AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಕಾಂಚೀಪುರಂನಲ್ಲಿ ಬಾಯ್​ಫ್ರೆಂಡ್ ಎದುರೇ ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಆ ಯುವತಿ ಜೋರಾಗಿ ಕಿರುಚಿಕೊಂಡಾಗ ಗಲಾಟೆ ಮಾಡಿದರೆ ಅಲ್ಲೇ ಕೊಲೆ ಮಾಡಿ, ಹೂತುಹಾಕುವುದಾಗಿ ಅವರು ಹೆದರಿಸಿದ್ದಾರೆ. ಇದರಿಂದ ಆಕೆಯ ಬಾಯ್​​ಫ್ರೆಂಡ್ ಕೂಡ ಅಸಹಾಯಕನಾಗಿ ನಿಂತಿದ್ದ.

Crime News: ಕಾಂಚೀಪುರಂನಲ್ಲಿ ಬಾಯ್​ಫ್ರೆಂಡ್ ಎದುರೇ ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 14, 2023 | 5:22 PM

Share

ಚೆನ್ನೈ: ಬೆಂಗಳೂರು-ಪುದುಚೇರಿ ಹೆದ್ದಾರಿ ಬಳಿ ತಮಿಳುನಾಡಿನ ಕಾಂಚೀಪುರಂನಲ್ಲಿ (Kanchipuram) 20 ವರ್ಷದ ಕಾಲೇಜು ವಿದ್ಯಾರ್ಥಿನಿಯ ಬಾಯ್​ಫ್ರೆಂಡ್ ಎದುರಲ್ಲೇ ಆಕೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಗುರುವಾರ ಸಂಜೆ 7 ಗಂಟೆ ವೇಳೆಗೆ ಆ ಯುವತಿ ಮತ್ತು ಆಕೆಯ ಬಾಯ್​ಫ್ರೆಂಡ್ ಖಾಸಗಿ ಕಾಲೇಜಿನ ಬಳಿ ಮಾತನಾಡುತ್ತಿದ್ದಾಗ 5 ಜನರ ಗುಂಪು ಅವರನ್ನು ಸುತ್ತುವರೆದು, ಆ ಯುವಕನಿಗೆ ಚಾಕು ತೋರಿಸಿ ಹೆದರಿಸಿತ್ತು. ನಂತರ ಅವರು ಆ ಯುವತಿಯ ಮೇಲೆ ಒಬ್ಬರಾದ ನಂತರ ಒಬ್ಬರು ಅತ್ಯಾಚಾರ ನಡೆಸಿದ್ದಾರೆ.

ಆ ಯುವತಿ ಜೋರಾಗಿ ಕಿರುಚಿಕೊಂಡಾಗ ಗಲಾಟೆ ಮಾಡಿದರೆ ಅಲ್ಲೇ ಕೊಲೆ ಮಾಡಿ, ಹೂತುಹಾಕುವುದಾಗಿ ಅವರು ಹೆದರಿಸಿದ್ದಾರೆ. ಇದರಿಂದ ಆಕೆಯ ಬಾಯ್​​ಫ್ರೆಂಡ್ ಕೂಡ ಅಸಹಾಯಕನಾಗಿ ನಿಂತಿದ್ದ. ಬಳಿಕ ಆ ಯುವತಿ ಮತ್ತು ಆಕೆಯ ಸ್ನೇಹಿತ ತಪ್ಪಿಸಿಕೊಂಡು ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಬಳಿಕ ಆ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ, ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ತನ್ನ ಮೇಲೆ ಅತ್ಯಾಚಾರವೆಸಗಿದ್ದ ಯುವಕನ ತಾಯಿಯ ಮೇಲೆ ಗುಂಡು ಹಾರಿಸಿದ ಬಾಲಕಿ

ಆ ಕಾಲೇಜಿನ ಬಳಿ ಕತ್ತಲೆ ಇದ್ದುದರಿಂದ ಆಕೆ ಹಾಗೂ ಆಕೆಯ ಸ್ನೇಹಿತ ಯಾರ ಕಣ್ಣಿಗೂ ಬಿದ್ದಿಲ್ಲ. ಆದರೆ, ಆರೋಪಿಗಳಲ್ಲಿ ಒಬ್ಬನ ಹೆಸರು ವಿಮಲ್ ಎಂದು ಆ ಯುವತಿಗೆ ಗೊತ್ತಾಗಿದೆ. ಕಂಠಪೂರ್ತಿ ಕುಡಿದಿದ್ದ ಅವರೆಲ್ಲರೂ ಮಾಸ್ಕ್ ಹಾಕಿಕೊಂಡಿದ್ದರಿಂದ ಅವರ ಮುಖವನ್ನು ಆ ಯುವತಿಗೆ ಗುರುತಿಸಲು ಸಾಧ್ಯವಾಗಿಲ್ಲ.

ನಂತರ ಪೊಲೀಸರು ವಿಮಲ್​ನನ್ನು ವಿಪಡು ಗ್ರಾಮದಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ವಿಮಲ್ ಮೂಲಕ ತಮಿಳುನಾಡು ಪೊಲೀಸರು ಇತರ ನಾಲ್ವರನ್ನು ಮಣಿಕಂದನ್, ಶಿವಕುಮಾರ್, ವಿಘ್ನೇಶ್ ಮತ್ತು ತೆನ್ನರಸು ಎಂದು ಗುರುತಿಸಿದ್ದಾರೆ. ಈ ಎಲ್ಲಾ ಐವರು ಆರೋಪಿಗಳ ವಿರುದ್ಧ ಅತ್ಯಾಚಾರ ಆರೋಪಗಳನ್ನು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?