Crime News: ಪ್ರೀತಿಗಾಗಿ ಗೆಳೆಯನ ತಲೆಯನ್ನೇ ಕತ್ತರಿಸಿದ 17 ವರ್ಷದ ಯುವಕ; ತ್ರಿಕೋನ ಪ್ರೇಮಕತೆಯ ದುರಂತ ಅಂತ್ಯ

Murder News Today: ತಾನು ಪ್ರೀತಿಸಿದ ಯುವತಿಯನ್ನೇ ಗೆಳೆಯ ಮದನ್ ಕೂಡ ಪ್ರೀತಿಸುತ್ತಿದ್ದಾನೆ ಎಂಬುದು ಗೊತ್ತಾಗುತ್ತಿದ್ದಂತೆ ಕೋಪಗೊಂಡ ಯುವಕ ಎಣ್ಣೆ ಪಾರ್ಟಿಗೆ ಆಹ್ವಾನಿಸಿ ಸ್ನೇಹಿತನನ್ನು ಕೊಲೆ ಮಾಡಿ ತಲೆ ಕತ್ತರಿಸಿದ್ದಾನೆ.

Crime News: ಪ್ರೀತಿಗಾಗಿ ಗೆಳೆಯನ ತಲೆಯನ್ನೇ ಕತ್ತರಿಸಿದ 17 ವರ್ಷದ ಯುವಕ; ತ್ರಿಕೋನ ಪ್ರೇಮಕತೆಯ ದುರಂತ ಅಂತ್ಯ
ಸಂಗ್ರಹ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Aug 03, 2021 | 5:15 PM

ಚೆನ್ನೈ: ತನ್ನ ಲವ್ ಸ್ಟೋರಿಗೆ ಗೆಳೆಯನೇ ಅಡ್ಡಿಯಾದನೆಂಬ ಕೋಪದಲ್ಲಿ 17 ವರ್ಷದ ಯುವಕನೊಬ್ಬ ಆಪ್ತ ಸ್ನೇಹಿತನ ತಲೆ ಕತ್ತರಿಸಿ, ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ತುಟಿಕೊರಿನ್ ಜಿಲ್ಲೆಯಲ್ಲಿ ನಡೆದಿದೆ. ತ್ರಿಕೋನ ಪ್ರೇಮಕತೆಯಿಂದಾಗಿ ಒಬ್ಬ ಯುವಕ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಯುವಕರ ಹುಚ್ಚಾಟದಲ್ಲಿ ಕೊಲೆ ನಡೆದ ಈ ಪ್ರಕರಣಕ್ಕೆ ತಮಿಳುನಾಡು ಬೆಚ್ಚಿಬಿದ್ದಿದೆ.

22 ವರ್ಷದ ಮದನ್ ಕುಮಾರ್ ಎಂಬಾತ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದ. ಕೋವಿಲ್​ಪಟ್ಟಿಯ ಸ್ಟಾಲಿನ್ ಕಾಲೋನಿಯಲ್ಲಿ ವಾಸವಾಗಿದ್ದ ಈತ ಜುಲೈ 29ರಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ. ಆತನಿಗಾಗಿ ಮನೆಯವರು ಎಲ್ಲ ಕಡೆಯೂ ಹುಡುಕಿದ್ದರು. ಕೊನೆಗೆ ಆತನ ಮೃತದೇಹ ಮಾರನೇ ದಿನ ಬೆಳಗ್ಗೆ ಪತ್ತೆಯಾಗಿತ್ತು. ಆತನ ತಲೆ ಮತ್ತು ದೇಹ ಒಂದೊಂದು ಕಡೆ ಬಿದ್ದಿತ್ತು.

ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಪೊಲೀಸರಿಗೆ ಮೃತಪಟ್ಟ ಯುವಕನ ಸ್ನೇಹಿತನ ಬಗ್ಗೆ ಗೊತ್ತಾಗಿತ್ತು. ಬೇರೆ ಗ್ರಾಮದವನಾದ 17 ವರ್ಷದ ಯುವಕ ಕೂಡ ಮದನ್​ ಜೊತೆಗೆ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದ. ಮದನ್​ನ ಊರಿನ 16 ವರ್ಷದ ಯುವತಿಯನ್ನು ಆತ ಪ್ರೀತಿಸುತ್ತಿದ್ದ. 9ನೇ ಕ್ಲಾಸ್​ವರೆಗೂ ಓದಿದ್ದ ಆಕೆ ಬಳಿಕ ಶಾಲೆ ಬಿಟ್ಟು ಮನೆಯಲ್ಲಿದ್ದಳು. ಆಕೆಯ ಜೊತೆಗೆ ಈ ಇಬ್ಬರೂ ಯುವಕರು ಆಪ್ತರಾಗಿದ್ದರು. ಆದರೆ, ಆಕೆಗೆ ಮೃತಪಟ್ಟ ಮದನ್ ಕುಮಾರ್ ಹೆಚ್ಚು ಆತ್ಮೀಯನಾಗಿದ್ದ.

ಆದರೆ, ಆಕೆಯನ್ನು ಬಹಳ ಪ್ರೀತಿಸುತ್ತಿದ್ದ ಆರೋಪಿ ಯುವಕನಿಗೆ ತನ್ನ ಪ್ರೀತಿಗೆ ಗೆಳೆಯ ಮದನ್ ಅಡ್ಡಿಯಾಗುತ್ತಿದ್ದಾನೆ ಎಂಬ ಆತಂಕ ಆತನನ್ನು ಕಾಡುತ್ತಿತ್ತು. ಹೀಗಾಗಿ, ಆತನನ್ನು ಕೊಲ್ಲಲು ನಿರ್ಧರಿಸಿದ್ದ. ಹೀಗಾಗಿ, ಜುಲೈ 29ರಂದು ಗೆಳೆಯನನ್ನು ಆಲ್ಕೋಹಾಲ್ ಕುಡಿಯಲು ಆಹ್ವಾನಿಸಿದ್ದ. ಎಣ್ಣೆ ಪಾರ್ಟಿಗೆಂದು ಸ್ನೇಹಿತನ ಮನೆಗೆ ಬಂದಿದ್ದ ಮದನ್ ದುರಂತ ಅಂತ್ಯ ಕಂಡಿದ್ದಾನೆ.

ಬೈಕ್​ನಲ್ಲಿ ಗೆಳೆಯನ ತೋಟಕ್ಕೆ ಬಂದಿದ್ದ ಮದನ್ ಎಣ್ಣೆ ಪಾರ್ಟಿ ಮಾಡಿದ್ದ. ಮದನ್ ಕುಡಿದು ಟೈಟ್ ಆಗುವುದನ್ನೇ ಕಾಯುತ್ತಿದ್ದ ಆರೋಪಿ ಆತನ ತಲೆಯನ್ನು ಕಡಿದು, ಹತ್ಯೆ ಮಾಡಿದ್ದ. ನಂತರ ಆತನ ಕೈಯಲ್ಲಿದ್ದ ಮೊಬೈಲನ್ನು ಕಸಿದುಕೊಂಡು, ಮದನನ ತಲೆ ಮತ್ತು ತುಂಡಾದ ದೇಹವನ್ನು ಸ್ವಲ್ಪ ದೂರದಲ್ಲಿದ್ದ ಹೊಂಡದಲ್ಲಿ ಹಾಕಿದ್ದ.

ಆರೋಪಿ ಅಪ್ರಾಪ್ತನಾಗಿದ್ದರಿಂದ ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು ಬಾಲಾಪರಾಧಿ ಎಂದು ಪರಿಗಣಿಸಿ, ಬಂಧಿಸಲಾಗಿದೆ. ಈ ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ.

ಇದನ್ನೂ ಓದಿ: Crime News: ಆನ್​ಲೈನ್​ ಗೇಮ್​ನಲ್ಲಿ 40,000 ರೂ. ಕಳೆದುಕೊಂಡ 13 ವರ್ಷದ ಬಾಲಕ; ಅಮ್ಮ ಬೈದಿದ್ದಕ್ಕೆ ಬೇಸರಗೊಂಡು ಆತ್ಮಹತ್ಯೆ

Crime News: ಅಕ್ರಮ ಸಂಬಂಧ ತಂದ ಕಂಟಕ; ಹೆಂಡತಿಯ ಪ್ರಿಯಕರನ ಗುಪ್ತಾಂಗಕ್ಕೆ ಶೂಟ್ ಮಾಡಿದ ಗಂಡ!

(Tamil Nadu 17 Year Old Murders his Friend and Beheaded Body over Love Affair Triangle Love Story)

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ