AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಗಂಡನ ಮೇಲಿನ ಕೋಪಕ್ಕೆ 11 ತಿಂಗಳ ಕಂದಮ್ಮನ ಉಸಿರುಗಟ್ಟಿಸಿ ಕೊಂದ ತಾಯಿ!

Murder News: ಗಂಡನ ಮೇಲಿನ ಕೋಪವನ್ನು ಮಗುವಿನ ಮೇಲೆ ತೋರಿಸಿದ ಆಕೆ ನೀನು ನನ್ನ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗದಿದ್ದರೆ ನಾನೇ ಕೊಂದು ಹಾಕುತ್ತೇನೆ ಎಂದು ಮಗುವಿನ ಕುತ್ತಿಗೆಯನ್ನು ತನ್ನ ದುಪ್ಪಟ್ಟಾದಿಂದ ಸುತ್ತಿದ್ದಾಳೆ.

Crime News: ಗಂಡನ ಮೇಲಿನ ಕೋಪಕ್ಕೆ 11 ತಿಂಗಳ ಕಂದಮ್ಮನ ಉಸಿರುಗಟ್ಟಿಸಿ ಕೊಂದ ತಾಯಿ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 11, 2021 | 6:49 PM

Share

ನವದೆಹಲಿ: ಗಂಡ- ಹೆಂಡತಿ ಜಗಳ ಉಂಡು ಮಲಗೋವರೆಗೆ ಎಂಬ ಗಾದೆ ಮಾತಿದೆ. ಆದರೆ, ಇಲ್ಲೊಂದು ದಂಪತಿಯ ಜಗಳದಿಂದ 11 ತಿಂಗಳ ಹಸುಗೂಸೊಂದು ಪ್ರಾಣ ಕಳೆದುಕೊಂಡಿದೆ. ದಕ್ಷಿಣ ದೆಹಲಿಯಲ್ಲಿ ತನ್ನ ಗಂಡನ ಜೊತೆ ಜಗಳವಾಡಿಕೊಂಡ ಮಹಿಳೆಯೊಬ್ಬಳು ಕೋಪದಿಂದ ತನ್ನ ಮಗುವಿನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾಳೆ.

ದೆಹಲಿಯ ಬಳಿ ಇರುವ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಮಗುವನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮಗು ಸಾವನ್ನಪ್ಪಿತ್ತು. ಮಗುವಿನ ಸಾವಿಗೆ ನೀನೇ ಕಾರಣ ಎಂದು ಆಸ್ಪತ್ರೆಯ ಎದುರಲ್ಲೇ ತಂದೆ-ತಾಯಿಯಿಬ್ಬರೂ ಜಗಳವಾಡಿ, ಹೊಡೆದಾಡಿಕೊಂಡ ಘಟನೆಯೂ ನಡೆದಿದೆ.

ಏನಿದು ಘಟನೆ?: ಈ ದಂಪತಿಯ 11 ತಿಂಗಳ ಗಂಡು ಮಗುವಿಗೆ ಬಹಳ ಜ್ವರವಿತ್ತು. ಆ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಮಗುವಿನ ತಾಯಿ ತನ್ನ ಗಂಡನಿಗೆ ಹೇಳಿದ್ದಳು. ಆದರೆ, ಆತ ತನ್ನ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಾಧ್ಯವಿಲ್ಲ ಎಂದು ಹೆಂಡತಿಯೊಂದಿಗೆ ಜಗಳವಾಡಿದ್ದ. ಅವರಿಬ್ಬರ ಜಗಳದ ನಡುವೆ ಮಗುವಿನ ಅನಾರೋಗ್ಯದ ವಿಚಾರವನ್ನೇ ಮರೆತು ಇಬ್ಬರೂ ಕಿತ್ತಾಡಿದ್ದಾರೆ. ಗಂಡನ ಮೇಲಿನ ಕೋಪವನ್ನು ಮಗುವಿನ ಮೇಲೆ ತೋರಿಸಿದ ಆಕೆ ನೀನು ನನ್ನ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗದಿದ್ದರೆ ನಾನೇ ಕೊಂದು ಹಾಕುತ್ತೇನೆ ಎಂದು ಮಗುವಿನ ಕುತ್ತಿಗೆಯನ್ನು ತನ್ನ ದುಪ್ಪಟ್ಟಾದಿಂದ ಸುತ್ತಿದ್ದಾಳೆ. ಹೀಗಾಗಿ, ಉಸಿರಾಟದ ತೊಂದರೆಯಿಂದ ಮಗು ಪ್ರಾಣ ಬಿಟ್ಟಿದೆ.

ಮಗುವಿನ ತಾಯಿ 26 ವರ್ಷದ ಜ್ಯೋತಿ ಹಾಗೂ ಆಕೆಯ ಗಂಡನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರೆದುರು ತಪ್ಪೊಪ್ಪಿಕೊಂಡಿರುವ ಜ್ಯೋತಿ, ನನ್ನ ಗಂಡನಿಗೆ ನನ್ನ ಮೇಲೆ ಪ್ರೀತಿ ಇರಲಿಲ್ಲ. ದಿನವೂ ಮನೆಗೆ ಬಂದು ಜಗಳವಾಡುತ್ತಿದ್ದ. ನನ್ನ ಮಗುವನ್ನೂ ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ ಎಂದು ಜ್ಯೋತಿ ಆರೋಪಿಸಿದ್ದಾಳೆ.

ಇನ್ನು, ಜ್ಯೋತಿಯ ತಂದೆ-ತಾಯಿ ಆ ಮಗುವನ್ನು ಜ್ಯೋತಿಯ ಗಂಡನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಮೃತ ಮಗುವಿನ ತಂದೆ ಅಲ್ಲಗಳೆದಿದ್ದಾನೆ. ಆ ಗ್ರಾಮದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Crime News: ಬಾಯ್​ಫ್ರೆಂಡ್​ನನ್ನು ಕೆಲಸದಿಂದ ಕಿತ್ತೊಗೆದ ಕಂಪನಿಗೆ ಗರ್ಲ್​ಫ್ರೆಂಡ್ ಮಾಡಿದ್ದೇನು ಗೊತ್ತಾ?

ಇದನ್ನೂ ಓದಿ: Bengaluru Crime: ಆಟವಾಡಲು ಪಕ್ಕದ ಮನೆಗೆ ಹೋಗಿದ್ದೇ ತಪ್ಪಾಯ್ತು; ಮಗಳನ್ನು ಹೊಡೆದು, ಕ್ಯಾಂಡಲ್​ನಿಂದ ಕೈ ಸುಟ್ಟ ತಾಯಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ