AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಕಾಂಚೀಪುರಂನಲ್ಲಿ ಬಾಯ್​ಫ್ರೆಂಡ್ ಎದುರೇ ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಆ ಯುವತಿ ಜೋರಾಗಿ ಕಿರುಚಿಕೊಂಡಾಗ ಗಲಾಟೆ ಮಾಡಿದರೆ ಅಲ್ಲೇ ಕೊಲೆ ಮಾಡಿ, ಹೂತುಹಾಕುವುದಾಗಿ ಅವರು ಹೆದರಿಸಿದ್ದಾರೆ. ಇದರಿಂದ ಆಕೆಯ ಬಾಯ್​​ಫ್ರೆಂಡ್ ಕೂಡ ಅಸಹಾಯಕನಾಗಿ ನಿಂತಿದ್ದ.

Crime News: ಕಾಂಚೀಪುರಂನಲ್ಲಿ ಬಾಯ್​ಫ್ರೆಂಡ್ ಎದುರೇ ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 14, 2023 | 5:22 PM

Share

ಚೆನ್ನೈ: ಬೆಂಗಳೂರು-ಪುದುಚೇರಿ ಹೆದ್ದಾರಿ ಬಳಿ ತಮಿಳುನಾಡಿನ ಕಾಂಚೀಪುರಂನಲ್ಲಿ (Kanchipuram) 20 ವರ್ಷದ ಕಾಲೇಜು ವಿದ್ಯಾರ್ಥಿನಿಯ ಬಾಯ್​ಫ್ರೆಂಡ್ ಎದುರಲ್ಲೇ ಆಕೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಗುರುವಾರ ಸಂಜೆ 7 ಗಂಟೆ ವೇಳೆಗೆ ಆ ಯುವತಿ ಮತ್ತು ಆಕೆಯ ಬಾಯ್​ಫ್ರೆಂಡ್ ಖಾಸಗಿ ಕಾಲೇಜಿನ ಬಳಿ ಮಾತನಾಡುತ್ತಿದ್ದಾಗ 5 ಜನರ ಗುಂಪು ಅವರನ್ನು ಸುತ್ತುವರೆದು, ಆ ಯುವಕನಿಗೆ ಚಾಕು ತೋರಿಸಿ ಹೆದರಿಸಿತ್ತು. ನಂತರ ಅವರು ಆ ಯುವತಿಯ ಮೇಲೆ ಒಬ್ಬರಾದ ನಂತರ ಒಬ್ಬರು ಅತ್ಯಾಚಾರ ನಡೆಸಿದ್ದಾರೆ.

ಆ ಯುವತಿ ಜೋರಾಗಿ ಕಿರುಚಿಕೊಂಡಾಗ ಗಲಾಟೆ ಮಾಡಿದರೆ ಅಲ್ಲೇ ಕೊಲೆ ಮಾಡಿ, ಹೂತುಹಾಕುವುದಾಗಿ ಅವರು ಹೆದರಿಸಿದ್ದಾರೆ. ಇದರಿಂದ ಆಕೆಯ ಬಾಯ್​​ಫ್ರೆಂಡ್ ಕೂಡ ಅಸಹಾಯಕನಾಗಿ ನಿಂತಿದ್ದ. ಬಳಿಕ ಆ ಯುವತಿ ಮತ್ತು ಆಕೆಯ ಸ್ನೇಹಿತ ತಪ್ಪಿಸಿಕೊಂಡು ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಬಳಿಕ ಆ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ, ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ತನ್ನ ಮೇಲೆ ಅತ್ಯಾಚಾರವೆಸಗಿದ್ದ ಯುವಕನ ತಾಯಿಯ ಮೇಲೆ ಗುಂಡು ಹಾರಿಸಿದ ಬಾಲಕಿ

ಆ ಕಾಲೇಜಿನ ಬಳಿ ಕತ್ತಲೆ ಇದ್ದುದರಿಂದ ಆಕೆ ಹಾಗೂ ಆಕೆಯ ಸ್ನೇಹಿತ ಯಾರ ಕಣ್ಣಿಗೂ ಬಿದ್ದಿಲ್ಲ. ಆದರೆ, ಆರೋಪಿಗಳಲ್ಲಿ ಒಬ್ಬನ ಹೆಸರು ವಿಮಲ್ ಎಂದು ಆ ಯುವತಿಗೆ ಗೊತ್ತಾಗಿದೆ. ಕಂಠಪೂರ್ತಿ ಕುಡಿದಿದ್ದ ಅವರೆಲ್ಲರೂ ಮಾಸ್ಕ್ ಹಾಕಿಕೊಂಡಿದ್ದರಿಂದ ಅವರ ಮುಖವನ್ನು ಆ ಯುವತಿಗೆ ಗುರುತಿಸಲು ಸಾಧ್ಯವಾಗಿಲ್ಲ.

ನಂತರ ಪೊಲೀಸರು ವಿಮಲ್​ನನ್ನು ವಿಪಡು ಗ್ರಾಮದಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ವಿಮಲ್ ಮೂಲಕ ತಮಿಳುನಾಡು ಪೊಲೀಸರು ಇತರ ನಾಲ್ವರನ್ನು ಮಣಿಕಂದನ್, ಶಿವಕುಮಾರ್, ವಿಘ್ನೇಶ್ ಮತ್ತು ತೆನ್ನರಸು ಎಂದು ಗುರುತಿಸಿದ್ದಾರೆ. ಈ ಎಲ್ಲಾ ಐವರು ಆರೋಪಿಗಳ ವಿರುದ್ಧ ಅತ್ಯಾಚಾರ ಆರೋಪಗಳನ್ನು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!