AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಶಾಲಾ ಶಿಕ್ಷಕನಿಗೆ ಜೀವ ಬೆದರಿಕೆ ಪತ್ರದ ಜೊತೆ ಬುಲೆಟ್ ಪಾರ್ಸಲ್

ಶಿಕ್ಷಕನಿಗೆ ಬಂದಿರುವ ಬೆದರಿಕೆ ಪತ್ರದಲ್ಲಿ ನಿನ್ನ ಸಾವಿನ ಸಂದೇಶವಿದು ಎಂದು ಬರೆದು ಕಳುಹಿಸಲಾಗಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

Crime News: ಶಾಲಾ ಶಿಕ್ಷಕನಿಗೆ ಜೀವ ಬೆದರಿಕೆ ಪತ್ರದ ಜೊತೆ ಬುಲೆಟ್ ಪಾರ್ಸಲ್
ಗನ್
TV9 Web
| Edited By: |

Updated on: Aug 20, 2021 | 12:49 PM

Share

ಮುಂಬೈ: ಮಹಾರಾಷ್ಟ್ರದ ದಹಿಸರ್ ಬಳಿ ಇರುವ ಶಾಲಾ ಶಿಕ್ಷಕನಿಗೆ ಜೀವ ಬೆದರಿಕೆ ಪತ್ರದ ಜೊತೆಗೆ ಬುಲೆಟ್​ಗಳನ್ನು ಪಾರ್ಸಲ್​​ನಲ್ಲಿ ಕಳುಹಿಸಲಾಗಿದೆ. ಈ ಕುರಿತು ದಹಿಸರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಬೆದರಿಕೆಯೊಡ್ಡಿರುವುದು ಯಾರೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಶಿಕ್ಷಕನಿಗೆ ಬಂದಿರುವ ಬೆದರಿಕೆ ಪತ್ರದಲ್ಲಿ ನಿನ್ನ ಸಾವಿನ ಸಂದೇಶವಿದು ಎಂದು ಬರೆದು ಕಳುಹಿಸಲಾಗಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಶಿಕ್ಷಕನ ಪೋಷಕರ ಮನೆಗೆ ಬಂದಿದ್ದ ಈ ಪತ್ರ ಹಾಗೂ ಪಾರ್ಸಲ್ ಅನ್ನು ಲೆಟರ್ ಬಾಕ್ಸ್​ನಲ್ಲಿ ಹಾಕಿ ಹೋಗಲಾಗಿತ್ತು. ಮಗನ ಹೆಸರಿಗೆ ಪಾರ್ಸಲ್ ಬಂದಿರುವುದರಿಂದ ಅದನ್ನು ಆ ಪೋಷಕರು ಶಿಕ್ಷಕನಿಗೆ ತಲುಪಿಸಿದ್ದರು. ಆ ಪಾರ್ಸಲ್ ಅನ್ನು ಟೀಚರ್ ಪೊಲೀಸ್ ಠಾಣೆಗೆ ತಂದು ದೂರು ನೀಡಿದ್ದಾರೆ.

ಈ ಪ್ರಕರಣದಲ್ಲಿ ಇದುವರೆಗೂ ಯಾವುದೇ ವ್ಯಕ್ತಿಯನ್ನು ಬಂಧಿಸಿಲ್ಲ. ಆದರೆ, ಇದಕ್ಕೂ ಮೊದಲು ಅತ್ಯಾಚಾರ ಹಾಗೂ ಪೋಕ್ಸೋ ಕೇಸ್​ನಲ್ಲಿ ಆ ಶಿಕ್ಷಕನ ಹೆಸರು ಕೂಡ ಕೇಳಿಬಂದಿತ್ತು. ಆತನ ವಿರುದ್ಧ ಕೇಸ್ ದಾಖಲಾಗಿತ್ತು. ಆ ಪ್ರಕರಣಕ್ಕೂ ಈ ಲೆಟರ್​ಗೂ ಏನಾದರೂ ಸಂಬಂಧವಿದೆಯಾ? ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಪತ್ರವನ್ನು ಲೆಟರ್ ಬಾಕ್ಸ್​ನಲ್ಲಿ ಹಾಕಿ ಹೋದವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಇದನ್ನೂ ಓದಿ: Crime News: ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ-ತಾಯಿ; ಹೆತ್ತವರೇ ವಿಲನ್ ಆದ ಕತೆಯಿದು

Crime News: ಕತ್ತು ಸೀಳಿ ಮಗನ ಕೊಂದ ತಾಯಿ: ವಿಚಾರಣೆ ವೇಳೆ ಬಯಲಾಯ್ತು ಎರಡು ಕೊಲೆ ರಹಸ್ಯ

(Crime News: Mumbai Teacher receives a Life threatening note bullets as parcel)

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?