AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಕಾಂಚೀಪುರಂನಲ್ಲಿ ಬಾಯ್​ಫ್ರೆಂಡ್ ಎದುರೇ ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಆ ಯುವತಿ ಜೋರಾಗಿ ಕಿರುಚಿಕೊಂಡಾಗ ಗಲಾಟೆ ಮಾಡಿದರೆ ಅಲ್ಲೇ ಕೊಲೆ ಮಾಡಿ, ಹೂತುಹಾಕುವುದಾಗಿ ಅವರು ಹೆದರಿಸಿದ್ದಾರೆ. ಇದರಿಂದ ಆಕೆಯ ಬಾಯ್​​ಫ್ರೆಂಡ್ ಕೂಡ ಅಸಹಾಯಕನಾಗಿ ನಿಂತಿದ್ದ.

Crime News: ಕಾಂಚೀಪುರಂನಲ್ಲಿ ಬಾಯ್​ಫ್ರೆಂಡ್ ಎದುರೇ ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 14, 2023 | 5:22 PM

Share

ಚೆನ್ನೈ: ಬೆಂಗಳೂರು-ಪುದುಚೇರಿ ಹೆದ್ದಾರಿ ಬಳಿ ತಮಿಳುನಾಡಿನ ಕಾಂಚೀಪುರಂನಲ್ಲಿ (Kanchipuram) 20 ವರ್ಷದ ಕಾಲೇಜು ವಿದ್ಯಾರ್ಥಿನಿಯ ಬಾಯ್​ಫ್ರೆಂಡ್ ಎದುರಲ್ಲೇ ಆಕೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಗುರುವಾರ ಸಂಜೆ 7 ಗಂಟೆ ವೇಳೆಗೆ ಆ ಯುವತಿ ಮತ್ತು ಆಕೆಯ ಬಾಯ್​ಫ್ರೆಂಡ್ ಖಾಸಗಿ ಕಾಲೇಜಿನ ಬಳಿ ಮಾತನಾಡುತ್ತಿದ್ದಾಗ 5 ಜನರ ಗುಂಪು ಅವರನ್ನು ಸುತ್ತುವರೆದು, ಆ ಯುವಕನಿಗೆ ಚಾಕು ತೋರಿಸಿ ಹೆದರಿಸಿತ್ತು. ನಂತರ ಅವರು ಆ ಯುವತಿಯ ಮೇಲೆ ಒಬ್ಬರಾದ ನಂತರ ಒಬ್ಬರು ಅತ್ಯಾಚಾರ ನಡೆಸಿದ್ದಾರೆ.

ಆ ಯುವತಿ ಜೋರಾಗಿ ಕಿರುಚಿಕೊಂಡಾಗ ಗಲಾಟೆ ಮಾಡಿದರೆ ಅಲ್ಲೇ ಕೊಲೆ ಮಾಡಿ, ಹೂತುಹಾಕುವುದಾಗಿ ಅವರು ಹೆದರಿಸಿದ್ದಾರೆ. ಇದರಿಂದ ಆಕೆಯ ಬಾಯ್​​ಫ್ರೆಂಡ್ ಕೂಡ ಅಸಹಾಯಕನಾಗಿ ನಿಂತಿದ್ದ. ಬಳಿಕ ಆ ಯುವತಿ ಮತ್ತು ಆಕೆಯ ಸ್ನೇಹಿತ ತಪ್ಪಿಸಿಕೊಂಡು ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಬಳಿಕ ಆ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ, ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ತನ್ನ ಮೇಲೆ ಅತ್ಯಾಚಾರವೆಸಗಿದ್ದ ಯುವಕನ ತಾಯಿಯ ಮೇಲೆ ಗುಂಡು ಹಾರಿಸಿದ ಬಾಲಕಿ

ಆ ಕಾಲೇಜಿನ ಬಳಿ ಕತ್ತಲೆ ಇದ್ದುದರಿಂದ ಆಕೆ ಹಾಗೂ ಆಕೆಯ ಸ್ನೇಹಿತ ಯಾರ ಕಣ್ಣಿಗೂ ಬಿದ್ದಿಲ್ಲ. ಆದರೆ, ಆರೋಪಿಗಳಲ್ಲಿ ಒಬ್ಬನ ಹೆಸರು ವಿಮಲ್ ಎಂದು ಆ ಯುವತಿಗೆ ಗೊತ್ತಾಗಿದೆ. ಕಂಠಪೂರ್ತಿ ಕುಡಿದಿದ್ದ ಅವರೆಲ್ಲರೂ ಮಾಸ್ಕ್ ಹಾಕಿಕೊಂಡಿದ್ದರಿಂದ ಅವರ ಮುಖವನ್ನು ಆ ಯುವತಿಗೆ ಗುರುತಿಸಲು ಸಾಧ್ಯವಾಗಿಲ್ಲ.

ನಂತರ ಪೊಲೀಸರು ವಿಮಲ್​ನನ್ನು ವಿಪಡು ಗ್ರಾಮದಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ವಿಮಲ್ ಮೂಲಕ ತಮಿಳುನಾಡು ಪೊಲೀಸರು ಇತರ ನಾಲ್ವರನ್ನು ಮಣಿಕಂದನ್, ಶಿವಕುಮಾರ್, ವಿಘ್ನೇಶ್ ಮತ್ತು ತೆನ್ನರಸು ಎಂದು ಗುರುತಿಸಿದ್ದಾರೆ. ಈ ಎಲ್ಲಾ ಐವರು ಆರೋಪಿಗಳ ವಿರುದ್ಧ ಅತ್ಯಾಚಾರ ಆರೋಪಗಳನ್ನು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್