AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಅತ್ಯಾಚಾರ ಪ್ರಕರಣ ಬೆಳಕಿಗೆ, ಸೋದರಮಾವ ಅರೆಸ್ಟ್

ಸೋದರ ಮಾವನಿಂದಲೇ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಯಾದಗಿರಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ತಾಯಿ ಮತ್ತು ಸಂತ್ರಸ್ತೆ ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Crime News: ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಅತ್ಯಾಚಾರ ಪ್ರಕರಣ ಬೆಳಕಿಗೆ, ಸೋದರಮಾವ ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 21, 2022 | 3:36 PM

Share

ಯಾದಗಿರಿ: ಸೋದರ ಮಾವನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ (Rape) ಎಸಗಿದ ಘಟನೆ ಯಾದಗಿರಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 8 ತರಗತಿಯಲ್ಲಿ ಓದುತ್ತಿರುವ ಅಪ್ರಾಪ್ತ ಬಾಲಕಿ ಮೇಲೆ ಕಳೆದ 7 ತಿಂಗಳ ಹಿಂದೆ ಕಾಮುಕ ಮಾವ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಏಳು ತಿಂಗಳ ಗರ್ಭಿಣಿ ಎಂದು ಪೋಷಕರಿಗೆ ತಿಳಿಯುತ್ತಿದ್ದಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಹೆಡೆಮುರಿಕಟ್ಟಿದ್ದಾರೆ.

ತಾಯಿಯೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದ ಸಂತ್ರಸ್ತ ಬಾಲಕಿ, ಆಗಾಗ ಯಾದಗಿರಿಗೆ ಬರುತ್ತಿದ್ದಳು. ಈ ವೇಳೆ ಬಾಲಕಿ ಮೇಲೆ ಸೋದರ ಮಾವ ಅತ್ಯಾಚಾರ ಎಸಗಿದ್ದು, ಬಾಲಕಿ 7ತಿಂಗಳ ಗರ್ಭಿಣಿಯಾಗುತ್ತಿದ್ದಂತೆ ದುಷ್ಕೃತ್ಯ ಬೆಳಕಿಗೆ ಬಂದಿದೆ. ತಾಯಿ ಮತ್ತು ಮಗಳು ನೀಡಿದ ದೂರಿನಂತೆ ಯಾದಗಿರಿ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Crime News ಕಾಲ್ ಕನ್ವರ್ಟ್​ ಅಡ್ಡೆಗಳ ಮೇಲೆ ಸೇನೆಯ ಸದರ್ನ್ ಕಮಾಂಡ್, ಸಿಸಿಬಿ ಪೊಲೀಸರ ಜಂಟಿ ದಾಳಿ, 2144 ಡಿವೈಸ್ ಜಪ್ತಿ

 ರೈತರಿಗೆ ಮಹಾಮೋಸ

ಗದಗ: ಹಾವೇರಿ ಜಿಲ್ಲೆಯ ರೈತರಿಗೆ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ ಗದಗ ನಗರದ ನರಸಾಪೂರ‌ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಇರುವ ಸೋಮನಾಥ್ ಸೀಡ್ಸ್ ಕಂಪೆನಿ ವಿರುದ್ಧ ಅಕ್ರೋಶ ವ್ಯಕ್ತವಾಗುತ್ತಿದೆ. ವಾಗೀಶಗೌಡ ಪಾಟೀಲ್, ಪ್ರವೀಣಗೌಡ ಪಾಟೀಲ್ ಸಹೋದರರು ಈ ಕಂಪನಿಯನ್ನು ನಡೆಸುತ್ತಿದ್ದರು. ಇದೀಗ ರೈತರಿಗೆ ನೀಡಬೇಕಾಗಿದ್ದ ಲಕ್ಷಾಂತರ ರೂಪಾಯಿ ಹಣವನ್ನು ನೀಡದೆ ಪರಾರಿಯಾಗಿದ್ದು, ಏಜೆಂಟ್ ಮಲ್ಲನಗೌಡ ಮರೆಕನವರ ಕರೆ ತಂದು ರೈತರು ಧರಣಿ ನಡೆಸಿದ್ದಾರೆ.

ಇದನ್ನೂ ಓದಿ: ಕಲಬುರಗಿ ಬಳಿ ಕೆಎಸ್ಆರ್​ಟಿಸಿ ಮತ್ತು ಕ್ರೂಸರ್ ವಾಹನ ಡಿಕ್ಕಿ; ಓರ್ವ ಸಾವು, ಹಲವರಿಗೆ ಗಾಯ

ಆರಂಭದಲ್ಲಿ ವಾಗೀಶಗೌಡ ಹಾಗೂ ಪ್ರವೀಣ ಗೌಡ ಅವರು ರೈತರಿಂದ ಟೊಮ್ಯಾಟೋ ಬೀಜ ಖರೀದಿಸಿ ಸರಿಯಾಗಿ ಹಣವನ್ನು ನೀಡುತ್ತಿದ್ದರು. ನಂತರ ಹಣವನ್ನು ನೀಡದೇ ರೈತರನ್ನು ಸತಾಯಿಸಿದ್ದು, ಅನ್ನದಾತರು ಹಣಕ್ಕಾಗಿ ಮೂರು ವರ್ಷಗಳಿಂದ ಅಳೆದಾಡಿದ್ದಾರೆ. ಈ ನಡುವೆ ಕಂಪನಿಗೂ ಬಾರದೆ ನಾಪತ್ತೆಯಾದ ಸಹೋದರರು, ಮೊಬೈಲ್ ಸ್ವಿಚ್​ ಆಫ್ ಮಾಡಿಕೊಂಡಿದ್ದಾರೆ. ಸುಮಾರು 10ಕ್ಕೂ ಹೆಚ್ಚು ರೈತರಿಗೆ ಈ ಸಹೋದರರು 20 ಲಕ್ಷ ರೂಪಾಯಿ ವಂಚನೆ ಮಾಡಿ ಪರಾರಿಯಾಗಿದ್ದಾರೆ.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ, ಕುಂಚೂರ, ಲಿಂಗದೇವರಕೊಪ್ಪ, ರಾಣೆಬೆಣ್ಣೂರ ತಾಲೂಕಿನ ಡ್ಡದಬೇವಿನಹಳ್ಳಿ ಗ್ರಾಮದ ರೈತರಿಗೆ ವಂಚಕ ಸಹೋದರರು ಮೋಸ ಮಾಡಿದ್ದು, ಧರಣಿ ನಡೆಸಿ ತಮ್ಮ ಹಣವನ್ನು ವಾಪಸ್ ನೀಡುವಂತೆ ಒತ್ತಾಯಿಸಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್