Crime News: ಗನ್​ ಜೊತೆ ಸೆಲ್ಫೀ ಕ್ಲಿಕ್ಕಿಸುವಾಗ ಹಣೆಗೆ ಆಕಸ್ಮಿಕವಾಗಿ ಗುಂಡು ಹಾರಿ ಬಾಲಕ ಸಾವು!

ಅಣ್ಣ ಸುಹೇಲ್ ಶೇಂಗಾ ಖರೀದಿಸಲು ಹೋದಾಗ ಆತನ ತಮ್ಮ ಉವೈಶ್ ಅಹಮದ್ ಲೋಡೆಡ್​ ಗನ್​ನೊಂದಿಗೆ ಆಟವಾಡುತ್ತಿದ್ದ. ಗನ್ ಅನ್ನು ತನ್ನ ಹೆಣೆಯ ಬಳಿ ಇಟ್ಟುಕೊಂಡು ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ನೋಡಿದ್ದ. ಆಗ ಅನಿರೀಕ್ಷಿತವಾಗಿ ಗನ್​ನಿಂದ ಗುಂಡು ಹಾರಿದೆ.

Crime News: ಗನ್​ ಜೊತೆ ಸೆಲ್ಫೀ ಕ್ಲಿಕ್ಕಿಸುವಾಗ ಹಣೆಗೆ ಆಕಸ್ಮಿಕವಾಗಿ ಗುಂಡು ಹಾರಿ ಬಾಲಕ ಸಾವು!
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on:Nov 29, 2021 | 7:23 PM

ಮೀರತ್: ಕೆಲವೊಮ್ಮೆ ಸೆಲ್ಫೀ ಹುಚ್ಚು ಪ್ರಾಣವನ್ನೇ ಬಲಿ ಪಡೆಯುತ್ತದೆ. ಜಲಪಾತ, ಬೆಟ್ಟದ ತುದಿಯಲ್ಲಿ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಎಷ್ಟೋ ಘಟನೆಗಳು ನಡೆದಿವೆ. ಆದರೆ, ವಿಚಿತ್ರ ಪ್ರಕರಣವೊಂದರಲ್ಲಿ ಲೋಡ್ ಆಗಿರುವ ಗನ್​ ಜೊತೆ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗ ಅನಿರೀಕ್ಷಿತವಾಗಿ ಗುಂಡು ಹಾರಿ, ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೊಬೈಲ್ ಸೆಲ್ಫೀಯಿಂದ ಬಾಲಕನ ಪ್ರಾಣವೇ ಹಾರಿಹೋಗಿದೆ.

ಉತ್ತರ ಪ್ರದೇಶದ 14 ವರ್ಷದ ಬಾಲಕ ಉವೈಶ್​ ಅಹಮದ್ ತನ್ನ ಅಣ್ಣ 19 ವರ್ಷದ ಸುಹೇಲ್ ಅಹಮದ್ ಜೊತೆಗೆ ಶೇಂಗಾ ತಿನ್ನಲು ಹೋಗಿದ್ದ. ಅಣ್ಣ ಸುಹೇಲ್ ಶೇಂಗಾ ಖರೀದಿಸಲು ಹೋದಾಗ ಆತನ ತಮ್ಮ ಉವೈಶ್ ಅಹಮದ್ ಲೋಡೆಡ್​ ಗನ್​ನೊಂದಿಗೆ ಆಟವಾಡುತ್ತಿದ್ದ. ಗನ್ ಅನ್ನು ತನ್ನ ಹೆಣೆಯ ಬಳಿ ಇಟ್ಟುಕೊಂಡು ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ನೋಡಿದ್ದ. ಆಗ ಅನಿರೀಕ್ಷಿತವಾಗಿ ಗನ್​ನಿಂದ ಗುಂಡು ಹಾರಿದೆ. ಆತನ ಅಣ್ಣ ವಾಪಾಸ್ ಬರುವಷ್ಟರಲ್ಲಿ ಉವೈಶ್ ರಕ್ತದ ಓಕುಳಿಯಲ್ಲಿ ಬಿದ್ದಿದ್ದ.

ಮೀರತ್​​ನಲ್ಲಿ ಈ ಘಟನೆ ನಡೆದಿದ್ದು, ಗನ್​ನಿಂದ ಗುಂಡು ಹಾರಿ ಉವೈಶ್ ಅಹಮದ್ ಸಾವನ್ನಪ್ಪಿದ್ದಾನೆ. ಆದರೆ, ಮೂರನೇ ವ್ಯಕ್ತಿ ಗುಂಡು ಹಾರಿಸಿ ಉವೈಶ್​ ಅಹಮದ್​ನನ್ನು ಕೊಲೆ ಮಾಡಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು. ಆದರೆ, ಪೊಲೀಸರ ತನಿಖೆಯಿಂದ ಆ ಬಾಲಕನೇ ಅನಿರೀಕ್ಷಿತವಾಗಿ ಟ್ರಿಗರ್ ಎಳೆದು ಗುಂಡು ಹಾರಿಸಿಕೊಂಡಿದ್ದಾನೆ ಎಂಬುದು ಖಚಿತವಾಗಿದೆ.

ಇದನ್ನೂ ಓದಿ: ರೈಲ್ವೆ ಹಳಿ ಮೇಲೆ ನಿಂತು ವಿಡಿಯೋಕ್ಕೆ ಪೋಸ್​ ಕೊಡುತ್ತಿದ್ದ ಯುವಕನ ದುರಂತ ಸಾವು; ಸರಕು ರೈಲು ಡಿಕ್ಕಿ

ನಡುರಾತ್ರಿ ರೈಲಿನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಅಮೂಲ್ಯ ಪ್ರಾಣತೆತ್ತ ಮಂಡ್ಯದ ಯುವಕ, ಶ್ರೀರಂಗಪಟ್ಟಣದ ಬಳಿ ಪತ್ತೆಯಾದ ಶವ

Published On - 7:23 pm, Mon, 29 November 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ