AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ದುಬಾರಿ ಗಿಫ್ಟ್​ ಕೊಡಲಿಲ್ಲವೆಂದು ಹೆಂಡತಿ ಮಾನಸಿಕ ಹಿಂಸೆ ನೀಡುತ್ತಾಳೆ; ಪೊಲೀಸರಿಗೆ ಗಂಡನಿಂದ ದೂರು

ಜಿತೇಂದ್ರ ಸಿಂಗ್ ಅವರು ತಮ್ಮ ಪತ್ನಿ ಸೋನಮ್ ಬೇಡಿಕೆಗಳನ್ನು ಎಲ್ಲಾ ಸಮಯದಲ್ಲೂ ಪೂರೈಸಲು ಪ್ರಯತ್ನಿಸಿದ್ದರು. ಆದರೆ ಈಗ ಆಕೆಯ ಬೇಡಿಕೆಗಳು ಹೆಚ್ಚುತ್ತಲೇ ಇವೆ. ಇದರಿಂದ ಜಿತೇಂದ್ರ ಸಿಂಗ್ ಅವರಿಗೆ ಮಾನಸಿಕ ಒತ್ತಡ ಉಂಟಾಗಿದೆ.

Viral News: ದುಬಾರಿ ಗಿಫ್ಟ್​ ಕೊಡಲಿಲ್ಲವೆಂದು ಹೆಂಡತಿ ಮಾನಸಿಕ ಹಿಂಸೆ ನೀಡುತ್ತಾಳೆ; ಪೊಲೀಸರಿಗೆ ಗಂಡನಿಂದ ದೂರು
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 17, 2023 | 1:49 PM

Share

ಲಕ್ನೋ: ನನ್ನ ಹೆಂಡತಿ ಯಾವಾಗಲೂ ನನ್ನಿಂದ ಬೆಲೆಬಾಳುವ ಉಡುಗೊರೆಗಳನ್ನು ಬಯಸುತ್ತಾಳೆ. ಅವಳ ಆಸೆಗಳನ್ನು ಈಡೇರಿಸಿ ನನಗೆ ಸಾಕಾಗಿದೆ. ಆಕೆಯ ಬೇಡಿಕೆ ಈಡೇರದಿದ್ದರೆ ನನಗೆ ಮಾನಸಿಕ ಹಿಂಸೆ ನೀಡುತ್ತಾಳೆ ಎಂದು ಗಂಡನೊಬ್ಬ ತನ್ನ ಹೆಂಡತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಿತ್ರವಾದ ಘಟನೆ ಉತ್ತರ ಪ್ರದೇಶದ (Uttar Pradesh) ಲಕ್ನೋದಲ್ಲಿ ನಡೆದಿದೆ.

ಆಶಿಯಾನಾದ ನಿವಾಸಿ ಜಿತೇಂದ್ರ ಸಿಂಗ್ ಅವರು ತಮ್ಮ ಪತ್ನಿ ಸೋನಮ್ ಬೇಡಿಕೆಗಳನ್ನು ಎಲ್ಲಾ ಸಮಯದಲ್ಲೂ ಪೂರೈಸಲು ಪ್ರಯತ್ನಿಸಿದ್ದರು. ಆದರೆ ಈಗ ಆಕೆಯ ಬೇಡಿಕೆಗಳು ಹೆಚ್ಚುತ್ತಲೇ ಇವೆ. ಇದರಿಂದ ಜಿತೇಂದ್ರ ಸಿಂಗ್ ಅವರಿಗೆ ಮಾನಸಿಕ ಒತ್ತಡ ಉಂಟಾಗಿದೆ. ಹೀಗಾಗಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ತಾನು ಮತ್ತು ಸೋನಮ್ ಫೇಸ್‌ಬುಕ್‌ನಲ್ಲಿ ಪರಿಚಯವಾಗಿ 2021ರಲ್ಲಿ ಮದುವೆಯಾಗಿದ್ದೇವೆ. ಅಲ್ಲಿಂದಲೂ ನನಗೆ ಈ ಮಾನಸಿಕ ಹಿಂಸೆ ಶುರುವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Viral News: ತನ್ನ ಗುರುತು ಗೊತ್ತಾಗಬಾರದೆಂದು ಮುಖಕ್ಕೆ ಮಹಿಳೆಯ ಅಂಡರ್​ವೇರ್ ಹಾಕಿಕೊಂಡು ಬಂದ ಕಳ್ಳ!

ಮದುವೆಯಾದ ನಂತರ ಅವರಿಬ್ಬರೂ ಆಶಿಯಾನಾದ ರಜನಿಕಾಂಡ್ ಬಳಿಯ ಜಿತೇಂದ್ರನ ಮನೆಗೆ ತೆರಳಿದರು. ಆದರೆ, ಸೋನಮ್ ತನ್ನ ಅತ್ತೆಯೊಂದಿಗೆ ವಾಸಿಸಲು ಸಾಧ್ಯವಿಲ್ಲ ಎಂದು ಹಠ ಹಿಡಿದಳು. ಆದ್ದರಿಂದ ಜಿತೇಂದ್ರ ತನ್ನ ಹೆಂಡತಿಯ ಜೊತೆ ಬೇರೆ ಮಾಡಲು ನಿರ್ಧರಿಸಿದರು. ಅದಾದ ಸ್ವಲ್ಪ ಸಮಯದ ನಂತರ, ಸೋನಮ್ ತನಗೆ ಬೆಲೆಬಾಳುವ ಉಡುಗೊರೆಗಳು ಬೇಕೆಂದು ಕೇಳಲು ಪ್ರಾರಂಭಿಸಿದರು.

ಇದನ್ನೂ ಓದಿ: Viral News: ಅಂಗಡಿಯಿಂದ ದಿಢೀರನೆ ಸಿಸಿಟಿವಿ ಕ್ಯಾಮೆರಾಗಳು ನಾಪತ್ತೆ; ಕೊನೆಗೂ ಬಯಲಾಯ್ತು ಕಪಿ ಚೇಷ್ಟೆ!

ಆರಂಭದಲ್ಲಿ ಜಿತೇಂದ್ರ ತನ್ನ ಹೆಂಡತಿಯ ಕೋರಿಕೆಯನ್ನು ಈಡೇರಿಸಿದರು. ಆದರೆ ಸಮಯ ಕಳೆದಂತೆ ಅವಳ ಬೇಡಿಕೆಗಳು ಹೆಚ್ಚಾಗತೊಡಗಿದವು. “ನನ್ನ ಪತ್ನಿ ಸೋನಮ್ ಆಗಾಗ ಹಣ ಕೇಳುತ್ತಾಳೆ, ಐಷಾರಾಮಿ ಕಾರು ಖರೀದಿಸಲು ಒತ್ತಾಯಿಸುತ್ತಾಳೆ. ಆಕೆ ನನ್ನ ತಾಯಿಯ ಮನೆಯನ್ನು ನಮ್ಮ ಹೆಸರಿಗೆ ಬರೆಸಿಕೊಳ್ಳಬೇಕು ಎಂದು ಹಠ ಹಿಡಿದಾಗ ನಾನು ಒಪ್ಪಲಿಲ್ಲ. ಅದಾದ ಮೇಲೆ ಆಕೆ ನನ್ನನ್ನು ಮಾನಸಿಕವಾಗಿ ಹಿಂಸಿಸಲು ಪ್ರಾರಂಭಿಸಿದಳು. ನನ್ನಿಂದ ವಿಚ್ಛೇದನ ಪಡೆಯುವುದಾಗಿ ಬೆದರಿಕೆ ಹಾಕಿದಳು ಎಂದು ಜಿತೇಂದ್ರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?