AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮನೆಯಿಂದ ಓಡಿಹೋಗಿ ಮದುವೆಯಾಗಿದ್ದಕ್ಕೆ ಅಣ್ಣಂದಿರಿಂದಲೇ ತಂಗಿಯ ಬರ್ಬರ ಹತ್ಯೆ

Murder News Today | ಕಳೆದ ತಿಂಗಳು ತನ್ನ ಸಂಬಂಧಿಯಾಗಿದ್ದ ದೇವೇಂದ್ರ ಎಂಬಾತನನ್ನು ಅರ್ಚನಾ ಪ್ರೀತಿಸಿ ಮದುವೆಯಾಗಿದ್ದಳು. ಈ ಮದುವೆ ಆಕೆಯ ಅಪ್ಪ-ಅಮ್ಮನಿಗೆ ಇಷ್ಟವಿರಲಿಲ್ಲ. ಇದೇ ಕಾರಣಕ್ಕೆ ಆಕೆಯನ್ನು ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

Crime News: ಮನೆಯಿಂದ ಓಡಿಹೋಗಿ ಮದುವೆಯಾಗಿದ್ದಕ್ಕೆ ಅಣ್ಣಂದಿರಿಂದಲೇ ತಂಗಿಯ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 29, 2021 | 7:32 PM

Share

ಲಕ್ನೋ: ಭಾರತದಲ್ಲಿ ಮರ್ಯಾದಾ ಹತ್ಯೆ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಲೇ ಇರುತ್ತವೆ. ಜನರು ಎಷ್ಟೇ ಆಧುನಿಕ ಮನಸ್ಥಿತಿಯವರಾಗಿದ್ದರೂ ಅಂತರ್ಜಾತೀಯ ವಿವಾಹ, ಪ್ರೇಮ ವಿವಾಹವನ್ನು ಇನ್ನೂ ದೊಡ್ಡ ಅಪರಾಧ ಎಂಬಂತೆಯೇ ನೋಡುವವರಿದ್ದಾರೆ. ಅದೇ ರೀತಿ, ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ದ ಯುವತಿಯನ್ನು ಆಕೆಯ ಮನೆಯವರೇ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಅರ್ಚನಾ ಎಂದು ಗುರುತಿಸಲಾಗಿದೆ.

ಜೂನ್ 28ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದ ಅರ್ಚನಾ ದೇವೇಂದ್ರನೊಂದಿಗೆ ಮದುವೆಯಾಗಿದ್ದಳು. ಉತ್ತರ ಪ್ರದೇಶದ ಪಲಿಯಾ ಗುಜಾರ್ ಎಂಬಲ್ಲಿ ತನ್ನ ಗಂಡನ ಮನೆಯವರೊಂದಿಗೆ ವಾಸವಾಗಿದ್ದ ಅರ್ಚನಾಳನ್ನು ಆಕೆಯ ಮನೆಯವರೇ ಕೊಲೆ ಮಾಡಿದ್ದಾರೆ. ಕಳೆದ ತಿಂಗಳು ತನ್ನ ಸಂಬಂಧಿಯಾಗಿದ್ದ ದೇವೇಂದ್ರ ಎಂಬಾತನನ್ನು ಅರ್ಚನಾ ಪ್ರೀತಿಸಿ ಮದುವೆಯಾಗಿದ್ದಳು. ಈ ಮದುವೆ ಆಕೆಯ ಅಪ್ಪ-ಅಮ್ಮನಿಗೆ ಇಷ್ಟವಿರಲಿಲ್ಲ. ತಮ್ಮ ಮಗಳನ್ನು ಬಲವಂತವಾಗಿ ಮದುವೆಯಾಗಿದ್ದಾನೆ ಎಂದು ಅರ್ಚನಾಳ ಮನೆಯವರು ದೇವೇಂದ್ರ ಮತ್ತು ಆತನ ಅಣ್ಣ-ತಮ್ಮಂದಿರ ವಿರುದ್ಧ ದೂರನ್ನು ದಾಖಲಿಸಿದ್ದರು.

ಆ ಪ್ರಕರಣದ ಬಗ್ಗೆ ದತ್ತಗಂಜ್ ಪೊಲೀಸ್ ಠಾಣೆಯಲ್ಲಿ ಹೇಳಿಕೆ ದಾಖಲಿಸಲು ಅರ್ಚನಾ ತನ್ನ ಗಂಡ ದೇವೇಂದ್ರ ಮತ್ತು ಆತನ ತಮ್ಮಂದಿರೊಂದಿಗೆ ಬರುತ್ತಿದ್ದಾಗ ಅಡ್ಡ ಹಾಕಿದ್ದ ಆಕೆಯ ತಂದೆಯವ ಮನೆಯವರು ಆಕೆಯ ಹೊಟ್ಟೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಪೊಲೀಸ್ ಠಾಣೆಯ ಬಳಿಯಲ್ಲೇ ಈ ಕೊಲೆ ನಡೆದಿದ್ದು, ಆಕೆಯನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಪ್ರಾಣ ಹಾರಿಹೋಗಿತ್ತು.

ಈ ಬಗ್ಗೆ ಅರ್ಚನಾಳ ಗಂಡ ದೇವೇಂದ್ರ ಪೊಲೀಸರಿಗೆ ದೂರು ನೀಡಿದ್ದಾರೆ. ನಾನು ಮತ್ತು ನನ್ನ ಹೆಂಡತಿ ನಮ್ಮ ಹೇಳಿಕೆಯನ್ನು ದಾಖಲಿಸಲು ಪೊಲೀಸ್ ಠಾಣೆಗೆ ಬರುತ್ತಿದ್ದಾಗ ನಾಲ್ವರು ನಮ್ಮನ್ನು ಅಡ್ಡಗಟ್ಟಿದರು. ಆ ನಾಲ್ವರಲ್ಲಿ ಇಬ್ಬರು ಅರ್ಚನಾಳ ಅಣ್ಣಂದಿರಾಗಿದ್ದು, ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲೇ ನನ್ನ ಹೆಂಡತಿಯನ್ನು ಕೊಲೆ ಮಾಡಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ. ಆ ದೂರಿನ ಆಧಾರದಲ್ಲಿ ಅರ್ಚನಾಳ ಅಣ್ಣಂದಿರು, ಅಪ್ಪ-ಅಮ್ಮನ ವಿರುದ್ಧ ಕೇಸ್ ದಾಖಲಿಸಿಕೊಂಡು, ಬಂಧಿಸಲಾಗಿದೆ.

ಇದನ್ನೂ ಓದಿ: Crime News: ಅಕ್ರಮ ಸಂಬಂಧ ತಂದ ಕಂಟಕ; ಹೆಂಡತಿಯ ಪ್ರಿಯಕರನ ಗುಪ್ತಾಂಗಕ್ಕೆ ಶೂಟ್ ಮಾಡಿದ ಗಂಡ!

Murder: ಇದು ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಕತೆ!; ಸೇಡಿಗಾಗಿ ಹನಿಮೂನ್​ನಲ್ಲೇ ಹೆಂಡತಿಯನ್ನು ಕೊಂದ ಗಂಡ

(Woman Brutally Murders by Her Brothers after Love Marriage near Police Station in Uttar Pradesh)

Published On - 7:31 pm, Thu, 29 July 21

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ