AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಎಲ್​ಪಿಜಿ ಸಿಲಿಂಡರ್ ಡೆಲಿವರಿ ಸಿಬ್ಬಂದಿಯನ್ನು ಅಪಹರಿಸಿ 2 ಲಕ್ಷ ರೂ ವಸೂಲಿ ಮಾಡಿದ ಗ್ಯಾಂಗ್

ಮಾರ್ಚ್ 15ರಂದು 4 ವಾಹನದಲ್ಲಿ ಆರು ಜನರ ಗುಂಪು ಚತುರ್ಶೃಂಗಿ ದೇವಸ್ಥಾನದ ಬಳಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟೆಂಪೋವನ್ನು ನಿಲ್ಲಿಸಿತ್ತು. ನಂತರ ಅದರೊಳಗಿದ್ದ ಸಿಬ್ಬಂದಿಯನ್ನು ಅಪಹರಿಸಿದ್ದರು.

Crime News: ಎಲ್​ಪಿಜಿ ಸಿಲಿಂಡರ್ ಡೆಲಿವರಿ ಸಿಬ್ಬಂದಿಯನ್ನು ಅಪಹರಿಸಿ 2 ಲಕ್ಷ ರೂ ವಸೂಲಿ ಮಾಡಿದ ಗ್ಯಾಂಗ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 02, 2022 | 2:09 PM

ಪುಣೆ: ಎಲ್​ಪಿಜಿ ಸಿಲಿಂಡರ್ (LPG Cylinder) ಬೆಲೆ ಹೆಚ್ಚಾಗಿರುವುದರಿಂದ ಇಬ್ಬರು ಎಲ್‌ಪಿಜಿ ಸಿಲಿಂಡರ್ ಡೆಲಿವರಿ ಕಾರ್ಮಿಕರನ್ನು ಅಪಹರಿಸಿದ ಆರೋಪದ ಮೇಲೆ ಮೂವರನ್ನು ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಸಿಲಿಂಡರ್ ಡೆಲಿವರಿ ಸಿಬ್ಬಂದಿಯನ್ನು ಅಪಹರಿಸಿ, ಅವರ ಕುಟುಂಬದಿಂದ 2 ಲಕ್ಷ ರೂ. ಸುಲಿಗೆ ಮಾಡಿ ನಂತರ ಬಿಡುಗಡೆ ಮಾಡಿದ್ದಾರೆ.

ಬಂಧಿತ ಆರೋಪಿಗಳನ್ನು ಬಿಬ್ವೆವಾಡಿಯ ಸುದರ್ಶನ ಕಿಶೋರ ಗಂಗವಾಣೆ (25), ಜಂಭುಲವಾಡಿಯ ವಿಕಾಸ್ ತುಕಾರಾಂ ಕೋಡಿಟ್ಕರ್ (30) ಮತ್ತು ದತ್ತನಗರದ ಅಂಬೆಗಾಂವ್‌ನ ಸತೀಶ ಸುಧೀರ್ ವಂಜಾಲೆ (33) ಎಂದು ಪೊಲೀಸರು ಗುರುತಿಸಿದ್ದಾರೆ. ಕ್ರೈಂ ಬ್ರಾಂಚ್ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆ ಪ್ರಕಾರ, ಮಾರ್ಚ್ 15ರಂದು 4 ವಾಹನದಲ್ಲಿ ಆರು ಜನರ ಗುಂಪು ಚತುರ್ಶೃಂಗಿ ದೇವಸ್ಥಾನದ ಬಳಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟೆಂಪೋವನ್ನು ನಿಲ್ಲಿಸಿತ್ತು. ನಂತರ ಅದರೊಳಗಿದ್ದ ಸಿಬ್ಬಂದಿಯನ್ನು ಅಪಹರಿಸಿದ್ದರು.

ಕ್ರೈಂ ಬ್ರಾಂಚ್ ಸ್ಲೀತ್‌ಗಳಂತೆ ನಟಿಸಿದ ಆರು ಮಂದಿ ಸಿಲಿಂಡರ್ ಸಾಗಿಸುತ್ತಿದ್ದ ಟೆಂಪೋದಲ್ಲಿದ್ದ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾನೂನು ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿದ್ದರು. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬಾರದು ಎಂದರೆ 5 ಲಕ್ಷ ರೂ. ಹಣ ಕೊಡಬೇಕು. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಇದರಿಂದ ಹೆದರಿದ ಅವರು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅವರಿಬ್ಬರನ್ನು ಅಪಹರಿಸಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಹರಿಸಿದ ನಂತರ ಆ ಇಬ್ಬರ ಕುಟುಂಬಸ್ಥರನ್ನು ಸಂಪರ್ಕಿಸಿ, ಅವರಿಬ್ಬರನ್ನು ಬಿಡುಗಡೆ ಮಾಡಬೇಕಾದರೆ ಎರಡೂ ಕುಟುಂಬಸ್ಥರು 2 ಲಕ್ಷ ರೂ. ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಪೊಲೀಸರ ಪ್ರಕಾರ, ಅಪಹರಣಕಾರರು 2 ಲಕ್ಷ ರೂ. ಹಣ ಪಡೆದ ನಂತರ ಆ ಇಬ್ಬರನ್ನು ಬಿಡುಗಡೆ ಮಾಡಿದ್ದಾರೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ, ಚತುರ್ಶೃಂಗಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವಜಾ ಮಾಡಲಾಗಿರುವ ಮಾಜಿ ಗ್ಯಾಸ್ ಏಜೆನ್ಸಿ ಉದ್ಯೋಗಿಯ ಮೇಲೆ ದೂರುದಾರರು ಅನುಮಾನ ವ್ಯಕ್ತಪಡಿಸಿದ್ದಾರೆ. ಬಂಧಿತ ಶಂಕಿತನ ಬಳಿ ವಾಹನ, ಮೋಟಾರ್ ಬೈಕ್ ಮತ್ತು ಮೂರು ಸೆಲ್ ಫೋನ್​ಗಳು ಪತ್ತೆಯಾಗಿದ್ದು, ಅವೆಲ್ಲವನ್ನೂ ಅಪರಾಧಕ್ಕೆ ಬಳಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Crime News: ತಮಿಳುನಾಡಿನಲ್ಲಿ ಐವರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಕುಡಿದ ಅಮಲಿನಲ್ಲಿ ತಾವಾಗೇ ಸಿಕ್ಕಿಬಿದ್ದ ಕಾಮುಕರು

Crime News: ಅಪಾರ್ಟ್​ಮೆಂಟ್​ನ 5ನೇ ಮಹಡಿಯಿಂದ ಜಾರಿ ಬಿದ್ದು ಖ್ಯಾತ ನಿರ್ದೇಶಕನ ಮಗ ಸಾವು

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ