AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮಗಳೊಂದಿಗೆ ತಾನೂ ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆ

ಪೂಂಗೋಡಿಯವರ ಪತಿ ಕಾಳಿದಾಸ್ 6 ವರ್ಷಗಳ ಹಿಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಯ ನಂತರ ಪೂಂಗೋಡಿ ತನ್ನ ಮಗಳು ವರ್ಷಾ ಜೊತೆಗೆ ತನ್ನ ತಾಯಿ ಸರಸ್ವತಿಯೊಂದಿಗೆ ವಾಸಿಸಲು ಪ್ರಾರಂಭಿಸಿದ್ದರು.

Crime News: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮಗಳೊಂದಿಗೆ ತಾನೂ ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Jul 26, 2022 | 3:16 PM

Share

ಚೆನ್ನೈ: ತಮಿಳುನಾಡಿನ ತಿರುಪುರದಲ್ಲಿ ಮಹಿಳೆಯೊಬ್ಬರು ತನ್ನ 10 ವರ್ಷದ ಮಗಳೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿರುಪ್ಪೂರ್ ಜಿಲ್ಲೆಯ ಧರ್ಮಪುರಂ ಬಳಿಯ ಅಲಂಗಿಯಂ ಕಾಮರಾಜರ್ ಪಟ್ಟಣದ 28 ವರ್ಷದ ಪೂಂಗೋಡಿ ಎಂಬ ವಿಧವೆ ಆತ್ಮಹತ್ಯೆ (Suicide) ಮಾಡಿಕೊಂಡಾಕೆ. ಪೂಂಗೋಡಿಯವರ ಪತಿ ಕಾಳಿದಾಸ್ ಅವರು ಸುಮಾರು 6 ವರ್ಷಗಳ ಹಿಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಯ ನಂತರ ಪೂಂಗೋಡಿ ತನ್ನ ಮಗಳು ವರ್ಷಾ ಜೊತೆಗೆ ತನ್ನ ತಾಯಿ ಸರಸ್ವತಿಯೊಂದಿಗೆ ವಾಸಿಸಲು ಪ್ರಾರಂಭಿಸಿದ್ದರು.

ಪೂಂಗೋಡಿ ಧಾರಾಪುರಂ ಪ್ರದೇಶದ ಖಾಸಗಿ ಬಟ್ಟೆ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಆಕೆಯ ಮಗಳು ವರ್ಷಾ ಸರ್ಕಾರಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದಳು. ಪೂಂಗೋಡಿ 2 ತಿಂಗಳ ಹಿಂದೆ ತನ್ನ ಕೆಲಸವನ್ನು ತೊರೆದು ತಮಿಳುನಾಡು ಪಬ್ಲಿಕ್ ಸರ್ವಿಸ್ ಕಮಿಷನ್ (TNPSC) ಪರೀಕ್ಷೆಗೆ ತಯಾರಿ ಆರಂಭಿಸಿದ್ದರು. ಅವರು ಜುಲೈ 24ರಂದು ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಅವರಿಗೆ ಪರೀಕ್ಷೆಯನ್ನು ಚೆನ್ನಾಗಿ ಬರೆಯಲು ಸಾಧ್ಯವಾಗಿರಲಿಲ್ಲ. ಪರೀಕ್ಷೆಯಲ್ಲಿ ಪ್ರಶ್ನೆಗಳು ಕಠಿಣವಾಗಿತ್ತು ಎಂದು ಎಲ್ಲರ ಬಳಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ವಿದ್ಯಾರ್ಥಿನಿ ಆತ್ಮಹತ್ಯೆ: ತಮಿಳುನಾಡಿನ ಕಲ್ಲಾಕುರಿಚಿ ಉದ್ವಿಗ್ನ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಪೂಂಗೋಡಿ ತನಗೆ ಸರಿಯಾದ ಕೆಲಸ ಸಿಗುತ್ತಿಲ್ಲ ಎಂದು ನಿರಾಶೆಗೊಂಡಿದ್ದರು. ಇದೇ ಕಾರಣದಿಂದ ಸೋಮವಾರ ಬೆಳಗ್ಗೆ ಮನೆಯಲ್ಲಿ ಒಬ್ಬಳೇ ಇದ್ದ ಮಗಳು ವರ್ಷಾಳನ್ನು ನೇಣು ಬಿಗಿದು ಕೊಂದು, ತಾನೂ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೂಂಗೋಡಿ ಅವರ ತಾಯಿ ಸರಸ್ವತಿ ಮನೆಗೆ ಹಿಂದಿರುಗಿದಾಗ ಮಗಳು ಮತ್ತು ಮೊಮ್ಮಗಳು ಮೃತಪಟ್ಟಿರುವುದನ್ನು ಕಂಡು ಆಘಾತಗೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಅಲಂಗಿಯಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಶವಪರೀಕ್ಷೆಗಾಗಿ ಅಧಿಕಾರಿಗಳು ತಿರುಪ್ಪೂರು ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

Published On - 3:13 pm, Tue, 26 July 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು