AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ದುಬಾರಿ ಗಿಫ್ಟ್​ ಕೊಡಲಿಲ್ಲವೆಂದು ಹೆಂಡತಿ ಮಾನಸಿಕ ಹಿಂಸೆ ನೀಡುತ್ತಾಳೆ; ಪೊಲೀಸರಿಗೆ ಗಂಡನಿಂದ ದೂರು

ಜಿತೇಂದ್ರ ಸಿಂಗ್ ಅವರು ತಮ್ಮ ಪತ್ನಿ ಸೋನಮ್ ಬೇಡಿಕೆಗಳನ್ನು ಎಲ್ಲಾ ಸಮಯದಲ್ಲೂ ಪೂರೈಸಲು ಪ್ರಯತ್ನಿಸಿದ್ದರು. ಆದರೆ ಈಗ ಆಕೆಯ ಬೇಡಿಕೆಗಳು ಹೆಚ್ಚುತ್ತಲೇ ಇವೆ. ಇದರಿಂದ ಜಿತೇಂದ್ರ ಸಿಂಗ್ ಅವರಿಗೆ ಮಾನಸಿಕ ಒತ್ತಡ ಉಂಟಾಗಿದೆ.

Viral News: ದುಬಾರಿ ಗಿಫ್ಟ್​ ಕೊಡಲಿಲ್ಲವೆಂದು ಹೆಂಡತಿ ಮಾನಸಿಕ ಹಿಂಸೆ ನೀಡುತ್ತಾಳೆ; ಪೊಲೀಸರಿಗೆ ಗಂಡನಿಂದ ದೂರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 17, 2023 | 1:49 PM

Share

ಲಕ್ನೋ: ನನ್ನ ಹೆಂಡತಿ ಯಾವಾಗಲೂ ನನ್ನಿಂದ ಬೆಲೆಬಾಳುವ ಉಡುಗೊರೆಗಳನ್ನು ಬಯಸುತ್ತಾಳೆ. ಅವಳ ಆಸೆಗಳನ್ನು ಈಡೇರಿಸಿ ನನಗೆ ಸಾಕಾಗಿದೆ. ಆಕೆಯ ಬೇಡಿಕೆ ಈಡೇರದಿದ್ದರೆ ನನಗೆ ಮಾನಸಿಕ ಹಿಂಸೆ ನೀಡುತ್ತಾಳೆ ಎಂದು ಗಂಡನೊಬ್ಬ ತನ್ನ ಹೆಂಡತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಿತ್ರವಾದ ಘಟನೆ ಉತ್ತರ ಪ್ರದೇಶದ (Uttar Pradesh) ಲಕ್ನೋದಲ್ಲಿ ನಡೆದಿದೆ.

ಆಶಿಯಾನಾದ ನಿವಾಸಿ ಜಿತೇಂದ್ರ ಸಿಂಗ್ ಅವರು ತಮ್ಮ ಪತ್ನಿ ಸೋನಮ್ ಬೇಡಿಕೆಗಳನ್ನು ಎಲ್ಲಾ ಸಮಯದಲ್ಲೂ ಪೂರೈಸಲು ಪ್ರಯತ್ನಿಸಿದ್ದರು. ಆದರೆ ಈಗ ಆಕೆಯ ಬೇಡಿಕೆಗಳು ಹೆಚ್ಚುತ್ತಲೇ ಇವೆ. ಇದರಿಂದ ಜಿತೇಂದ್ರ ಸಿಂಗ್ ಅವರಿಗೆ ಮಾನಸಿಕ ಒತ್ತಡ ಉಂಟಾಗಿದೆ. ಹೀಗಾಗಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ತಾನು ಮತ್ತು ಸೋನಮ್ ಫೇಸ್‌ಬುಕ್‌ನಲ್ಲಿ ಪರಿಚಯವಾಗಿ 2021ರಲ್ಲಿ ಮದುವೆಯಾಗಿದ್ದೇವೆ. ಅಲ್ಲಿಂದಲೂ ನನಗೆ ಈ ಮಾನಸಿಕ ಹಿಂಸೆ ಶುರುವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Viral News: ತನ್ನ ಗುರುತು ಗೊತ್ತಾಗಬಾರದೆಂದು ಮುಖಕ್ಕೆ ಮಹಿಳೆಯ ಅಂಡರ್​ವೇರ್ ಹಾಕಿಕೊಂಡು ಬಂದ ಕಳ್ಳ!

ಮದುವೆಯಾದ ನಂತರ ಅವರಿಬ್ಬರೂ ಆಶಿಯಾನಾದ ರಜನಿಕಾಂಡ್ ಬಳಿಯ ಜಿತೇಂದ್ರನ ಮನೆಗೆ ತೆರಳಿದರು. ಆದರೆ, ಸೋನಮ್ ತನ್ನ ಅತ್ತೆಯೊಂದಿಗೆ ವಾಸಿಸಲು ಸಾಧ್ಯವಿಲ್ಲ ಎಂದು ಹಠ ಹಿಡಿದಳು. ಆದ್ದರಿಂದ ಜಿತೇಂದ್ರ ತನ್ನ ಹೆಂಡತಿಯ ಜೊತೆ ಬೇರೆ ಮಾಡಲು ನಿರ್ಧರಿಸಿದರು. ಅದಾದ ಸ್ವಲ್ಪ ಸಮಯದ ನಂತರ, ಸೋನಮ್ ತನಗೆ ಬೆಲೆಬಾಳುವ ಉಡುಗೊರೆಗಳು ಬೇಕೆಂದು ಕೇಳಲು ಪ್ರಾರಂಭಿಸಿದರು.

ಇದನ್ನೂ ಓದಿ: Viral News: ಅಂಗಡಿಯಿಂದ ದಿಢೀರನೆ ಸಿಸಿಟಿವಿ ಕ್ಯಾಮೆರಾಗಳು ನಾಪತ್ತೆ; ಕೊನೆಗೂ ಬಯಲಾಯ್ತು ಕಪಿ ಚೇಷ್ಟೆ!

ಆರಂಭದಲ್ಲಿ ಜಿತೇಂದ್ರ ತನ್ನ ಹೆಂಡತಿಯ ಕೋರಿಕೆಯನ್ನು ಈಡೇರಿಸಿದರು. ಆದರೆ ಸಮಯ ಕಳೆದಂತೆ ಅವಳ ಬೇಡಿಕೆಗಳು ಹೆಚ್ಚಾಗತೊಡಗಿದವು. “ನನ್ನ ಪತ್ನಿ ಸೋನಮ್ ಆಗಾಗ ಹಣ ಕೇಳುತ್ತಾಳೆ, ಐಷಾರಾಮಿ ಕಾರು ಖರೀದಿಸಲು ಒತ್ತಾಯಿಸುತ್ತಾಳೆ. ಆಕೆ ನನ್ನ ತಾಯಿಯ ಮನೆಯನ್ನು ನಮ್ಮ ಹೆಸರಿಗೆ ಬರೆಸಿಕೊಳ್ಳಬೇಕು ಎಂದು ಹಠ ಹಿಡಿದಾಗ ನಾನು ಒಪ್ಪಲಿಲ್ಲ. ಅದಾದ ಮೇಲೆ ಆಕೆ ನನ್ನನ್ನು ಮಾನಸಿಕವಾಗಿ ಹಿಂಸಿಸಲು ಪ್ರಾರಂಭಿಸಿದಳು. ನನ್ನಿಂದ ವಿಚ್ಛೇದನ ಪಡೆಯುವುದಾಗಿ ಬೆದರಿಕೆ ಹಾಕಿದಳು ಎಂದು ಜಿತೇಂದ್ರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ