Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಕಾಂಚೀಪುರಂನಲ್ಲಿ ಬಾಯ್​ಫ್ರೆಂಡ್ ಎದುರೇ ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಆ ಯುವತಿ ಜೋರಾಗಿ ಕಿರುಚಿಕೊಂಡಾಗ ಗಲಾಟೆ ಮಾಡಿದರೆ ಅಲ್ಲೇ ಕೊಲೆ ಮಾಡಿ, ಹೂತುಹಾಕುವುದಾಗಿ ಅವರು ಹೆದರಿಸಿದ್ದಾರೆ. ಇದರಿಂದ ಆಕೆಯ ಬಾಯ್​​ಫ್ರೆಂಡ್ ಕೂಡ ಅಸಹಾಯಕನಾಗಿ ನಿಂತಿದ್ದ.

Crime News: ಕಾಂಚೀಪುರಂನಲ್ಲಿ ಬಾಯ್​ಫ್ರೆಂಡ್ ಎದುರೇ ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 14, 2023 | 5:22 PM

ಚೆನ್ನೈ: ಬೆಂಗಳೂರು-ಪುದುಚೇರಿ ಹೆದ್ದಾರಿ ಬಳಿ ತಮಿಳುನಾಡಿನ ಕಾಂಚೀಪುರಂನಲ್ಲಿ (Kanchipuram) 20 ವರ್ಷದ ಕಾಲೇಜು ವಿದ್ಯಾರ್ಥಿನಿಯ ಬಾಯ್​ಫ್ರೆಂಡ್ ಎದುರಲ್ಲೇ ಆಕೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಗುರುವಾರ ಸಂಜೆ 7 ಗಂಟೆ ವೇಳೆಗೆ ಆ ಯುವತಿ ಮತ್ತು ಆಕೆಯ ಬಾಯ್​ಫ್ರೆಂಡ್ ಖಾಸಗಿ ಕಾಲೇಜಿನ ಬಳಿ ಮಾತನಾಡುತ್ತಿದ್ದಾಗ 5 ಜನರ ಗುಂಪು ಅವರನ್ನು ಸುತ್ತುವರೆದು, ಆ ಯುವಕನಿಗೆ ಚಾಕು ತೋರಿಸಿ ಹೆದರಿಸಿತ್ತು. ನಂತರ ಅವರು ಆ ಯುವತಿಯ ಮೇಲೆ ಒಬ್ಬರಾದ ನಂತರ ಒಬ್ಬರು ಅತ್ಯಾಚಾರ ನಡೆಸಿದ್ದಾರೆ.

ಆ ಯುವತಿ ಜೋರಾಗಿ ಕಿರುಚಿಕೊಂಡಾಗ ಗಲಾಟೆ ಮಾಡಿದರೆ ಅಲ್ಲೇ ಕೊಲೆ ಮಾಡಿ, ಹೂತುಹಾಕುವುದಾಗಿ ಅವರು ಹೆದರಿಸಿದ್ದಾರೆ. ಇದರಿಂದ ಆಕೆಯ ಬಾಯ್​​ಫ್ರೆಂಡ್ ಕೂಡ ಅಸಹಾಯಕನಾಗಿ ನಿಂತಿದ್ದ. ಬಳಿಕ ಆ ಯುವತಿ ಮತ್ತು ಆಕೆಯ ಸ್ನೇಹಿತ ತಪ್ಪಿಸಿಕೊಂಡು ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಬಳಿಕ ಆ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ, ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ತನ್ನ ಮೇಲೆ ಅತ್ಯಾಚಾರವೆಸಗಿದ್ದ ಯುವಕನ ತಾಯಿಯ ಮೇಲೆ ಗುಂಡು ಹಾರಿಸಿದ ಬಾಲಕಿ

ಆ ಕಾಲೇಜಿನ ಬಳಿ ಕತ್ತಲೆ ಇದ್ದುದರಿಂದ ಆಕೆ ಹಾಗೂ ಆಕೆಯ ಸ್ನೇಹಿತ ಯಾರ ಕಣ್ಣಿಗೂ ಬಿದ್ದಿಲ್ಲ. ಆದರೆ, ಆರೋಪಿಗಳಲ್ಲಿ ಒಬ್ಬನ ಹೆಸರು ವಿಮಲ್ ಎಂದು ಆ ಯುವತಿಗೆ ಗೊತ್ತಾಗಿದೆ. ಕಂಠಪೂರ್ತಿ ಕುಡಿದಿದ್ದ ಅವರೆಲ್ಲರೂ ಮಾಸ್ಕ್ ಹಾಕಿಕೊಂಡಿದ್ದರಿಂದ ಅವರ ಮುಖವನ್ನು ಆ ಯುವತಿಗೆ ಗುರುತಿಸಲು ಸಾಧ್ಯವಾಗಿಲ್ಲ.

ನಂತರ ಪೊಲೀಸರು ವಿಮಲ್​ನನ್ನು ವಿಪಡು ಗ್ರಾಮದಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ವಿಮಲ್ ಮೂಲಕ ತಮಿಳುನಾಡು ಪೊಲೀಸರು ಇತರ ನಾಲ್ವರನ್ನು ಮಣಿಕಂದನ್, ಶಿವಕುಮಾರ್, ವಿಘ್ನೇಶ್ ಮತ್ತು ತೆನ್ನರಸು ಎಂದು ಗುರುತಿಸಿದ್ದಾರೆ. ಈ ಎಲ್ಲಾ ಐವರು ಆರೋಪಿಗಳ ವಿರುದ್ಧ ಅತ್ಯಾಚಾರ ಆರೋಪಗಳನ್ನು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು