ಲೆಟರ್ ಬಾಕ್ಸ್​ನಲ್ಲಿ ಹಾಕಿ ಹೋಗಲಾಗಿತ್ತು. ಮಗನ ಹೆಸರಿಗೆ ಪಾರ್ಸಲ್ ಬಂದಿರುವುದರಿಂದ ಅದನ್ನು ಆ ಪೋಷಕರು ಶಿಕ್ಷಕನಿಗೆ ತಲುಪಿಸಿದ್ದರು. ಆ ಪಾರ್ಸಲ್ ಅನ್ನು ಟೀಚರ್ ಪೊಲೀಸ್ ಠಾಣೆಗೆ ತಂದು ದೂರು ನೀಡಿದ್ದಾರೆ.

ಈ ಪ್ರಕರಣದಲ್ಲಿ ಇದುವರೆಗೂ ಯಾವುದೇ ವ್ಯಕ್ತಿಯನ್ನು ಬಂಧಿಸಿಲ್ಲ. ಆದರೆ, ಇದಕ್ಕೂ ಮೊದಲು ಅತ್ಯಾಚಾರ ಹಾಗೂ ಪೋಕ್ಸೋ ಕೇಸ್​ನಲ್ಲಿ ಆ ಶಿಕ್ಷಕನ ಹೆಸರು ಕೂಡ ಕೇಳಿಬಂದಿತ್ತು. ಆತನ ವಿರುದ್ಧ ಕೇಸ್ ದಾಖಲಾಗಿತ್ತು. ಆ ಪ್ರಕರಣಕ್ಕೂ ಈ ಲೆಟರ್​ಗೂ ಏನಾದರೂ ಸಂಬಂಧವಿದೆಯಾ? ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಪತ್ರವನ್ನು ಲೆಟರ್ ಬಾಕ್ಸ್​ನಲ್ಲಿ ಹಾಕಿ ಹೋದವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಇದನ್ನೂ ಓದಿ: Crime News: ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ-ತಾಯಿ; ಹೆತ್ತವರೇ ವಿಲನ್ ಆದ ಕತೆಯಿದು

Crime News: ಕತ್ತು ಸೀಳಿ ಮಗನ ಕೊಂದ ತಾಯಿ: ವಿಚಾರಣೆ ವೇಳೆ ಬಯಲಾಯ್ತು ಎರಡು ಕೊಲೆ ರಹಸ್ಯ

(Crime News: Mumbai Teacher receives a Life threatening note bullets as parcel)

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ