AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಗನ್​ ಜೊತೆ ಸೆಲ್ಫೀ ಕ್ಲಿಕ್ಕಿಸುವಾಗ ಹಣೆಗೆ ಆಕಸ್ಮಿಕವಾಗಿ ಗುಂಡು ಹಾರಿ ಬಾಲಕ ಸಾವು!

ಅಣ್ಣ ಸುಹೇಲ್ ಶೇಂಗಾ ಖರೀದಿಸಲು ಹೋದಾಗ ಆತನ ತಮ್ಮ ಉವೈಶ್ ಅಹಮದ್ ಲೋಡೆಡ್​ ಗನ್​ನೊಂದಿಗೆ ಆಟವಾಡುತ್ತಿದ್ದ. ಗನ್ ಅನ್ನು ತನ್ನ ಹೆಣೆಯ ಬಳಿ ಇಟ್ಟುಕೊಂಡು ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ನೋಡಿದ್ದ. ಆಗ ಅನಿರೀಕ್ಷಿತವಾಗಿ ಗನ್​ನಿಂದ ಗುಂಡು ಹಾರಿದೆ.

Crime News: ಗನ್​ ಜೊತೆ ಸೆಲ್ಫೀ ಕ್ಲಿಕ್ಕಿಸುವಾಗ ಹಣೆಗೆ ಆಕಸ್ಮಿಕವಾಗಿ ಗುಂಡು ಹಾರಿ ಬಾಲಕ ಸಾವು!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 29, 2021 | 7:23 PM

Share

ಮೀರತ್: ಕೆಲವೊಮ್ಮೆ ಸೆಲ್ಫೀ ಹುಚ್ಚು ಪ್ರಾಣವನ್ನೇ ಬಲಿ ಪಡೆಯುತ್ತದೆ. ಜಲಪಾತ, ಬೆಟ್ಟದ ತುದಿಯಲ್ಲಿ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಎಷ್ಟೋ ಘಟನೆಗಳು ನಡೆದಿವೆ. ಆದರೆ, ವಿಚಿತ್ರ ಪ್ರಕರಣವೊಂದರಲ್ಲಿ ಲೋಡ್ ಆಗಿರುವ ಗನ್​ ಜೊತೆ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗ ಅನಿರೀಕ್ಷಿತವಾಗಿ ಗುಂಡು ಹಾರಿ, ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೊಬೈಲ್ ಸೆಲ್ಫೀಯಿಂದ ಬಾಲಕನ ಪ್ರಾಣವೇ ಹಾರಿಹೋಗಿದೆ.

ಉತ್ತರ ಪ್ರದೇಶದ 14 ವರ್ಷದ ಬಾಲಕ ಉವೈಶ್​ ಅಹಮದ್ ತನ್ನ ಅಣ್ಣ 19 ವರ್ಷದ ಸುಹೇಲ್ ಅಹಮದ್ ಜೊತೆಗೆ ಶೇಂಗಾ ತಿನ್ನಲು ಹೋಗಿದ್ದ. ಅಣ್ಣ ಸುಹೇಲ್ ಶೇಂಗಾ ಖರೀದಿಸಲು ಹೋದಾಗ ಆತನ ತಮ್ಮ ಉವೈಶ್ ಅಹಮದ್ ಲೋಡೆಡ್​ ಗನ್​ನೊಂದಿಗೆ ಆಟವಾಡುತ್ತಿದ್ದ. ಗನ್ ಅನ್ನು ತನ್ನ ಹೆಣೆಯ ಬಳಿ ಇಟ್ಟುಕೊಂಡು ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ನೋಡಿದ್ದ. ಆಗ ಅನಿರೀಕ್ಷಿತವಾಗಿ ಗನ್​ನಿಂದ ಗುಂಡು ಹಾರಿದೆ. ಆತನ ಅಣ್ಣ ವಾಪಾಸ್ ಬರುವಷ್ಟರಲ್ಲಿ ಉವೈಶ್ ರಕ್ತದ ಓಕುಳಿಯಲ್ಲಿ ಬಿದ್ದಿದ್ದ.

ಮೀರತ್​​ನಲ್ಲಿ ಈ ಘಟನೆ ನಡೆದಿದ್ದು, ಗನ್​ನಿಂದ ಗುಂಡು ಹಾರಿ ಉವೈಶ್ ಅಹಮದ್ ಸಾವನ್ನಪ್ಪಿದ್ದಾನೆ. ಆದರೆ, ಮೂರನೇ ವ್ಯಕ್ತಿ ಗುಂಡು ಹಾರಿಸಿ ಉವೈಶ್​ ಅಹಮದ್​ನನ್ನು ಕೊಲೆ ಮಾಡಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು. ಆದರೆ, ಪೊಲೀಸರ ತನಿಖೆಯಿಂದ ಆ ಬಾಲಕನೇ ಅನಿರೀಕ್ಷಿತವಾಗಿ ಟ್ರಿಗರ್ ಎಳೆದು ಗುಂಡು ಹಾರಿಸಿಕೊಂಡಿದ್ದಾನೆ ಎಂಬುದು ಖಚಿತವಾಗಿದೆ.

ಇದನ್ನೂ ಓದಿ: ರೈಲ್ವೆ ಹಳಿ ಮೇಲೆ ನಿಂತು ವಿಡಿಯೋಕ್ಕೆ ಪೋಸ್​ ಕೊಡುತ್ತಿದ್ದ ಯುವಕನ ದುರಂತ ಸಾವು; ಸರಕು ರೈಲು ಡಿಕ್ಕಿ

ನಡುರಾತ್ರಿ ರೈಲಿನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಅಮೂಲ್ಯ ಪ್ರಾಣತೆತ್ತ ಮಂಡ್ಯದ ಯುವಕ, ಶ್ರೀರಂಗಪಟ್ಟಣದ ಬಳಿ ಪತ್ತೆಯಾದ ಶವ

Published On - 7:23 pm, Mon, 29 November 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ