ಹಣ ಕೊಡಲಿಲ್ಲವೆಂದು ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿದ ಸೊಸೆಯ ಬಂಧನ

ಮಹಿಳೆಯೊಬ್ಬಳು ತನ್ನ ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿರುವ ಘಟನೆ ಗುಜರಾತ್​ನ ಖೇಡಾದಲ್ಲಿ ನಡೆದಿದೆ. ವಿದೇಶಕ್ಕೆ ಹೋಗಲು 2 ಲಕ್ಷ ರೂ ಬೇಕೆಂದು ಮಹಿಳೆ ಕೇಳಿದ್ದಳು, ಆದರೆ ಮಾವ ಹಣ ನೀಡಲು ನಿರಾಕರಿಸಿದ್ದರು, ಕೋಪದಿಂದ ಸೊಸೆ ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿ, ತಲೆಗೆ ಬಲವಾಗಿ ಹೊಡೆದಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಸೊಸೆ ತಪ್ಪೊಪ್ಪಿಕೊಂಡಿದ್ದು, 75 ವರ್ಷದ ಮೃತ ವ್ಯಕ್ತಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಅಕ್ರಮ ಸಂಬಂಧಕ್ಕೆ ಬದಲಾಗಿ ಹಣ ನೀಡುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಹಣ ಕೊಡಲಿಲ್ಲವೆಂದು ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿದ ಸೊಸೆಯ ಬಂಧನ
ಅಪರಾಧ
Follow us
|

Updated on:Sep 10, 2023 | 9:50 AM

ಮಹಿಳೆಯೊಬ್ಬಳು ತನ್ನ ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿರುವ ಘಟನೆ ಗುಜರಾತ್​ನ ಖೇಡಾದಲ್ಲಿ ನಡೆದಿದೆ. ವಿದೇಶಕ್ಕೆ ಹೋಗಲು 2 ಲಕ್ಷ ರೂ ಬೇಕೆಂದು ಮಹಿಳೆ ಕೇಳಿದ್ದಳು, ಆದರೆ ಮಾವ ಹಣ ನೀಡಲು ನಿರಾಕರಿಸಿದ್ದರು, ಕೋಪದಿಂದ ಸೊಸೆ ಮಾವನನ್ನು ಹತ್ಯೆ ಮಾಡಿ ಗುಪ್ತಾಂಗವನ್ನು ಕತ್ತರಿಸಿ, ತಲೆಗೆ ಬಲವಾಗಿ ಹೊಡೆದಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಸೊಸೆ ತಪ್ಪೊಪ್ಪಿಕೊಂಡಿದ್ದು, 75 ವರ್ಷದ ಮೃತ ವ್ಯಕ್ತಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಅಕ್ರಮ ಸಂಬಂಧಕ್ಕೆ ಬದಲಾಗಿ ಹಣ ನೀಡುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ನಂತರ ತಾನು ಫೇಸ್‌ಬುಕ್‌ನಲ್ಲಿ ಒಬ್ಬ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿ ವಿದೇಶಕ್ಕೆ ಹೋಗಲು ಬಯಸಿದ್ದೆ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾಳೆ. ಆರೋಪಿ ಮಾವ ಬಳಿ ಹಣ ಕೇಳಿದ್ದಕ್ಕೆ ಹಣ ಕೊಡಲು ನಿರಾಕರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಮಾವನನ್ನು ಹತ್ಯೆ ಮಾಡಲು ಯೋಜನೆ ರೂಪಿಸಿದ್ದಳು.

ಸುಮಾರು ಮೂರು ದಿನಗಳಿಂದ ಮೃತರು ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ವಿಷಯ ಬೆಳಕಿಗೆ ಬಂದಿದೆ. ನಂತರ ಹಿರಿಯ ಮಗ ರಾಜಸ್ಥಾನದಲ್ಲಿರುವ ಅವರ ಸಂಬಂಧಿಕರ ಮನೆಗೆ ಹೋಗಿ ವಿಚಾರಿಸಿದ್ದ, ಆದರೆ ಆತ ಎಲ್ಲಿಯೂ ಪತ್ತೆಯಾಗಲಿಲ್ಲ. ಆದರೆ ಬಳಿಕ ಬಚ್ಚಲು ಮನೆಯ ಕೊಠಡಿಯೊಂದರಲ್ಲಿ ಶವ ಪತ್ತೆಯಾಗಿದೆ.

ಮತ್ತಷ್ಟು ಓದಿ: ಚಿತ್ರದುರ್ಗ: ಸ್ನೇಹಿತನನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಪ್ರಯತ್ನ; ಆರೋಪಿಗಳು ಸಿಕ್ಕಿಬಿದ್ದಿದ್ದೆ ರೋಚಕ

ಡಾಕೋರ್ ನಗರದೊಳಗಿನ ಭಗತ್ ಜಿ ಕಾಲೋನಿ ಕರ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಜಗದೀಶ್ ಶರ್ಮಾ ಅವರ ಮೃತ ದೇಹವು ಸೆಪ್ಟೆಂಬರ್ 5 ರಂದು ಪತ್ತೆಯಾಗಿದೆ.

ಮೃತ ದೇಹವು ಕೊಳೆತ ಸ್ಥಿತಿಯಲ್ಲಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ತಲೆಗೆ ಗಟ್ಟಿಯಾದ ವಸ್ತುವಿನಿಂದ ಹಲ್ಲೆ ಮಾಡಲಾಗಿದೆ. ಅವರ ದೇಹದ ಇತರೆ ಭಾಗಗಳಲ್ಲಿ ಗಾಯದ ಗುರುತುಗಳಿವೆ ಎಂಬುದು ತಿಳಿದುಬಂದಿದೆ. ವಿಷಯದ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:45 am, Sun, 10 September 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು