AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ದಲಿತ ಮಹಿಳೆಗೆ ಬ್ಲಾಕ್​ಮೇಲ್ ಮಾಡಿ, ಶಾಲಾ ವಿದ್ಯಾರ್ಥಿಗಳು ಸೇರಿ 8 ಜನರಿಂದ ನಿರಂತರ ಅತ್ಯಾಚಾರ!

ತನ್ನ ಜೊತೆಗಿನ ಲೈಂಗಿಕ ಕ್ರಿಯೆಯ ವಿಡಿಯೋವನ್ನು ಬಳಸಿಕೊಂಡು ತನ್ನ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿ, ಬೆದರಿಕೆ ಹಾಕಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ.

Crime News: ದಲಿತ ಮಹಿಳೆಗೆ ಬ್ಲಾಕ್​ಮೇಲ್ ಮಾಡಿ, ಶಾಲಾ ವಿದ್ಯಾರ್ಥಿಗಳು ಸೇರಿ 8 ಜನರಿಂದ ನಿರಂತರ ಅತ್ಯಾಚಾರ!
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Mar 22, 2022 | 5:58 PM

Share

ಚೆನ್ನೈ: ಪೊಲ್ಲಾಚಿ ಅತ್ಯಾಚಾರ ಪ್ರಕರಣ ಎಷ್ಟು ಕುಖ್ಯಾತಿ ಗಳಿಸಿತ್ತು ಎಂಬುದು ಎಲ್ಲರಿಗೂ ಗೊತ್ತೇ ಇದೆ. ಅದೇ ರೀತಿಯ ಮತ್ತೊಂದು ಘಟನೆ ತಮಿಳುನಾಡಿನಲ್ಲಿ (Tamil Nadu) ನಡೆದಿದ್ದು, 22 ವರ್ಷದ ದಲಿತ ಮಹಿಳೆಯ ಮೇಲೆ 7 ತಿಂಗಳ ಅವಧಿಯಲ್ಲಿ ಪದೇಪದೆ ಲೈಂಗಿಕ ದೌರ್ಜನ್ಯ (Rape) ನಡೆಸಿದ ಆರೋಪದಲ್ಲಿ ಮೂವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ 8 ಜನರನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಗಳು ಮಹಿಳೆಯ ಖಾಸಗಿ ವಿಡಿಯೋಗಳನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಮತ್ತು ಹಲವು ತಿಂಗಳಿನಿಂದ ಆಕೆಯ ಮೇಲೆ ಅತ್ಯಾಚಾರವನ್ನು ನಡೆಸುತ್ತಿದ್ದರು ಎನ್ನಲಾಗಿದೆ.

ಹರಿಹರನ್ ಅಲಿಯಾಸ್ ಸರವಣನ್ ಎಂಬ 27 ವರ್ಷದ ವ್ಯಕ್ತಿ ಮಹಿಳೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಬೆಳೆಸಿದ್ದ. ಅವರಿಬ್ಬರೂ ಸ್ನೇಹಿತರಾಗಿದ್ದರು. ಇದಲ್ಲದೆ, ಹರಿಹರನ್ ಮತ್ತು ಆ ಮಹಿಳೆ ದೈಹಿಕ ಸಂಬಂಧವನ್ನು ಹೊಂದಿದ್ದರು. ಒಂದು ದಿನ ಹರಿಹರನ್ ತನ್ನ ಸ್ನೇಹಿತರೊಂದಿಗೆ ಇದ್ದಾಗ, ಆತ ಆ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವಾಗ ಮಾಡಿಕೊಂಡಿದ್ದ ವಿಡಿಯೋವನ್ನು ವೀಕ್ಷಿಸಿದರು. ನಂತರ ಆ ಗೆಳೆಯರೆಲ್ಲರೂ ಸೇರಿ ಆಕೆಗೆ ಬೆದರಿಕೆ ಹಾಕಿ, 2021ರ ಆಗಸ್ಟ್ ಮತ್ತು 2022ರ ಮಾರ್ಚ್ ನಡುವೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪಟ್ಟಿಯಲ್ಲಿ ಡಿಎಂಕೆ ಪದಾಧಿಕಾರಿ ಮತ್ತು ಮೂವರು ಶಾಲೆಗೆ ಹೋಗುವ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.

ಸಂತ್ರಸ್ತೆ ಮಹಿಳಾ ಸಹಾಯವಾಣಿಯನ್ನು ಸಂಪರ್ಕಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ತನ್ನ ಜೊತೆಗಿನ ಲೈಂಗಿಕ ಕ್ರಿಯೆಯ ವಿಡಿಯೋವನ್ನು ಬಳಸಿಕೊಂಡು ತನ್ನ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿ, ಬೆದರಿಕೆ ಹಾಕಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಈ ಪ್ರಕರಣದ ಆರೋಪಿಗಳಾದ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ವ್ಯಕ್ತಿಗಳು ಬೇರೆ ಯಾವುದೇ ರೀತಿಯ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ .

ಇದನ್ನೂ ಓದಿ: Rape: ರೈಲಿಗಾಗಿ ಕಾಯುತ್ತಿರುವಾಗ ರೈಲ್ವೆ ಸ್ಟೇಷನ್​ನ ಶೌಚಾಲಯದಲ್ಲಿ ಯುವತಿ ಮೇಲೆ ಅತ್ಯಾಚಾರ!

Shocking News: 5 ವರ್ಷಗಳಿಂದ ಅಪ್ಪ, ಅಣ್ಣ, ಅಜ್ಜನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ!

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್