AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಗಂಡನ ಜತೆ ಜಗಳವಾಡಿ 4 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕೊಳಕ್ಕೆ ನೂಕಿದ ಮಹಿಳೆ; 3 ಸಾವು

ಪತಿ ಅಸ್ಲಾಂ ಅಲಂ ಅಬ್ರಾಡ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಶುಕ್ರವಾರ ದೂರವಾಣಿ ಕರೆಯಲ್ಲಿ ಇವರಿಬ್ಬರ ಮಧ್ಯೆ ಮನಸ್ಥಾಪ ಉಂಟಾಗಿದೆ.

Crime News: ಗಂಡನ ಜತೆ ಜಗಳವಾಡಿ 4 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕೊಳಕ್ಕೆ ನೂಕಿದ ಮಹಿಳೆ; 3 ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 25, 2021 | 11:52 AM

Share

ನಾಲ್ಕು ಅಪ್ರಾಪ್ತ ಹೆಣ್ಣು ಮಕ್ಕಳನ್ನು ತಾಯಿಯೇ ಕೊಳದಲ್ಲಿ ಎಸೆದ ಮನಕಲಕುವ ಘಟನೆಯೊಂದು ನಡೆದಿದೆ. ಅಬ್ರೋಡ್​ನಲ್ಲಿದ್ದ ತನ್ನ ಪತಿಯೊಡನೆ(Husband) ಪತ್ನಿ(Wife) ದೂರವಾಣಿ ಕರೆ ಮಾಡಿ ಮಾತನಾಡಿದ್ದಾಳೆ. ಅವರಿಬ್ಬದ ನಡುವೆ ನಡೆದ ಸಣ್ಣ ಮನಸ್ತಾಪ ವಿಪರೀತಗೊಂಡು ಜಗಳಕ್ಕೆ ಕಾರಣವಾಗಿದೆ. ಬಳಿಕ ತಾಯಿ ಹೆಣ್ಣು ಮಕ್ಕಳನ್ನು(Daughters) ಕೊಳಕ್ಕೆ ನೂಕಿದ್ದಾಳೆ. ಮೂರು ಹೆಣ್ಣು ಮಕ್ಕಳು ಸಾವಿಗೀಡಾಗಿದ್ದಾರೆ(Death). ಒಂದು ಮಗುವನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂಬುದು ವರದಿಗಳಿಂದ ತಿಳಿದು ಬಂದಿದೆ.

ನೂರ್ಜಹಾನ್ ನಿಸಾನ್ ಮತ್ತು ಅಸ್ಲಾಮ್ ಅಲಂ ಇಬ್ಬರು ದಂಪತಿಗಳು. ಇವರಿಗೆ 4 ಜನ ಹೆಣ್ಣು ಮಕ್ಕಳು. ನೂರ್ಜಹಾನ್ ನಿಸಾನ್ ತನ್ನ ನಾಲ್ಕು ಜನ ಹೆಣ್ಣು ಮಕ್ಕಳೊಂದಿಗೆ ಬಿಹಾರ ಗೋಪಾಲಗಂಜ್​ ಜಿಲ್ಲೆಯಲ್ಲಿ ವಾಸಿಸುತ್ತಿರುತ್ತಾಳೆ. ಪತಿ ಅಸ್ಲಾಂ ಅಲಂ ಅಬ್ರಾಡ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಶುಕ್ರವಾರ ದೂರವಾಣಿ ಕರೆಯಲ್ಲಿ ಇವರಿಬ್ಬರ ಮಧ್ಯೆ ಮನಸ್ಥಾಪ ಉಂಟಾಗಿದೆ.

ಬಳಿಕವೇ ನಿಸಾನ್ ತಡ ಮಾಡದೇ ಬ್ಯಾಗ್​ಪ್ಯಾಕ್​ ಮಾಡಿಕೊಂಡು ತನ್ನ ಮೂಲ ನೆಲೆಯಾದ ಉತ್ತರಪ್ರದೇಶದ ಖುಷಿ ನಗರಕ್ಕೆ ಹೊರಟಿದ್ದಾರೆ. ಹೊರಡುವ ಮುನ್ನ ಮನೆಯ ಹತ್ತಿರದಲ್ಲಿದ್ದ ಕೊಳದಲ್ಲಿ ತನ್ನ ನಾಲ್ಕೂ ಹೆಣ್ಣು ಮಕ್ಕಳನ್ನು ನೂಕಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹೆಣ್ಣು ಮಕ್ಕಳ ರಕ್ಷಣೆಗೆ ಮುಂದಾಗಿದ್ದಾರೆ. ಒಂದು ಮಗುವಿನ ಜೀವ ಉಳಿದಿದ್ದು, ಇನ್ನು ಮೂರ್ವರು ಶವವಾಗಿ ಪತ್ತೆಯಾಗಿದ್ದಾರೆ.

ಗಿಲಬ್ಸಾ (8), ಅಫ್ರಿನಾ ಖತೂನ್ (5), ನುಸಬಾ ಖತೂನ್(3) ಮತ್ತು ಸಹೆಬಾ ಖತೂನ್ (2.5) ಇವರನ್ನು ತಾಯಿ ನಿಸಾನ್ ಕೊಳಕ್ಕೆ ನೂಕಿರುವ ವಿಷಯ ತಿಳಿದು ಬಂದಿದೆ. ಇವರಲ್ಲಿ ಗಿಲಬ್ಸಾ, ನುಸಬಾ ಮತ್ತು ಸಹೆಬಾ ಸಾವಿಗೀಡಾಗಿದ್ದಾರೆ ಮತ್ತು ಅಫ್ರೀನಾಳನ್ನು ಸ್ಥಳಿಯರು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಘಟನೆಯ ಬಳಿಕ ತಾಯಿ ನಿಸಾನ್​ರನ್ನು ಬಂಧಿಸಲಾಗಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಈ ಕುರಿತಂತೆ ವರದಿಗಳಿಂದ ಮಾಹಿತಿ ತಿಳಿದು ಬಂದಿದೆ.

ಇದನ್ನೂ ಓದಿ:

Crime News: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗೆ ಗಲ್ಲು ಶಿಕ್ಷೆ

Crime News: 26 ವರ್ಷದ ಹಿಂದಿನ ಕೊಲೆ ಆರೋಪ ಸಾಬೀತು; ಬಿಜೆಪಿ ನಾಯಕನಿಗೆ ಜೀವಾವಧಿ ಶಿಕ್ಷೆ

(Crime News women through 4 daughter in ponda after fight with husband at bihar)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ