Crime News: ಬೇರೆ ಗುಂಪಿನ ರಕ್ತ ನೀಡಿದ ವೈದ್ಯರ ಎಡವಟ್ಟಿಂದ ಮಹಿಳೆ ಸಾವು!

ಆ ಮಹಿಳೆಯ ರಕ್ತದ ಗ್ರೂಪ್ ಒ ಪಾಸಿಟಿವ್ ಆಗಿದ್ದು, ಆಕೆಗೆ ವೈದ್ಯರು ತಪ್ಪಾಗಿ ಬಿ ಪಾಸಿಟಿವ್ ರಕ್ತವನ್ನು ನೀಡಿದ್ದರು. ಮಹಿಳೆಗೆ ವೈದ್ಯರು ತಪ್ಪು ಗುಂಪಿನ ರಕ್ತ ನೀಡಿದ್ದರಿಂದ ಆ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Crime News: ಬೇರೆ ಗುಂಪಿನ ರಕ್ತ ನೀಡಿದ ವೈದ್ಯರ ಎಡವಟ್ಟಿಂದ ಮಹಿಳೆ ಸಾವು!
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on:Nov 13, 2021 | 1:25 PM

ರೌರ್ಕೆಲಾ: ವೈದ್ಯರನ್ನು ದೇವರು ಎಂದು ಹೇಳಲಾಗುತ್ತದೆ. ಆದರೆ, ಆ ವೈದ್ಯರು ಕೆಲವೊಮ್ಮೆ ಮಾಡುವ ಎಡವಟ್ಟಿನಿಂದ ರೋಗಿಗಳು ಪ್ರಾಣವನ್ನೇ ಕಳೆದುಕೊಂಡ ಉದಾಹರಣೆಗಳು ಕೂಡ ಸಾಕಷ್ಟಿವೆ. ಒಡಿಶಾದ ಸುಂದರ್‌ಗಢ ಜಿಲ್ಲೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ 25 ವರ್ಷದ ಮಹಿಳೆಯೊಬ್ಬರಿಗೆ ಬೇರೆ ಗುಂಪಿನ ರಕ್ತವನ್ನು ನೀಡಿದ್ದರಿಂದ ಆಕೆ ಸಾವನ್ನಪ್ಪಿದ್ದಾರೆ. ಕುಟ್ರಾ ಬ್ಲಾಕ್‌ನ ಬುಡಕಟಾ ಗ್ರಾಮದ ನಿವಾಸಿ ಸರೋಜಿನಿ ಕಾಕು ಅವರನ್ನು ಗುರುವಾರ ಮಧ್ಯಾಹ್ನ ರೌರ್ಕೆಲಾ ಸರ್ಕಾರಿ ಆಸ್ಪತ್ರೆಗೆ (ಆರ್‌ಜಿಹೆಚ್) ಸೇರಿಸಲಾಗಿತ್ತು. ಆ ರೋಗಿಯು ರಕ್ತಹೀನತೆಯಿಂದ ಬಳಲುತ್ತಿದ್ದರು. ಆಕೆಗೆ ರಕ್ತ ವರ್ಗಾವಣೆ ಮಾಡಲಾಗಿತ್ತು.

ಆದರೆ, ಆ ಮಹಿಳೆಯ ಬ್ಲಡ್ ಗ್ರೂಪಿನ ಬದಲಾಗಿ ಬೇರೆ ಗ್ರೂಪಿನ ರಕ್ತವನ್ನು ನೀಡಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ. ಆ ಮಹಿಳೆಯ ರಕ್ತದ ಗ್ರೂಪ್ ಒ ಪಾಸಿಟಿವ್ ಆಗಿದ್ದು, ಆಕೆಗೆ ವೈದ್ಯರು ತಪ್ಪಾಗಿ ಬಿ ಪಾಸಿಟಿವ್ ರಕ್ತವನ್ನು ನೀಡಿದ್ದರು. ಮಹಿಳೆಗೆ ವೈದ್ಯರು ತಪ್ಪು ಗುಂಪಿನ ರಕ್ತ ನೀಡಿದ್ದರಿಂದ ಆ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆಕೆಯ ರಕ್ತದ ಗುಂಪು ಒ ಪಾಸಿಟಿವ್. ಆದರೆ, ಆಕೆಗೆ ಬಿ ಪಾಸಿಟಿವ್ ರಕ್ತವನ್ನು ನೀಡಲಾಗಿತ್ತು ಎಂದು ಸಂಬಂಧಿಯೊಬ್ಬರು ಆರೋಪಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆಗಾಗಿ ಮೃತದೇಹವನ್ನು ಸಂರಕ್ಷಿಸಿದ್ದಾರೆ ಎಂದು ಕುತ್ರಾ ಪೊಲೀಸ್ ಠಾಣೆ ಇನ್​ಸ್ಪೆಕ್ಟರ್ ಬಿ.ಕೆ. ಬಿಹಾರಿ ತಿಳಿಸಿದ್ದಾರೆ.

ಈ ವಿಚಾರವನ್ನು ಪರಿಶೀಲಿಸಲು ತನಿಖಾ ಸಮಿತಿಯನ್ನು ರಚಿಸಿದೆ. ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ವೈದ್ಯರು ಭರವಸೆ ನೀಡಿದ್ದಾರೆ. ತಮ್ಮ ಆಸ್ಪತ್ರೆಯಿಂದ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡಿರುವುದು ಖಚಿತವಾದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ RGH ಸೂಪರಿಂಟೆಂಡೆಂಟ್ ಜಗದೀಶ್ಚಂದ್ರ ಬೆಹೆರಾ ಹೇಳಿದ್ದಾರೆ.

ರೋಗಿಯ ಬ್ಲಡ್ ಗ್ರೂಪಿನೊಂದಿಗೆ ಮ್ಯಾಚ್ ಆದರೆ ಮಾತ್ರ ರಕ್ತವನ್ನು ನೀಡಲಾಗುತ್ತದೆ. ದಾನಿಗಳ ರಕ್ತವು ರೋಗಿಯ ರಕ್ತದೊಂದಿಗೆ ಹೊಂದಾಣಿಕೆಯಾಗುತ್ತದೆಯೇ ಎಂದು ಪರೀಕ್ಷಿಸಲು ರಕ್ತ ವರ್ಗಾವಣೆಯ ಮೊದಲು ಪರೀಕ್ಷೆ ಮಾಡಲಾಗುತ್ತದೆ. ಇದು ತಪ್ಪು ರಕ್ತದ ಗುಂಪಿನ ಪ್ರಕರಣವಾಗಿದ್ದರೆ, ರೋಗಿಯು 10ರಿಂದ15 ನಿಮಿಷಗಳಲ್ಲಿ ಸಾಯುತ್ತಿದ್ದರು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Crime News: ಕೋರ್ಟ್​ನಲ್ಲೇ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಕೊಲೆ ಆರೋಪಿ!

Murder: ಸ್ನಾನಕ್ಕೆ ಹೋದ ಗಂಡನಿಗೆ ಟವೆಲ್ ಕೊಡಲು ತಡವಾಗಿದ್ದಕ್ಕೆ ಹೆಂಡತಿಯ ಬರ್ಬರ ಹತ್ಯೆ

Published On - 1:21 pm, Sat, 13 November 21

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ