AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಕೊಡಲಿಲ್ಲವೆಂದು ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿದ ಸೊಸೆಯ ಬಂಧನ

ಮಹಿಳೆಯೊಬ್ಬಳು ತನ್ನ ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿರುವ ಘಟನೆ ಗುಜರಾತ್​ನ ಖೇಡಾದಲ್ಲಿ ನಡೆದಿದೆ. ವಿದೇಶಕ್ಕೆ ಹೋಗಲು 2 ಲಕ್ಷ ರೂ ಬೇಕೆಂದು ಮಹಿಳೆ ಕೇಳಿದ್ದಳು, ಆದರೆ ಮಾವ ಹಣ ನೀಡಲು ನಿರಾಕರಿಸಿದ್ದರು, ಕೋಪದಿಂದ ಸೊಸೆ ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿ, ತಲೆಗೆ ಬಲವಾಗಿ ಹೊಡೆದಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಸೊಸೆ ತಪ್ಪೊಪ್ಪಿಕೊಂಡಿದ್ದು, 75 ವರ್ಷದ ಮೃತ ವ್ಯಕ್ತಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಅಕ್ರಮ ಸಂಬಂಧಕ್ಕೆ ಬದಲಾಗಿ ಹಣ ನೀಡುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಹಣ ಕೊಡಲಿಲ್ಲವೆಂದು ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿದ ಸೊಸೆಯ ಬಂಧನ
ಅಪರಾಧ
ನಯನಾ ರಾಜೀವ್
|

Updated on:Sep 10, 2023 | 9:50 AM

Share

ಮಹಿಳೆಯೊಬ್ಬಳು ತನ್ನ ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿರುವ ಘಟನೆ ಗುಜರಾತ್​ನ ಖೇಡಾದಲ್ಲಿ ನಡೆದಿದೆ. ವಿದೇಶಕ್ಕೆ ಹೋಗಲು 2 ಲಕ್ಷ ರೂ ಬೇಕೆಂದು ಮಹಿಳೆ ಕೇಳಿದ್ದಳು, ಆದರೆ ಮಾವ ಹಣ ನೀಡಲು ನಿರಾಕರಿಸಿದ್ದರು, ಕೋಪದಿಂದ ಸೊಸೆ ಮಾವನನ್ನು ಹತ್ಯೆ ಮಾಡಿ ಗುಪ್ತಾಂಗವನ್ನು ಕತ್ತರಿಸಿ, ತಲೆಗೆ ಬಲವಾಗಿ ಹೊಡೆದಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಸೊಸೆ ತಪ್ಪೊಪ್ಪಿಕೊಂಡಿದ್ದು, 75 ವರ್ಷದ ಮೃತ ವ್ಯಕ್ತಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಅಕ್ರಮ ಸಂಬಂಧಕ್ಕೆ ಬದಲಾಗಿ ಹಣ ನೀಡುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ನಂತರ ತಾನು ಫೇಸ್‌ಬುಕ್‌ನಲ್ಲಿ ಒಬ್ಬ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿ ವಿದೇಶಕ್ಕೆ ಹೋಗಲು ಬಯಸಿದ್ದೆ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾಳೆ. ಆರೋಪಿ ಮಾವ ಬಳಿ ಹಣ ಕೇಳಿದ್ದಕ್ಕೆ ಹಣ ಕೊಡಲು ನಿರಾಕರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಮಾವನನ್ನು ಹತ್ಯೆ ಮಾಡಲು ಯೋಜನೆ ರೂಪಿಸಿದ್ದಳು.

ಸುಮಾರು ಮೂರು ದಿನಗಳಿಂದ ಮೃತರು ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ವಿಷಯ ಬೆಳಕಿಗೆ ಬಂದಿದೆ. ನಂತರ ಹಿರಿಯ ಮಗ ರಾಜಸ್ಥಾನದಲ್ಲಿರುವ ಅವರ ಸಂಬಂಧಿಕರ ಮನೆಗೆ ಹೋಗಿ ವಿಚಾರಿಸಿದ್ದ, ಆದರೆ ಆತ ಎಲ್ಲಿಯೂ ಪತ್ತೆಯಾಗಲಿಲ್ಲ. ಆದರೆ ಬಳಿಕ ಬಚ್ಚಲು ಮನೆಯ ಕೊಠಡಿಯೊಂದರಲ್ಲಿ ಶವ ಪತ್ತೆಯಾಗಿದೆ.

ಮತ್ತಷ್ಟು ಓದಿ: ಚಿತ್ರದುರ್ಗ: ಸ್ನೇಹಿತನನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಪ್ರಯತ್ನ; ಆರೋಪಿಗಳು ಸಿಕ್ಕಿಬಿದ್ದಿದ್ದೆ ರೋಚಕ

ಡಾಕೋರ್ ನಗರದೊಳಗಿನ ಭಗತ್ ಜಿ ಕಾಲೋನಿ ಕರ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಜಗದೀಶ್ ಶರ್ಮಾ ಅವರ ಮೃತ ದೇಹವು ಸೆಪ್ಟೆಂಬರ್ 5 ರಂದು ಪತ್ತೆಯಾಗಿದೆ.

ಮೃತ ದೇಹವು ಕೊಳೆತ ಸ್ಥಿತಿಯಲ್ಲಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ತಲೆಗೆ ಗಟ್ಟಿಯಾದ ವಸ್ತುವಿನಿಂದ ಹಲ್ಲೆ ಮಾಡಲಾಗಿದೆ. ಅವರ ದೇಹದ ಇತರೆ ಭಾಗಗಳಲ್ಲಿ ಗಾಯದ ಗುರುತುಗಳಿವೆ ಎಂಬುದು ತಿಳಿದುಬಂದಿದೆ. ವಿಷಯದ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:45 am, Sun, 10 September 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!