AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬುಡಕಟ್ಟು ವ್ಯಕ್ತಿಯನ್ನು ಲಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಜನರು; ಗಂಭೀರವಾಗಿ ಗಾಯಗೊಂಡಾತ ಸಾವು

ಭೀಲ್ ಬುಡಕಟ್ಟು ಸಮುದಾಯಕ್ಕೆ ಸೇರಿದ ಕನ್ಹಯ್ಯಲಾಲ್ ಎಂಬಾತ ಕಳ್ಳತನ ಮಾಡಿದ್ದಾನೆ ಎಂಬ ಆರೋಪದಲ್ಲಿ ಸಿಂಗೋಳಿ ಸಮೀಪದ ಗ್ರಾಮಸ್ಥರು ಆತನನ್ನು ಹೊಡೆದು, ಬಟ್ಟೆಯೆಲ್ಲ ಹರಿದು, ಲಾರಿಗೆ ಕಟ್ಟಿಕೊಂಡು ಎಳೆದುಕೊಂಡು ಹೋಗಿದ್ದಾರೆ.

Crime News: ಬುಡಕಟ್ಟು ವ್ಯಕ್ತಿಯನ್ನು ಲಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಜನರು; ಗಂಭೀರವಾಗಿ ಗಾಯಗೊಂಡಾತ ಸಾವು
ಬುಡಕಟ್ಟು ಸಮುದಾಯದ ವ್ಯಕ್ತಿಯನ್ನು ರಸ್ತೆಯಲ್ಲಿ ಎಳೆದೊಯ್ದ ಜನರು
TV9 Web
| Edited By: |

Updated on:Aug 30, 2021 | 6:36 PM

Share

ಭೂಪಾಲ್: ಕಳ್ಳತನದ ಆರೋಪದಲ್ಲಿ 45 ವರ್ಷದ ವ್ಯಕ್ತಿಯೊಬ್ಬನನ್ನು ಮನಬಂದಂತೆ ಥಳಿಸಿ, ಕಾಲಿಗೆ ಹಗ್ಗ ಕಟ್ಟಿ, ಆ ಹಗ್ಗವನ್ನು ಲಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋಗಿದ್ದಾರೆ. ಡಾಂಬರಿನ ರಸ್ತೆಯಲ್ಲಿ ಎಳೆದುಕೊಂಡು ಹೋಗಿದ್ದಕ್ಕೆ ಆ ವ್ಯಕ್ತಿಯ ಮೈ ಮೇಲೆ ಗಾಯಗಳಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಭೀಲ್ ಬುಡಕಟ್ಟು ಸಮುದಾಯಕ್ಕೆ ಸೇರಿದ ಕನ್ಹಯ್ಯಲಾಲ್ ಎಂಬಾತ ಕಳ್ಳತನ ಮಾಡಿದ್ದಾನೆ ಎಂಬ ಆರೋಪದಲ್ಲಿ ಸಿಂಗೋಳಿ ಸಮೀಪದ ಗ್ರಾಮಸ್ಥರು ಆತನನ್ನು ಹೊಡೆದು, ಬಟ್ಟೆಯೆಲ್ಲ ಹರಿದು, ಲಾರಿಗೆ ಕಟ್ಟಿಕೊಂಡು ಎಳೆದುಕೊಂಡು ಹೋಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಆತ ಸಾವನ್ನಪ್ಪಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬುಡಕಟ್ಟು ಸಮುದಾಯದ ವ್ಯಕ್ತಿಗೆ ಥಳಿಸಿ, ಎಳೆದುಕೊಂಡು ಹೋಗುತ್ತಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಆತನನ್ನು ಹೊಡೆದವರೇ ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಧ್ಯಪ್ರದೇಶದ ಮಾಜಿ ಸಿಎಂ ಕಮಲನಾಥ್ ಕೂಡ ಟ್ವೀಟ್ ಮಾಡಿದ್ದು, ಮಧ್ಯಪ್ರದೇಶದಲ್ಲಿ ಏನು ನಡೆಯುತ್ತಿದೆ? ಬುಡಕಟ್ಟು ಸಮುದಾಯದ ವ್ಯಕ್ತಿಯನ್ನು ಹೀನಾಯವಾಗಿ ಹೊಡೆದು, ರಸ್ತೆಯಲ್ಲಿ ಎಳೆದುಕೊಂಡು ಹೋಗಲಾಗಿದೆ. ವಾಹನಕ್ಕೆ ಕಟ್ಟಿಕೊಂಡು ಈ ರೀತಿ ಎಳೆದುಕೊಂಡು ಹೋಗಿರುವ ಅಮಾನವೀಯ ಕೃತ್ಯವೆಸಗಿದವರಿಗೆ ಶಿಕ್ಷೆ ಆಗಲೇಬೇಕು. ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಅಮಾನುಷ ಕೃತ್ಯಗಳು ಹೆಚ್ಚಾಗಿವೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Crime News: ಅಕ್ರಮ ಸಂಬಂಧದ ಶಂಕೆ; ಹೆಂಡತಿಯ ಗುಪ್ತಾಂಗಕ್ಕೆ ಹೊಲಿಗೆ ಹಾಕಿ ಮುಚ್ಚಿದ ಪತಿರಾಯ!

Crime News: ತ್ರಿಶೂಲದಿಂದ ಇರಿದು ಅರ್ಚಕನ ಬರ್ಬರ ಹತ್ಯೆ; ದೇವಸ್ಥಾನದಲ್ಲಿ ಅರೆ ಸುಟ್ಟ ಶವ ಪತ್ತೆ

(Crime News: Tribal man dies after being beaten up tied to vehicle and dragged on Theft Suspicion)

Published On - 6:35 pm, Mon, 30 August 21

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ