AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಗಂಡನ ಮೇಲಿನ ಕೋಪಕ್ಕೆ 11 ತಿಂಗಳ ಕಂದಮ್ಮನ ಉಸಿರುಗಟ್ಟಿಸಿ ಕೊಂದ ತಾಯಿ!

Murder News: ಗಂಡನ ಮೇಲಿನ ಕೋಪವನ್ನು ಮಗುವಿನ ಮೇಲೆ ತೋರಿಸಿದ ಆಕೆ ನೀನು ನನ್ನ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗದಿದ್ದರೆ ನಾನೇ ಕೊಂದು ಹಾಕುತ್ತೇನೆ ಎಂದು ಮಗುವಿನ ಕುತ್ತಿಗೆಯನ್ನು ತನ್ನ ದುಪ್ಪಟ್ಟಾದಿಂದ ಸುತ್ತಿದ್ದಾಳೆ.

Crime News: ಗಂಡನ ಮೇಲಿನ ಕೋಪಕ್ಕೆ 11 ತಿಂಗಳ ಕಂದಮ್ಮನ ಉಸಿರುಗಟ್ಟಿಸಿ ಕೊಂದ ತಾಯಿ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 11, 2021 | 6:49 PM

Share

ನವದೆಹಲಿ: ಗಂಡ- ಹೆಂಡತಿ ಜಗಳ ಉಂಡು ಮಲಗೋವರೆಗೆ ಎಂಬ ಗಾದೆ ಮಾತಿದೆ. ಆದರೆ, ಇಲ್ಲೊಂದು ದಂಪತಿಯ ಜಗಳದಿಂದ 11 ತಿಂಗಳ ಹಸುಗೂಸೊಂದು ಪ್ರಾಣ ಕಳೆದುಕೊಂಡಿದೆ. ದಕ್ಷಿಣ ದೆಹಲಿಯಲ್ಲಿ ತನ್ನ ಗಂಡನ ಜೊತೆ ಜಗಳವಾಡಿಕೊಂಡ ಮಹಿಳೆಯೊಬ್ಬಳು ಕೋಪದಿಂದ ತನ್ನ ಮಗುವಿನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾಳೆ.

ದೆಹಲಿಯ ಬಳಿ ಇರುವ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಮಗುವನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮಗು ಸಾವನ್ನಪ್ಪಿತ್ತು. ಮಗುವಿನ ಸಾವಿಗೆ ನೀನೇ ಕಾರಣ ಎಂದು ಆಸ್ಪತ್ರೆಯ ಎದುರಲ್ಲೇ ತಂದೆ-ತಾಯಿಯಿಬ್ಬರೂ ಜಗಳವಾಡಿ, ಹೊಡೆದಾಡಿಕೊಂಡ ಘಟನೆಯೂ ನಡೆದಿದೆ.

ಏನಿದು ಘಟನೆ?: ಈ ದಂಪತಿಯ 11 ತಿಂಗಳ ಗಂಡು ಮಗುವಿಗೆ ಬಹಳ ಜ್ವರವಿತ್ತು. ಆ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಮಗುವಿನ ತಾಯಿ ತನ್ನ ಗಂಡನಿಗೆ ಹೇಳಿದ್ದಳು. ಆದರೆ, ಆತ ತನ್ನ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಾಧ್ಯವಿಲ್ಲ ಎಂದು ಹೆಂಡತಿಯೊಂದಿಗೆ ಜಗಳವಾಡಿದ್ದ. ಅವರಿಬ್ಬರ ಜಗಳದ ನಡುವೆ ಮಗುವಿನ ಅನಾರೋಗ್ಯದ ವಿಚಾರವನ್ನೇ ಮರೆತು ಇಬ್ಬರೂ ಕಿತ್ತಾಡಿದ್ದಾರೆ. ಗಂಡನ ಮೇಲಿನ ಕೋಪವನ್ನು ಮಗುವಿನ ಮೇಲೆ ತೋರಿಸಿದ ಆಕೆ ನೀನು ನನ್ನ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗದಿದ್ದರೆ ನಾನೇ ಕೊಂದು ಹಾಕುತ್ತೇನೆ ಎಂದು ಮಗುವಿನ ಕುತ್ತಿಗೆಯನ್ನು ತನ್ನ ದುಪ್ಪಟ್ಟಾದಿಂದ ಸುತ್ತಿದ್ದಾಳೆ. ಹೀಗಾಗಿ, ಉಸಿರಾಟದ ತೊಂದರೆಯಿಂದ ಮಗು ಪ್ರಾಣ ಬಿಟ್ಟಿದೆ.

ಮಗುವಿನ ತಾಯಿ 26 ವರ್ಷದ ಜ್ಯೋತಿ ಹಾಗೂ ಆಕೆಯ ಗಂಡನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರೆದುರು ತಪ್ಪೊಪ್ಪಿಕೊಂಡಿರುವ ಜ್ಯೋತಿ, ನನ್ನ ಗಂಡನಿಗೆ ನನ್ನ ಮೇಲೆ ಪ್ರೀತಿ ಇರಲಿಲ್ಲ. ದಿನವೂ ಮನೆಗೆ ಬಂದು ಜಗಳವಾಡುತ್ತಿದ್ದ. ನನ್ನ ಮಗುವನ್ನೂ ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ ಎಂದು ಜ್ಯೋತಿ ಆರೋಪಿಸಿದ್ದಾಳೆ.

ಇನ್ನು, ಜ್ಯೋತಿಯ ತಂದೆ-ತಾಯಿ ಆ ಮಗುವನ್ನು ಜ್ಯೋತಿಯ ಗಂಡನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಮೃತ ಮಗುವಿನ ತಂದೆ ಅಲ್ಲಗಳೆದಿದ್ದಾನೆ. ಆ ಗ್ರಾಮದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Crime News: ಬಾಯ್​ಫ್ರೆಂಡ್​ನನ್ನು ಕೆಲಸದಿಂದ ಕಿತ್ತೊಗೆದ ಕಂಪನಿಗೆ ಗರ್ಲ್​ಫ್ರೆಂಡ್ ಮಾಡಿದ್ದೇನು ಗೊತ್ತಾ?

ಇದನ್ನೂ ಓದಿ: Bengaluru Crime: ಆಟವಾಡಲು ಪಕ್ಕದ ಮನೆಗೆ ಹೋಗಿದ್ದೇ ತಪ್ಪಾಯ್ತು; ಮಗಳನ್ನು ಹೊಡೆದು, ಕ್ಯಾಂಡಲ್​ನಿಂದ ಕೈ ಸುಟ್ಟ ತಾಯಿ

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ