AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಕ್ರೀಟ್​ ಮಿಕ್ಸರ್ ಬಿದ್ದು ಕಾರು ಅಪ್ಪಚ್ಚಿ; ಮದುವೆಯಾದ ನಾಲ್ಕೇ ದಿನಕ್ಕೆ ಗಂಡ-ಹೆಂಡತಿಯ ದುರಂತ ಅಂತ್ಯ

ಕಾಂಕ್ರೀಟ್ ಮಿಕ್ಸ್ ಮಾಡುವ ಟ್ರಕ್ ಕಅರಿನ ಮೇಲೆ ಬಿದ್ದಿದ್ದರಿಂದ ಮದುವೆಯಾಗಿ ನಾಲ್ಕೇ ದಿನಕ್ಕೆ ಗಂಡ-ಹೆಂಡತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಕಾಂಕ್ರೀಟ್​ ಮಿಕ್ಸರ್ ಬಿದ್ದು ಕಾರು ಅಪ್ಪಚ್ಚಿ; ಮದುವೆಯಾದ ನಾಲ್ಕೇ ದಿನಕ್ಕೆ ಗಂಡ-ಹೆಂಡತಿಯ ದುರಂತ ಅಂತ್ಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 02, 2021 | 5:51 PM

Share

ಚೆನ್ನೈ: ಹೊಸದಾಗಿ ಮದುವೆಯಾಗಿದ್ದ ಗಂಡ-ಹೆಂಡತಿ ಕಾರಿನಲ್ಲಿ ಹೋಗುವಾಗ ಭೀಕರ ಅಪಘಾತ ಸಂಭವಿಸಿದ್ದು, ದಂಪತಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೇವಲ 4 ದಿನಗಳ ಹಿಂದೆ ಮದುವೆಯಾಗಿದ್ದ ದಂಪತಿ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೇರಳ​ ಮೂಲದ ಮನೋಜ್​ ಕುಮಾರ್​ (31) ಮತ್ತು ಪೆರುಗಲಥೂರ್​ ಮೂಲದ ಕಾರ್ತಿಕಾ (30) ಮೃತ ದಂಪತಿಯಾಗಿದ್ದಾರೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಕಾಂಕ್ರೀಟ್​ ಮಿಕ್ಸರ್​ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಆ ಗಂಡ-ಹೆಂಡತಿ ಸಂಚರಿಸುತ್ತಿದ್ದ ಕಾರು ಅಪ್ಪಚ್ಚಿಯಾಗಿದೆ.

ಮನೋಜ್ ಕುಮಾರ್ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಹೆಂಡತಿ ಕಾರ್ತಿಕಾ ಖಾಸಗಿ ಕ್ಲಿನಿಕ್‌ನಲ್ಲಿ ವೈದ್ಯೆಯಾಗಿದ್ದರು. ನಾಲ್ಕು ದಿನಗಳ ಹಿಂದೆ ಅಕ್ಟೋಬರ್ 28ರಂದು ಇವರಿಬ್ಬರೂ ಮದುವೆಯಾಗಿದ್ದರು. ಭಾನುವಾರ ಈ ದಂಪತಿಗಳು ಕಾರ್ತಿಕಾಳ ಮನೆಗೆ ಹೋಗಿದ್ದರು. ನಂತರ ಕಾರಿನಲ್ಲಿ ಅರಕ್ಕೋಣಂಗೆ ಹಿಂತಿರುಗುತ್ತಿದ್ದರು. ರಾತ್ರಿ 9.45ರ ವೇಳೆಗೆ ಕದಂಬತ್ತೂರು ಬಳಿ ಪೂನಮಲ್ಲಿ-ಅರಕ್ಕೋಣಂ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಹೋಗುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಟ್ರಕ್‌ನ ಚಾಲಕ ತಿರುವಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದ್ದ.

ಆಗ ಮನೋಜ್ ಅವರ ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಬಿದ್ದಿದ್ದು, ಕಾರು ಅಪ್ಪಚ್ಚಿಯಾಗಿದೆ. ನಂತರ ಎರಡು ಗಂಟೆಗಳ ಕಾಳ ಕಾರ್ಯಾಚರಣೆ ನಡೆಸಿ ಟ್ರಕ್ ಅನ್ನು ಮೇಲೆತ್ತಲಾಯಿತು. ಅಷ್ಟರಲ್ಲಿ ಕಾರಿನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದರು. ಮಪ್ಪೆಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ತಿರುವಳ್ಳೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಟ್ರಕ್​ನ ಚಾಲಕ ಪರಾರಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ: Kabul Hospital Blast: ಕಾಬೂಲ್​ನ ಮಿಲಿಟರಿ ಆಸ್ಪತ್ರೆ ಬಳಿ ಭಾರೀ ಸ್ಫೋಟ; 15 ಜನ ಸಾವು, 34 ಮಂದಿಗೆ ಗಾಯ

Jammu Kashmir: ಜಮ್ಮು ಕಾಶ್ಮೀರದ ಎಲ್​ಒಸಿ ಬಳಿ ಗಣಿಸ್ಫೋಟದಲ್ಲಿ ಇಬ್ಬರು ಸೈನಿಕರ ಸಾವು

Published On - 5:45 pm, Tue, 2 November 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ