AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಆಂಧ್ರಪ್ರದೇಶದ ಮನೆಯಲ್ಲಿ ಟಿಡಿಪಿ ನಾಯಕ ವೆನ್ನಾ ಬಾಲಕೋಟಿ ರೆಡ್ಡಿ ಮೇಲೆ ಗುಂಡಿನ ದಾಳಿ

ಬುಧವಾರ ರಾತ್ರಿ 10.30ರ ಸುಮಾರಿಗೆ ಟಿಡಿಪಿ ನಾಯಕ ಮತ್ತು ಮಾಜಿ ಸಂಸದ ವೆನ್ನಾ ಬಾಲಕೋಟಿ ರೆಡ್ಡಿ ಅವರ ಮೇಲೆ ಪಿ. ವೆಂಕಟೇಶ್ವರ್ ರೆಡ್ಡಿ ಗುಂಡು ಹಾರಿಸಿದ್ದಾರೆ.

Crime News: ಆಂಧ್ರಪ್ರದೇಶದ ಮನೆಯಲ್ಲಿ ಟಿಡಿಪಿ ನಾಯಕ ವೆನ್ನಾ ಬಾಲಕೋಟಿ ರೆಡ್ಡಿ ಮೇಲೆ ಗುಂಡಿನ ದಾಳಿ
ಸಾಂಧರ್ಬಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Feb 02, 2023 | 10:43 AM

Share

ಹೈದರಾಬಾದ್: ತೆಲುಗು ದೇಶಂ ಪಕ್ಷದ (TDP) ನಾಯಕ ವೆನ್ನಾ ಬಾಲಕೋಟಿ ರೆಡ್ಡಿ (Venna Balakoti Reddy) ಮೇಲೆ ಬುಧವಾರ ಅವರ ನಿವಾಸದಲ್ಲಿ ಗುಂಡು ಹಾರಿಸಲಾಗಿದೆ. ಈ ಗುಂಡಿನ ದಾಳಿಯಿಂದ ಬಾಲಕೋಟಿ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದಾಳಿಗೆ ವೈಎಸ್‌ಆರ್‌ಸಿಪಿ (YSRCP) ಜವಾಬ್ದಾರಿ ಎಂದು ಟಿಡಿಪಿ ನಾಯಕ ಆರೋಪಿಸಿದ್ದಾರೆ.

ಪೊಲೀಸರ ಪ್ರಕಾರ, ಬುಧವಾರ ರಾತ್ರಿ 10.30ರ ಸುಮಾರಿಗೆ ಟಿಡಿಪಿ ನಾಯಕ ಮತ್ತು ಮಾಜಿ ಸಂಸದ ವೆನ್ನಾ ಬಾಲಕೋಟಿ ರೆಡ್ಡಿ ಅವರ ಮೇಲೆ ಪಿ. ವೆಂಕಟೇಶ್ವರ್ ರೆಡ್ಡಿ ಗುಂಡು ಹಾರಿಸಿದ್ದಾರೆ. ರಾತ್ರಿ ವೆಂಕಟೇಶ್ವರ್ ರೆಡ್ಡಿ ಅವರು ಬಾಲಕೋಟಿ ರೆಡ್ಡಿ ಮನೆಯ ಬಾಗಿಲು ತಟ್ಟಿದ್ದಾರೆ ಎನ್ನಲಾಗಿದೆ. ಬಾಲಕೋಟಿ ರೆಡ್ಡಿ ಬಾಗಿಲು ತೆರೆದ ಕೂಡಲೇ ಗುಂಡು ಹಾರಿಸಿದ್ದು, ಗುಂಡು ಅವರ ಹೊಟ್ಟೆಗೆ ತಗುಲಿದೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Crime: ಬೆಂಗಳೂರಿನಲ್ಲೊಂದು ಭೀಕರ ಘಟನೆ; ಗರ್ಲ್​ಫ್ರೆಂಡ್​ನ 3 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ, ಕೊಲೆ

ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾರೆ. ದಾಳಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಕಳೆದ ವರ್ಷವೂ ಬಾಲಕೋಟಿ ರೆಡ್ಡಿ ವಾಕಿಂಗ್‌ಗೆ ತೆರಳಿದ್ದ ವೇಳೆ ಅವರ ಮೇಲೆ ಚಾಕು ಮತ್ತು ಕೊಡಲಿಯಿಂದ ಹಲ್ಲೆ ನಡೆಸಿ ಹತ್ಯೆ ಯತ್ನ ನಡೆದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ