AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ರೂಪದರ್ಶಿಯ ನಿಗೂಢ ಸಾವು; ಮನೆಯ ಹಾಲ್​ನಲ್ಲಿ ನಗ್ನ ಶವ ಪತ್ತೆ!

Nayab Nadeem Murder Case: ರೂಪದರ್ಶಿ ನಯಾಬ್ ನದೀಂ ಅವರ ಮನೆಯೊಳಗೆ ನುಗ್ಗಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಆಕೆಯ ಮನೆಯ ಹಾಲ್​ನಲ್ಲಿ ಬೆತ್ತಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಖ್ಯಾತ ರೂಪದರ್ಶಿಯ ನಿಗೂಢ ಸಾವು; ಮನೆಯ ಹಾಲ್​ನಲ್ಲಿ ನಗ್ನ ಶವ ಪತ್ತೆ!
ರೂಪದರ್ಶಿ ನಯಾಬ್ ನದೀಂ
TV9 Web
| Edited By: |

Updated on: Jul 12, 2021 | 6:34 PM

Share

ಲಾಹೋರ್: ಪಾಕಿಸ್ತಾನದ ಲಾಹೋರ್​ನಲ್ಲಿರುವ (Lahore) ತನ್ನ ಮನೆಯಲ್ಲಿ ಖ್ಯಾತ ರೂಪದರ್ಶಿ ನಯಾಬ್ ನದೀಮ್ (Nayab Nadeem) ನಿಗೂಢವಾಗಿ ಸಾವನ್ನಪ್ಪಿದ್ದಾರೆ. 29 ವರ್ಷದ ನದೀಂ ಏಕಾಂಗಿಯಾಗಿ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು. ಅಪರಿಚಿತ ವ್ಯಕ್ತಿಗಳು ಮನೆಯೊಳಗೆ ನುಗ್ಗಿ ಕೊಲೆ ಮಾಡಿದ್ದು, ನಯಾಬ್ ನದೀಂ ಅವರ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಭಾನುವಾರ ರಾತ್ರಿ ಹಂತಕರು ನದೀಂ ಅವರಿದ್ದ ಮನೆಯೊಳಗೆ ನುಗ್ಗಿ, ಅವರ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ನದೀಂ ಅವರ ಮಲ ಸಹೋದರ ಮೊಹಮ್ಮದ್ ಅಲಿ ನಾಸಿರ್ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ಬಳಿಕ ಪ್ರಕರಣದ ಬೆಳಕಿಗೆ ಬಂದಿದೆ. ಇಂದು ಬೆಳಗ್ಗೆ ರೂಪದರ್ಶಿ ನದೀಂ ಅವರನ್ನು ಭೇಟಿಯಾಗಲು ನಾಸಿರ್ ಆಕೆಯ ಮನೆಗೆ ತೆರಳಿದ್ದರು. ಫ್ಲಾಟ್​ನ ಬಾಗಿಲು ಲಾಕ್ ಆಗಿತ್ತು. ಆಕೆಗೆ ಫೋನ್ ಮಾಡಿದರೂ ರಿಸೀವ್ ಮಾಡಲಿಲ್ಲ. ಆಕೆಯ ಕಾರು ಮನೆಯ ಹೊರಗೆ ನಿಂತಿತ್ತು. ಹೀಗಾಗಿ, ಆಕೆ ಮನೆಯಿಂದ ಹೊರಗೆಲ್ಲೂ ಹೋಗಿಲ್ಲ ಎಂಬುದು ನಾಸಿರ್​ಗೆ ಖಚಿತವಾಗಿತ್ತು. ಇದರಿಂದ ಅನುಮಾನಗೊಂಡ ಅವರು ಮನೆಯ ಹಿಂಬದಿಗೆ ಹೋಗಿ ನೋಡಿದ್ದರು.

ನದೀಂಳ ಮನೆಯ ಹಿಂಭಾಗದಲ್ಲಿದ್ದ ಬಾತ್​ರೂಮಿನ ಕಿಟಕಿಯ ಗಾಜುಗಳು ಒಡೆದು, ಚೂರಾಗಿ ಬಿದ್ದಿದ್ದವು. ಇದರಿಂದ ಅನುಮಾನಗೊಂಡ ನಾಸಿರ್ ಅದೇ ಕಿಟಕಿಯಿಂದ ಆಕೆಯ ಮನೆಯೊಳಗೆ ಪ್ರವೇಶಿಸಿದ್ದಾರೆ. ಆಗ ತನ್ನ ಸಹೋದರಿಯ ನಗ್ನ ದೇಹ ಹಾಲ್​ನಲ್ಲಿ ಬಿದ್ದಿರುವುದನ್ನು ಕಂಡು ಶಾಕ್ ಆಗಿದ್ದಾರೆ. ಬೆತ್ತಲಾಗಿ ಬಿದ್ದಿದ್ದ ಶವದ ಬಳಿ ಹೋಗಿ ನೋಡಿದಾಗ ಆಕೆ ಸಾವನ್ನಪ್ಪಿರುವುದು ಖಚಿತವಾಗಿತ್ತು. ಹೀಗಾಗಿ, ತಕ್ಷಣ ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ರೂಪದರ್ಶಿ ನದೀಂ ಅವರ ಮೃತದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ. ಆಕೆಯ ಕೈ, ಕುತ್ತಿಗೆ, ಕಾಲಿನ ಮೇಲೆ ಗಾಯದ ಗುರುತುಗಳಿದ್ದು, ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಒಬ್ಬಂಟಿಯಾಗಿ ಮನೆಯಲ್ಲಿ ವಾಸಿಸುತ್ತಿದ್ದ ನದೀಂ ಅವರಿಗೆ ಇನ್ನೂ ಮದುವೆಯಾಗಿರಲಿಲ್ಲ. ಇತ್ತೀಚೆಗಷ್ಟೇ ಮಾಡೆಲಿಂಗ್​ನಲ್ಲಿ ಉತ್ತಮ ಅವಕಾಶಗಳು ಸಿಗಲಾರಂಭಿಸಿದ್ದವು ಎನ್ನಲಾಗಿದೆ.

ಇದನ್ನೂ ಓದಿ: Crime News: ಜೈಲು ಸಿಬ್ಬಂದಿ ಮುಖಕ್ಕೆ ಖಾರದ ಪುಡಿ ಎರಚಿ 7 ಕೈದಿಗಳು ಪರಾರಿ; ಪೊಲೀಸರು ಕಂಗಾಲು!

ಇದನ್ನೂ ಓದಿ: Crime News: ಗಂಡನ ಮೇಲಿನ ಕೋಪಕ್ಕೆ 11 ತಿಂಗಳ ಕಂದಮ್ಮನ ಉಸಿರುಗಟ್ಟಿಸಿ ಕೊಂದ ತಾಯಿ!

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​