AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಮನೆಯ ಅಣ್ಣ-ತಮ್ಮಂದಿರನ್ನು ಮದುವೆಯಾಗಿದ್ದ ಮೂವರು ಸೋದರಿಯರು ಒಟ್ಟಿಗೇ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ರಾಜಸ್ಥಾನದ ಮೂವರು ಸಹೋದರಿಯರು ಒಂದೇ ಮನೆಯ ಸಹೋದರರನ್ನು ವಿವಾಹವಾಗಿ, ಒಂದೇ ಸೂರಿನಡಿ ವಾಸಿಸುತ್ತಿದ್ದರು. ಆ ಮೂವರೂ ತಮ್ಮ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಒಂದೇ ಮನೆಯ ಅಣ್ಣ-ತಮ್ಮಂದಿರನ್ನು ಮದುವೆಯಾಗಿದ್ದ ಮೂವರು ಸೋದರಿಯರು ಒಟ್ಟಿಗೇ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?
ಆತ್ಮಹತ್ಯೆ ಮಾಡಿಕೊಂಡ ಮೂವರು ಸೋದರಿಯರುImage Credit source: NDTV
TV9 Web
| Edited By: |

Updated on: Jun 08, 2022 | 9:03 AM

Share

ಜೈಪುರ: ರಾಜಸ್ಥಾನದಲ್ಲಿ (Rajasthan) ಮೂವರು ಸಹೋದರಿಯರು ಮತ್ತು ಅವರ ಮಕ್ಕಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ. ಆ ಮೂವರು ಅಕ್ಕ- ತಂಗಿಯರು ಸಾಯುವ ಮೊದಲು ಅವರು ತಾವು ಮದುವೆಯಾಗಿದ್ದ ಕುಟುಂಬದ ವಿರುದ್ಧ ತಮ್ಮ ಮನೆಯವರಿಗೆ ಸಂದೇಶವನ್ನು ಕಳುಹಿಸಿದ್ದಾರೆ. ಅಂದಹಾಗೆ, ಈ ಮೂವರೂ ಒಂದೇ ಮನೆಯ ಅಣ್ಣ-ತಮ್ಮಂದಿರನ್ನು ಮದುವೆಯಾಗಿದ್ದರು. ಒಂದೇ ಮನೆಗೆ ಸೊಸೆಯರಾಗಿ ಹೋಗಿದ್ದ ಈ ಮೂವರು ಇದೀಗ ಹೆಣವಾಗಿದ್ದಾರೆ. ಈ ಮೂವರು ವರದಕ್ಷಿಣೆ (Dowry Case) ಕಿರುಕುಳಕ್ಕೆ ಒಳಗಾಗಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಸಮಾಜ ಎಷ್ಟೇ ಬದಲಾದರೂ, ಹೆಣ್ಣು ಮಕ್ಕಳು ಎಷ್ಟೇ ವಿದ್ಯಾವಂತರಾದರೂ ವರದಕ್ಷಿಣೆ ಕಿರುಕುಳ ಇನ್ನೂ ಕಡಿಮೆಯಾಗಿಲ್ಲ. ರಾಜಸ್ಥಾನದ ಮೂವರು ಸಹೋದರಿಯರು ಒಂದೇ ಮನೆಯ ಸಹೋದರರನ್ನು ವಿವಾಹವಾಗಿ, ಒಂದೇ ಸೂರಿನಡಿ ವಾಸಿಸುತ್ತಿದ್ದರು. ಆದರೆ ಅವರ ಪತಿ ಮತ್ತು ಅತ್ತೆಯರಿಂದ ನಿರಂತರ ಹಿಂಸೆಯನ್ನು ಅನುಭವಿಸುತ್ತಿದ್ದರು. ಹೆಚ್ಚಿನ ಹಣದ ಬೇಡಿಕೆಗಳನ್ನು ಪೂರೈಸಲು ಅವರ ತಂದೆ ವಿಫಲವಾದಾಗ ಸೇರಿದಂತೆ ಅವರು ನಿರಂತರವಾಗಿ ನಿಂದನೆಗೊಳಗಾಗುತ್ತಿದ್ದರು.

ಇದರಿಂದ ಬೇಸತ್ತಿದ್ದ ಅಕ್ಕ-ತಂಗಿಯರು ಜೈಪುರದ ಹೊರವಲಯದಲ್ಲಿರುವ ಅವರ ಮನೆಯ ಬಳಿ ತಮ್ಮ ಮಕ್ಕಳೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ತಮ್ಮ ನಾಲ್ಕು ವರ್ಷದ ಮಗ ಮತ್ತು 6 ತಿಂಗಳ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರಲ್ಲಿ ಕಿರಿಯ ಮಹಿಳೆಯೂ ಗರ್ಭಿಣಿಯಾಗಿದ್ದರು. 5 ಶವಗಳನ್ನು ಹೊರತೆಗೆಯಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Crime News: ದೆಹಲಿಯ ಮೈದಾನದಲ್ಲಿ ಶವದ ತುಂಡುಗಳನ್ನು ತುಂಬಿಟ್ಟಿದ್ದ ಬ್ಯಾಗ್ ಪತ್ತೆ; ಕೊಲೆಯಾದವರ ಸುಳಿವೇ ಸಿಕ್ಕಿಲ್ಲ

“ನಮಗೆ ಸಾಯಲು ಇಷ್ಟವಿಲ್ಲ. ಆದರೆ, ಗಂಡ, ಅತ್ತೆಯಿಂದ ದಿನವೂ ಬೈಸಿಕೊಳ್ಳುತ್ತಾ ಸಾಯುವುದಕ್ಕಿಂತ ಈ ಸಾವೇ ಉತ್ತಮವಾಗಿದೆ” ಎಂದು ಅವರು ತಮ್ಮ ಮನೆಯವರಿಗೆ ವಾಟ್ಸಾಪ್​ನಲ್ಲಿ ಕೊನೆಯಾಗಿ ಮೆಸೇಜ್ ಕಳುಹಿಸಿದ್ದಾರೆ.

ತಮ್ಮ ಹೆಣ್ಣುಮಕ್ಕಳ ನಿಧನದಿಂದ ದಿಗ್ಭ್ರಮೆಗೊಂಡ ತಂದೆ ಸರ್ದಾರ್ ಮೀನಾ ಅವರು ತಮ್ಮ ಹೆಣ್ಣುಮಕ್ಕಳಿಗೆ ಜೀವನ ನರಕವಾಗಿತ್ತು. ಅವರಿಗೆ ನಿರಂತರವಾಗಿ ಕಿರುಕುಳ ನೀಡಲಾಗುತ್ತಿತ್ತು. ನಾವು ಅವರಿಗೆ ಈಗಾಗಲೇ ಫ್ರಿಡ್ಜ್, ವಾಷಿಂಗ್ ಮಷಿನ್, ಟಿವಿ ಸೆಟ್​ಗಳು ಸೇರಿದಂತೆ ಹಲವು ವಸ್ತುಗಳನ್ನು ನೀಡಿದ್ದೇವೆ, ನೀವು ಅವರ ಮನೆಯಲ್ಲಿ ಬೇಕಾದರೆ ಚೆಕ್ ಮಾಡಿ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ