AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಗನ್​ ಜೊತೆ ಸೆಲ್ಫೀ ಕ್ಲಿಕ್ಕಿಸುವಾಗ ಹಣೆಗೆ ಆಕಸ್ಮಿಕವಾಗಿ ಗುಂಡು ಹಾರಿ ಬಾಲಕ ಸಾವು!

ಅಣ್ಣ ಸುಹೇಲ್ ಶೇಂಗಾ ಖರೀದಿಸಲು ಹೋದಾಗ ಆತನ ತಮ್ಮ ಉವೈಶ್ ಅಹಮದ್ ಲೋಡೆಡ್​ ಗನ್​ನೊಂದಿಗೆ ಆಟವಾಡುತ್ತಿದ್ದ. ಗನ್ ಅನ್ನು ತನ್ನ ಹೆಣೆಯ ಬಳಿ ಇಟ್ಟುಕೊಂಡು ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ನೋಡಿದ್ದ. ಆಗ ಅನಿರೀಕ್ಷಿತವಾಗಿ ಗನ್​ನಿಂದ ಗುಂಡು ಹಾರಿದೆ.

Crime News: ಗನ್​ ಜೊತೆ ಸೆಲ್ಫೀ ಕ್ಲಿಕ್ಕಿಸುವಾಗ ಹಣೆಗೆ ಆಕಸ್ಮಿಕವಾಗಿ ಗುಂಡು ಹಾರಿ ಬಾಲಕ ಸಾವು!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 29, 2021 | 7:23 PM

Share

ಮೀರತ್: ಕೆಲವೊಮ್ಮೆ ಸೆಲ್ಫೀ ಹುಚ್ಚು ಪ್ರಾಣವನ್ನೇ ಬಲಿ ಪಡೆಯುತ್ತದೆ. ಜಲಪಾತ, ಬೆಟ್ಟದ ತುದಿಯಲ್ಲಿ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಎಷ್ಟೋ ಘಟನೆಗಳು ನಡೆದಿವೆ. ಆದರೆ, ವಿಚಿತ್ರ ಪ್ರಕರಣವೊಂದರಲ್ಲಿ ಲೋಡ್ ಆಗಿರುವ ಗನ್​ ಜೊತೆ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗ ಅನಿರೀಕ್ಷಿತವಾಗಿ ಗುಂಡು ಹಾರಿ, ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೊಬೈಲ್ ಸೆಲ್ಫೀಯಿಂದ ಬಾಲಕನ ಪ್ರಾಣವೇ ಹಾರಿಹೋಗಿದೆ.

ಉತ್ತರ ಪ್ರದೇಶದ 14 ವರ್ಷದ ಬಾಲಕ ಉವೈಶ್​ ಅಹಮದ್ ತನ್ನ ಅಣ್ಣ 19 ವರ್ಷದ ಸುಹೇಲ್ ಅಹಮದ್ ಜೊತೆಗೆ ಶೇಂಗಾ ತಿನ್ನಲು ಹೋಗಿದ್ದ. ಅಣ್ಣ ಸುಹೇಲ್ ಶೇಂಗಾ ಖರೀದಿಸಲು ಹೋದಾಗ ಆತನ ತಮ್ಮ ಉವೈಶ್ ಅಹಮದ್ ಲೋಡೆಡ್​ ಗನ್​ನೊಂದಿಗೆ ಆಟವಾಡುತ್ತಿದ್ದ. ಗನ್ ಅನ್ನು ತನ್ನ ಹೆಣೆಯ ಬಳಿ ಇಟ್ಟುಕೊಂಡು ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ನೋಡಿದ್ದ. ಆಗ ಅನಿರೀಕ್ಷಿತವಾಗಿ ಗನ್​ನಿಂದ ಗುಂಡು ಹಾರಿದೆ. ಆತನ ಅಣ್ಣ ವಾಪಾಸ್ ಬರುವಷ್ಟರಲ್ಲಿ ಉವೈಶ್ ರಕ್ತದ ಓಕುಳಿಯಲ್ಲಿ ಬಿದ್ದಿದ್ದ.

ಮೀರತ್​​ನಲ್ಲಿ ಈ ಘಟನೆ ನಡೆದಿದ್ದು, ಗನ್​ನಿಂದ ಗುಂಡು ಹಾರಿ ಉವೈಶ್ ಅಹಮದ್ ಸಾವನ್ನಪ್ಪಿದ್ದಾನೆ. ಆದರೆ, ಮೂರನೇ ವ್ಯಕ್ತಿ ಗುಂಡು ಹಾರಿಸಿ ಉವೈಶ್​ ಅಹಮದ್​ನನ್ನು ಕೊಲೆ ಮಾಡಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು. ಆದರೆ, ಪೊಲೀಸರ ತನಿಖೆಯಿಂದ ಆ ಬಾಲಕನೇ ಅನಿರೀಕ್ಷಿತವಾಗಿ ಟ್ರಿಗರ್ ಎಳೆದು ಗುಂಡು ಹಾರಿಸಿಕೊಂಡಿದ್ದಾನೆ ಎಂಬುದು ಖಚಿತವಾಗಿದೆ.

ಇದನ್ನೂ ಓದಿ: ರೈಲ್ವೆ ಹಳಿ ಮೇಲೆ ನಿಂತು ವಿಡಿಯೋಕ್ಕೆ ಪೋಸ್​ ಕೊಡುತ್ತಿದ್ದ ಯುವಕನ ದುರಂತ ಸಾವು; ಸರಕು ರೈಲು ಡಿಕ್ಕಿ

ನಡುರಾತ್ರಿ ರೈಲಿನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಅಮೂಲ್ಯ ಪ್ರಾಣತೆತ್ತ ಮಂಡ್ಯದ ಯುವಕ, ಶ್ರೀರಂಗಪಟ್ಟಣದ ಬಳಿ ಪತ್ತೆಯಾದ ಶವ

Published On - 7:23 pm, Mon, 29 November 21

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್