AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ಮುಂದ್ರಾ ಬಂದರಿನಲ್ಲಿ 2,100 ಕೋಟಿ ರೂ. ಮೌಲ್ಯದ 3,000 ಕೆಜಿ ಡ್ರಗ್ಸ್ ವಶ

ಗುಜರಾತ್​ನ ಮುಂದ್ರಾ ಬಂದರಿನಲ್ಲಿ 2 ದೋಣಿಗಳಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 3000 ಕೆ.ಜಿ ಹೆರಾಯಿನ್​ ಅನ್ನು ವಶಕ್ಕೆ ಪಡೆಯಲಾಗಿದೆ.

ಗುಜರಾತ್​ನ ಮುಂದ್ರಾ ಬಂದರಿನಲ್ಲಿ 2,100 ಕೋಟಿ ರೂ. ಮೌಲ್ಯದ 3,000 ಕೆಜಿ ಡ್ರಗ್ಸ್ ವಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 20, 2021 | 7:45 PM

Share

ಅಹಮದಾಬಾದ್: ಗುಜರಾತ್​ನ ಮುಂದ್ರಾ ಬಂದರಿನಲ್ಲಿ ಸುಮಾರು 2,100 ಕೋಟಿ ರೂ. ಮೌಲ್ಯದ 2,988.22 ಕೆಜಿ ಡ್ರಗ್ಸ್​ ವಶಪಡಿಸಿಕೊಳ್ಳಲಾಗಿದೆ. ಗುಜರಾತ್​ನ ಮುಂದ್ರಾ ಬಂದರಿನಲ್ಲಿ 2 ದೋಣಿಗಳಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 3000 ಕೆ.ಜಿ ಹೆರಾಯಿನ್​ ಅನ್ನು ವಶಕ್ಕೆ ಪಡೆಯಲಾಗಿದೆ. ಒಂದು ಕೆ.ಜಿ ಹೆರಾಯಿನ್​ ಮೌಲ್ಯ 7 ಕೋಟಿ ರೂ. ಇದೆ. ಈ ಘಟನೆಗೆ ಸಂಬಂಧಿಸಿದಂತೆ ಡ್ರಗ್ಸ್​ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಆಂಧ್ರಪ್ರದೇಶದ ವಿಜಯವಾಡದ ಆಶಿ ಟ್ರೇಡಿಂಗ್ ಕಂಪನಿಯಿಂದ ಸಾಗಿಸಲಾಗುತ್ತಿದ್ದ ಭಾರೀ ಮೊತ್ತದ ಡ್ರಗ್ಸ್​ ವಶಪಡಿಸಿಕೊಳ್ಳಲಾಗಿದೆ. ಅಫ್ಘಾನಿಸ್ತಾನದಿಂದ ಈ ನೆರೋಟಿಕ್ ಡ್ರಗ್ ಅನ್ನು ಸಾಗಿಸಲಾಗುತ್ತಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಮೊದಲ ದೋಣಿಯಿಂದ 1,999.58 ಕೆಜಿ ಹೆರಾಯಿನ್ ವಶಕ್ಕೆ ಪಡೆಯಲಾಗಿದ್ದು, ಮತ್ತೊಂದು ದೋಣಿಯಿಂದ 988.64 ಕೆಜಿ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

ಇದರ ಬೆನ್ನಲ್ಲೇ ದೆಹಲಿ, ಚೆನ್ನೈ, ಅಹಮದಾಬಾದ್, ಗಾಂಧಿಧಾಮ, ಗುಜರಾತ್​ನ ಮಾಂಡವಿ ಪ್ರದೇಶಗಳಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನೂ ಕೆಲವೆಡೆ ಡ್ರಗ್ಸ್​ ಬಚ್ಚಿಟ್ಟಿರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಇದರ ಹಿಂದೆ ಅಫ್ಘಾನ್ ಪ್ರಜೆಗಳ ಕೈವಾಡವಿರುವ ಸಂಶಯವಿದೆ. ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಇದನ್ನೂ ಓದಿ:ನಾನು ಡ್ರಗ್ ಟೆಸ್ಟ್​ಗೆ ಸಿದ್ಧನಿದ್ದೇನೆ, ರಾಹುಲ್ ಗಾಂಧಿ ತಯಾರಿದ್ದಾರಾ?; ವೈಟ್ ಚಾಲೆಂಜ್​ಗೆ ಸಚಿವ ಕೆಟಿ ರಾಮರಾವ್ ಮರು ಸವಾಲು

ಆನೇಕಲ್ ಬಳಿಯ ಖಾಸಗಿ ರೆಸಾರ್ಟ್‌ನಲ್ಲಿ ರೇವ್‌ ಪಾರ್ಟಿ, ಡ್ರಗ್ಸ್ ನಶೆಯಲ್ಲಿದ್ದ 28 ಜನರನ್ನ ವಶಕ್ಕೆ ಪಡೆದ ಪೊಲೀಸರು

(Crime News: Nearly 3000 kg Drugs seized worth 21,000 crore Rupees from Afghanistan seized at Gujarat Mundra port)

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!