AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮಾವಿನ ಹಣ್ಣಿಗಾಗಿ ತಾಯಿಯನ್ನೇ ಕೊಂದ ಪಾಪಿ ಮಗ..!

Crime News In Kannada: ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಿಳೆಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅಲ್ಲದೆ ಘಟನಾ ಸ್ಥಳದಿಂದ ಹರಿತವಾದ ಆಯುಧಗಳನ್ನು, ಇತರೆ ಹಲವು ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ.

Crime News: ಮಾವಿನ ಹಣ್ಣಿಗಾಗಿ ತಾಯಿಯನ್ನೇ ಕೊಂದ ಪಾಪಿ ಮಗ..!
Crime News
TV9 Web
| Edited By: |

Updated on: Jun 28, 2022 | 7:57 PM

Share

Crime News In Kannada: ನಮ್ಮ ದೇಶದಲ್ಲಿ ಎಂತೆಂತಹ ಕ್ಷುಲ್ಲಕ ಕಾರಣಗಳಿಗೆ ಕೊಲೆಗಳಾಗುತ್ತವೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಕೇವಲ ಮಾವಿನ ಹಣ್ಣಿಗಾಗಿ ಶುರುವಾದ ಜಗಳವು ಒಂದು ಕೊಲೆಯಲ್ಲಿ ಅಂತ್ಯಗೊಳ್ಳುತ್ತದೆ ಎಂದರೆ ಅಚ್ಚರಿಯಾಗದೇ ಇರದು. ಇಂತಹದೊಂದು ಹೃದಯ ವಿದ್ರಾವಕ ಘಟನೆ ನಡೆದಿರುವುದು ಬಿಹಾರದ ಕುಚಯ್‌ಕೋಟ್​ನ ಸಿರಿಶಿಯಾ​ ಎನ್ನುವ ಊರಲ್ಲಿ. ಈ ಜಗಳ ಶುರುವಾಗಿದ್ದು ಕೇವಲ ಮಾವಿನ ಹಣ್ಣನ್ನು ನೀಡುವ ವಿಚಾರಕ್ಕೆ ಅಷ್ಟೇ. ಆದರೆ ಅದು ಕೊನೆಗೊಂಡಿದ್ದು ಹತ್ಯೆಯಲ್ಲಿ. ಹೀಗೆ ಕೊಲೆಯಾದ ಮಹಿಳೆಯ ಹೆಸರು ಬಟೋರಾ ದೇವಿ. ಪೊಲೀಸರ ಮಾಹಿತಿ ಪ್ರಕಾರ, ಸಿರಿಶಿಯಾ ಗ್ರಾಮದಲ್ಲಿ ಬಟೋರಾ ದೇವಿ ಅವರ ಜಾಗದಲ್ಲಿ ಮಾವಿನ ಮರವಿದೆ. ಆ ಮರದಿಂದ ಕೆಲದಿನಗಳ ಹಿಂದೆ ಮಾವುಗಳನ್ನು ಕೊಯ್ಯಲಾಗಿತ್ತು. ಇದನ್ನು ಹಂಚುವ ವಿಚಾರವಾಗಿ ಬಟೋರಾ ದೇವಿಯ ನಾಲ್ವರು ಪುತ್ರರ ನಡುವೆ ಜಗಳ ಶುರುವಾಗಿ ಕೊಲೆಯಲ್ಲಿ ಅಂತ್ಯಗೊಂಡಿದೆ.

ಕೆಲ ದಿನಗಳ ಹಿಂದೆ ಕೊಯ್ಯಲಾಗಿದ್ದ ಮಾವಿನ ಹಣ್ಣನ್ನು ಮಕ್ಕಳಿಗೆ ಹಂಚಲು ತಾಯಿ ಮುಂದಾಗಿದ್ದಳು. ಆದರೆ ಹಣ್ಣಿಗಾಗಿ ಮಕ್ಕಳ ನಡುವಣ ಜಗಳ ತಾರಕ್ಕೇರಿದೆ. ಈ ವೇಳೆ ತಾಯಿ ಬಟೋರಾ ದೇವಿ ಮಧ್ಯ ಪ್ರವೇಶಿಸಿದ್ದರು. ಇದಾಗ್ಯೂ ಜಗಳ ನಿಂತಿರಲಿಲ್ಲ. ಆದರೆ ಎಲ್ಲರನ್ನೂ ಸಮಾಧಾನಪಡಿಸಲು ಮತ್ತೆ ಮುಂದಾಗಿದ್ದಾಳೆ. ಮತ್ತೊಂದೆಡೆ ಸಹೋದರರು ಕೈ ಕೈ ಮಿಲಾಯಿಸಲು ಪ್ರಾರಂಭಿಸಿದ್ದರು. ಈ ವೇಳೆ ಮಧ್ಯೆ ಪ್ರವೇಶಿಸಿದ್ದ ತಾಯಿಯ ಮೇಲೆ ಹಿರಿಯ ಮಗ ರಾಮಶಂಕರ್ ಮಿಶ್ರಾ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಮಗನ ಈ ಮಾರಣಾಂತಿಕ ಹಲ್ಲೆಯಿಂದ ಬಟೋರಾ ದೇವಿ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಕುಚಯ್‌ಕೋಟ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಿಳೆಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅಲ್ಲದೆ ಘಟನಾ ಸ್ಥಳದಿಂದ ಹರಿತವಾದ ಆಯುಧಗಳನ್ನು, ಇತರೆ ಹಲವು ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಅಷ್ಟರಲ್ಲಾಗಲೇ ಆರೋಪಿ ರಾಮಶಂಕರ್ ಮಿಶ್ರಾ ಸ್ಥಳದಿಂದ ಕಾಲ್ಕಿತ್ತಿದ್ದ.

ಇದನ್ನೂ ಓದಿ
Image
Lady Singham: ಕೊನೆಗೂ ಲೇಡಿ ಸಿಂಗಮ್ ಅರೆಸ್ಟ್​..!
Image
Viral Video: ಒಳಗೆ ಸೇರಿದರೆ ಗುಂಡು…ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ಯುವತಿಯ ರಂಪಾಟ..!
Image
Crime Story: ಪೊಲೀಸ್ ಮಗ, ಎಲ್​ಎಲ್​ಬಿ ಪದವೀಧರ: ಯಾರು ಈ ಡಾನ್ ಲಾರೆನ್ಸ್ ಬಿಷ್ಣೋಯ್?
Image
Crime Story: ಕಿಂಗ್ ಆಫ್ ಕ್ರೈಮ್: ದಾವೂದ್ ಇಬ್ರಾಹಿಂಗೆ ನಡುಕ ಹುಟ್ಟಿಸಿದ್ದ ಸ್ಲಂ ಡಾನ್

ತಕ್ಷಣವೇ ಗೋಪಾಲ್‌ಗಂಜ್ ಜಿಲ್ಲೆಯ ಇತರೆ ಪೊಲೀಸ್ ಠಾಣೆಗಳಿಗೆ ಕುಚಯ್‌ಕೋಟ್ ಪೊಲೀಸರು ಮಾಹಿತಿ ನೀಡಿದ್ದರು. ಅದರಂತೆ ಕಾರ್ಯ ಪ್ರವೃತ್ತರಾದ ಪೊಲೀಸರಿಗೆ ರಾಮಶಂಕರ್​ಗೆ ಸಿಕ್ಕಿಬಿದ್ದಿದ್ದಾನೆ. ಅಲ್ಲದೆ ಕೊಲೆಗಡುಕ ಮಗನನ್ನು ಬಂಧಿಸಿ ಪ್ರಾಥಮಿಕ ವಿಚಾರಣೆ ನಡೆಸಿದಾಗ ಮಾವಿನ ಹಣ್ಣಿಗಾಗಿ ಶುರುವಾದ ಜಗಳದಿಂದ ಕೊಲೆ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಎಸ್‌ಡಿಪಿಒ ಸಂಜೀವ್ ಕುಮಾರ್ ತಿಳಿಸಿದ್ದಾರೆ. ಒಟ್ಟಿನಲ್ಲಿ ಕೇವಲ ಮಾವಿನ ಹಣ್ಣಿಗಾಗಿ ನಡೆದ ಭೀಕರ ಕೊಲೆಯ ಸುದ್ದಿ ಕೇಳಿ ಕುಚಯ್‌ಕೋಟ್​ನ ಸಿರಿಶಿಯಾ​ ಗ್ರಾಮಸ್ಥರು ದಂಗಾಗಿದ್ದಾರೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು