AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಕಾಂಚೀಪುರಂನಲ್ಲಿ ಬಾಯ್​ಫ್ರೆಂಡ್ ಎದುರೇ ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಆ ಯುವತಿ ಜೋರಾಗಿ ಕಿರುಚಿಕೊಂಡಾಗ ಗಲಾಟೆ ಮಾಡಿದರೆ ಅಲ್ಲೇ ಕೊಲೆ ಮಾಡಿ, ಹೂತುಹಾಕುವುದಾಗಿ ಅವರು ಹೆದರಿಸಿದ್ದಾರೆ. ಇದರಿಂದ ಆಕೆಯ ಬಾಯ್​​ಫ್ರೆಂಡ್ ಕೂಡ ಅಸಹಾಯಕನಾಗಿ ನಿಂತಿದ್ದ.

Crime News: ಕಾಂಚೀಪುರಂನಲ್ಲಿ ಬಾಯ್​ಫ್ರೆಂಡ್ ಎದುರೇ ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 14, 2023 | 5:22 PM

Share

ಚೆನ್ನೈ: ಬೆಂಗಳೂರು-ಪುದುಚೇರಿ ಹೆದ್ದಾರಿ ಬಳಿ ತಮಿಳುನಾಡಿನ ಕಾಂಚೀಪುರಂನಲ್ಲಿ (Kanchipuram) 20 ವರ್ಷದ ಕಾಲೇಜು ವಿದ್ಯಾರ್ಥಿನಿಯ ಬಾಯ್​ಫ್ರೆಂಡ್ ಎದುರಲ್ಲೇ ಆಕೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಗುರುವಾರ ಸಂಜೆ 7 ಗಂಟೆ ವೇಳೆಗೆ ಆ ಯುವತಿ ಮತ್ತು ಆಕೆಯ ಬಾಯ್​ಫ್ರೆಂಡ್ ಖಾಸಗಿ ಕಾಲೇಜಿನ ಬಳಿ ಮಾತನಾಡುತ್ತಿದ್ದಾಗ 5 ಜನರ ಗುಂಪು ಅವರನ್ನು ಸುತ್ತುವರೆದು, ಆ ಯುವಕನಿಗೆ ಚಾಕು ತೋರಿಸಿ ಹೆದರಿಸಿತ್ತು. ನಂತರ ಅವರು ಆ ಯುವತಿಯ ಮೇಲೆ ಒಬ್ಬರಾದ ನಂತರ ಒಬ್ಬರು ಅತ್ಯಾಚಾರ ನಡೆಸಿದ್ದಾರೆ.

ಆ ಯುವತಿ ಜೋರಾಗಿ ಕಿರುಚಿಕೊಂಡಾಗ ಗಲಾಟೆ ಮಾಡಿದರೆ ಅಲ್ಲೇ ಕೊಲೆ ಮಾಡಿ, ಹೂತುಹಾಕುವುದಾಗಿ ಅವರು ಹೆದರಿಸಿದ್ದಾರೆ. ಇದರಿಂದ ಆಕೆಯ ಬಾಯ್​​ಫ್ರೆಂಡ್ ಕೂಡ ಅಸಹಾಯಕನಾಗಿ ನಿಂತಿದ್ದ. ಬಳಿಕ ಆ ಯುವತಿ ಮತ್ತು ಆಕೆಯ ಸ್ನೇಹಿತ ತಪ್ಪಿಸಿಕೊಂಡು ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಬಳಿಕ ಆ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ, ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ತನ್ನ ಮೇಲೆ ಅತ್ಯಾಚಾರವೆಸಗಿದ್ದ ಯುವಕನ ತಾಯಿಯ ಮೇಲೆ ಗುಂಡು ಹಾರಿಸಿದ ಬಾಲಕಿ

ಆ ಕಾಲೇಜಿನ ಬಳಿ ಕತ್ತಲೆ ಇದ್ದುದರಿಂದ ಆಕೆ ಹಾಗೂ ಆಕೆಯ ಸ್ನೇಹಿತ ಯಾರ ಕಣ್ಣಿಗೂ ಬಿದ್ದಿಲ್ಲ. ಆದರೆ, ಆರೋಪಿಗಳಲ್ಲಿ ಒಬ್ಬನ ಹೆಸರು ವಿಮಲ್ ಎಂದು ಆ ಯುವತಿಗೆ ಗೊತ್ತಾಗಿದೆ. ಕಂಠಪೂರ್ತಿ ಕುಡಿದಿದ್ದ ಅವರೆಲ್ಲರೂ ಮಾಸ್ಕ್ ಹಾಕಿಕೊಂಡಿದ್ದರಿಂದ ಅವರ ಮುಖವನ್ನು ಆ ಯುವತಿಗೆ ಗುರುತಿಸಲು ಸಾಧ್ಯವಾಗಿಲ್ಲ.

ನಂತರ ಪೊಲೀಸರು ವಿಮಲ್​ನನ್ನು ವಿಪಡು ಗ್ರಾಮದಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ವಿಮಲ್ ಮೂಲಕ ತಮಿಳುನಾಡು ಪೊಲೀಸರು ಇತರ ನಾಲ್ವರನ್ನು ಮಣಿಕಂದನ್, ಶಿವಕುಮಾರ್, ವಿಘ್ನೇಶ್ ಮತ್ತು ತೆನ್ನರಸು ಎಂದು ಗುರುತಿಸಿದ್ದಾರೆ. ಈ ಎಲ್ಲಾ ಐವರು ಆರೋಪಿಗಳ ವಿರುದ್ಧ ಅತ್ಯಾಚಾರ ಆರೋಪಗಳನ್ನು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ