ಖ್ಯಾತ ರೂಪದರ್ಶಿಯ ನಿಗೂಢ ಸಾವು; ಮನೆಯ ಹಾಲ್​ನಲ್ಲಿ ನಗ್ನ ಶವ ಪತ್ತೆ!

Nayab Nadeem Murder Case: ರೂಪದರ್ಶಿ ನಯಾಬ್ ನದೀಂ ಅವರ ಮನೆಯೊಳಗೆ ನುಗ್ಗಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಆಕೆಯ ಮನೆಯ ಹಾಲ್​ನಲ್ಲಿ ಬೆತ್ತಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಖ್ಯಾತ ರೂಪದರ್ಶಿಯ ನಿಗೂಢ ಸಾವು; ಮನೆಯ ಹಾಲ್​ನಲ್ಲಿ ನಗ್ನ ಶವ ಪತ್ತೆ!
ರೂಪದರ್ಶಿ ನಯಾಬ್ ನದೀಂ
Follow us
| Updated By: ಸುಷ್ಮಾ ಚಕ್ರೆ

Updated on: Jul 12, 2021 | 6:34 PM

ಲಾಹೋರ್: ಪಾಕಿಸ್ತಾನದ ಲಾಹೋರ್​ನಲ್ಲಿರುವ (Lahore) ತನ್ನ ಮನೆಯಲ್ಲಿ ಖ್ಯಾತ ರೂಪದರ್ಶಿ ನಯಾಬ್ ನದೀಮ್ (Nayab Nadeem) ನಿಗೂಢವಾಗಿ ಸಾವನ್ನಪ್ಪಿದ್ದಾರೆ. 29 ವರ್ಷದ ನದೀಂ ಏಕಾಂಗಿಯಾಗಿ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು. ಅಪರಿಚಿತ ವ್ಯಕ್ತಿಗಳು ಮನೆಯೊಳಗೆ ನುಗ್ಗಿ ಕೊಲೆ ಮಾಡಿದ್ದು, ನಯಾಬ್ ನದೀಂ ಅವರ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಭಾನುವಾರ ರಾತ್ರಿ ಹಂತಕರು ನದೀಂ ಅವರಿದ್ದ ಮನೆಯೊಳಗೆ ನುಗ್ಗಿ, ಅವರ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ನದೀಂ ಅವರ ಮಲ ಸಹೋದರ ಮೊಹಮ್ಮದ್ ಅಲಿ ನಾಸಿರ್ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ಬಳಿಕ ಪ್ರಕರಣದ ಬೆಳಕಿಗೆ ಬಂದಿದೆ. ಇಂದು ಬೆಳಗ್ಗೆ ರೂಪದರ್ಶಿ ನದೀಂ ಅವರನ್ನು ಭೇಟಿಯಾಗಲು ನಾಸಿರ್ ಆಕೆಯ ಮನೆಗೆ ತೆರಳಿದ್ದರು. ಫ್ಲಾಟ್​ನ ಬಾಗಿಲು ಲಾಕ್ ಆಗಿತ್ತು. ಆಕೆಗೆ ಫೋನ್ ಮಾಡಿದರೂ ರಿಸೀವ್ ಮಾಡಲಿಲ್ಲ. ಆಕೆಯ ಕಾರು ಮನೆಯ ಹೊರಗೆ ನಿಂತಿತ್ತು. ಹೀಗಾಗಿ, ಆಕೆ ಮನೆಯಿಂದ ಹೊರಗೆಲ್ಲೂ ಹೋಗಿಲ್ಲ ಎಂಬುದು ನಾಸಿರ್​ಗೆ ಖಚಿತವಾಗಿತ್ತು. ಇದರಿಂದ ಅನುಮಾನಗೊಂಡ ಅವರು ಮನೆಯ ಹಿಂಬದಿಗೆ ಹೋಗಿ ನೋಡಿದ್ದರು.

ನದೀಂಳ ಮನೆಯ ಹಿಂಭಾಗದಲ್ಲಿದ್ದ ಬಾತ್​ರೂಮಿನ ಕಿಟಕಿಯ ಗಾಜುಗಳು ಒಡೆದು, ಚೂರಾಗಿ ಬಿದ್ದಿದ್ದವು. ಇದರಿಂದ ಅನುಮಾನಗೊಂಡ ನಾಸಿರ್ ಅದೇ ಕಿಟಕಿಯಿಂದ ಆಕೆಯ ಮನೆಯೊಳಗೆ ಪ್ರವೇಶಿಸಿದ್ದಾರೆ. ಆಗ ತನ್ನ ಸಹೋದರಿಯ ನಗ್ನ ದೇಹ ಹಾಲ್​ನಲ್ಲಿ ಬಿದ್ದಿರುವುದನ್ನು ಕಂಡು ಶಾಕ್ ಆಗಿದ್ದಾರೆ. ಬೆತ್ತಲಾಗಿ ಬಿದ್ದಿದ್ದ ಶವದ ಬಳಿ ಹೋಗಿ ನೋಡಿದಾಗ ಆಕೆ ಸಾವನ್ನಪ್ಪಿರುವುದು ಖಚಿತವಾಗಿತ್ತು. ಹೀಗಾಗಿ, ತಕ್ಷಣ ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ರೂಪದರ್ಶಿ ನದೀಂ ಅವರ ಮೃತದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ. ಆಕೆಯ ಕೈ, ಕುತ್ತಿಗೆ, ಕಾಲಿನ ಮೇಲೆ ಗಾಯದ ಗುರುತುಗಳಿದ್ದು, ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಒಬ್ಬಂಟಿಯಾಗಿ ಮನೆಯಲ್ಲಿ ವಾಸಿಸುತ್ತಿದ್ದ ನದೀಂ ಅವರಿಗೆ ಇನ್ನೂ ಮದುವೆಯಾಗಿರಲಿಲ್ಲ. ಇತ್ತೀಚೆಗಷ್ಟೇ ಮಾಡೆಲಿಂಗ್​ನಲ್ಲಿ ಉತ್ತಮ ಅವಕಾಶಗಳು ಸಿಗಲಾರಂಭಿಸಿದ್ದವು ಎನ್ನಲಾಗಿದೆ.

ಇದನ್ನೂ ಓದಿ: Crime News: ಜೈಲು ಸಿಬ್ಬಂದಿ ಮುಖಕ್ಕೆ ಖಾರದ ಪುಡಿ ಎರಚಿ 7 ಕೈದಿಗಳು ಪರಾರಿ; ಪೊಲೀಸರು ಕಂಗಾಲು!

ಇದನ್ನೂ ಓದಿ: Crime News: ಗಂಡನ ಮೇಲಿನ ಕೋಪಕ್ಕೆ 11 ತಿಂಗಳ ಕಂದಮ್ಮನ ಉಸಿರುಗಟ್ಟಿಸಿ ಕೊಂದ ತಾಯಿ!

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು