AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಗನ್​ ಜೊತೆ ಸೆಲ್ಫೀ ಕ್ಲಿಕ್ಕಿಸುವಾಗ ಹಣೆಗೆ ಆಕಸ್ಮಿಕವಾಗಿ ಗುಂಡು ಹಾರಿ ಬಾಲಕ ಸಾವು!

ಅಣ್ಣ ಸುಹೇಲ್ ಶೇಂಗಾ ಖರೀದಿಸಲು ಹೋದಾಗ ಆತನ ತಮ್ಮ ಉವೈಶ್ ಅಹಮದ್ ಲೋಡೆಡ್​ ಗನ್​ನೊಂದಿಗೆ ಆಟವಾಡುತ್ತಿದ್ದ. ಗನ್ ಅನ್ನು ತನ್ನ ಹೆಣೆಯ ಬಳಿ ಇಟ್ಟುಕೊಂಡು ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ನೋಡಿದ್ದ. ಆಗ ಅನಿರೀಕ್ಷಿತವಾಗಿ ಗನ್​ನಿಂದ ಗುಂಡು ಹಾರಿದೆ.

Crime News: ಗನ್​ ಜೊತೆ ಸೆಲ್ಫೀ ಕ್ಲಿಕ್ಕಿಸುವಾಗ ಹಣೆಗೆ ಆಕಸ್ಮಿಕವಾಗಿ ಗುಂಡು ಹಾರಿ ಬಾಲಕ ಸಾವು!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 29, 2021 | 7:23 PM

Share

ಮೀರತ್: ಕೆಲವೊಮ್ಮೆ ಸೆಲ್ಫೀ ಹುಚ್ಚು ಪ್ರಾಣವನ್ನೇ ಬಲಿ ಪಡೆಯುತ್ತದೆ. ಜಲಪಾತ, ಬೆಟ್ಟದ ತುದಿಯಲ್ಲಿ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಎಷ್ಟೋ ಘಟನೆಗಳು ನಡೆದಿವೆ. ಆದರೆ, ವಿಚಿತ್ರ ಪ್ರಕರಣವೊಂದರಲ್ಲಿ ಲೋಡ್ ಆಗಿರುವ ಗನ್​ ಜೊತೆ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗ ಅನಿರೀಕ್ಷಿತವಾಗಿ ಗುಂಡು ಹಾರಿ, ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೊಬೈಲ್ ಸೆಲ್ಫೀಯಿಂದ ಬಾಲಕನ ಪ್ರಾಣವೇ ಹಾರಿಹೋಗಿದೆ.

ಉತ್ತರ ಪ್ರದೇಶದ 14 ವರ್ಷದ ಬಾಲಕ ಉವೈಶ್​ ಅಹಮದ್ ತನ್ನ ಅಣ್ಣ 19 ವರ್ಷದ ಸುಹೇಲ್ ಅಹಮದ್ ಜೊತೆಗೆ ಶೇಂಗಾ ತಿನ್ನಲು ಹೋಗಿದ್ದ. ಅಣ್ಣ ಸುಹೇಲ್ ಶೇಂಗಾ ಖರೀದಿಸಲು ಹೋದಾಗ ಆತನ ತಮ್ಮ ಉವೈಶ್ ಅಹಮದ್ ಲೋಡೆಡ್​ ಗನ್​ನೊಂದಿಗೆ ಆಟವಾಡುತ್ತಿದ್ದ. ಗನ್ ಅನ್ನು ತನ್ನ ಹೆಣೆಯ ಬಳಿ ಇಟ್ಟುಕೊಂಡು ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ನೋಡಿದ್ದ. ಆಗ ಅನಿರೀಕ್ಷಿತವಾಗಿ ಗನ್​ನಿಂದ ಗುಂಡು ಹಾರಿದೆ. ಆತನ ಅಣ್ಣ ವಾಪಾಸ್ ಬರುವಷ್ಟರಲ್ಲಿ ಉವೈಶ್ ರಕ್ತದ ಓಕುಳಿಯಲ್ಲಿ ಬಿದ್ದಿದ್ದ.

ಮೀರತ್​​ನಲ್ಲಿ ಈ ಘಟನೆ ನಡೆದಿದ್ದು, ಗನ್​ನಿಂದ ಗುಂಡು ಹಾರಿ ಉವೈಶ್ ಅಹಮದ್ ಸಾವನ್ನಪ್ಪಿದ್ದಾನೆ. ಆದರೆ, ಮೂರನೇ ವ್ಯಕ್ತಿ ಗುಂಡು ಹಾರಿಸಿ ಉವೈಶ್​ ಅಹಮದ್​ನನ್ನು ಕೊಲೆ ಮಾಡಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು. ಆದರೆ, ಪೊಲೀಸರ ತನಿಖೆಯಿಂದ ಆ ಬಾಲಕನೇ ಅನಿರೀಕ್ಷಿತವಾಗಿ ಟ್ರಿಗರ್ ಎಳೆದು ಗುಂಡು ಹಾರಿಸಿಕೊಂಡಿದ್ದಾನೆ ಎಂಬುದು ಖಚಿತವಾಗಿದೆ.

ಇದನ್ನೂ ಓದಿ: ರೈಲ್ವೆ ಹಳಿ ಮೇಲೆ ನಿಂತು ವಿಡಿಯೋಕ್ಕೆ ಪೋಸ್​ ಕೊಡುತ್ತಿದ್ದ ಯುವಕನ ದುರಂತ ಸಾವು; ಸರಕು ರೈಲು ಡಿಕ್ಕಿ

ನಡುರಾತ್ರಿ ರೈಲಿನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಅಮೂಲ್ಯ ಪ್ರಾಣತೆತ್ತ ಮಂಡ್ಯದ ಯುವಕ, ಶ್ರೀರಂಗಪಟ್ಟಣದ ಬಳಿ ಪತ್ತೆಯಾದ ಶವ

Published On - 7:23 pm, Mon, 29 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ