AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಗಂಡನ ಜತೆ ಜಗಳವಾಡಿ 4 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕೊಳಕ್ಕೆ ನೂಕಿದ ಮಹಿಳೆ; 3 ಸಾವು

ಪತಿ ಅಸ್ಲಾಂ ಅಲಂ ಅಬ್ರಾಡ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಶುಕ್ರವಾರ ದೂರವಾಣಿ ಕರೆಯಲ್ಲಿ ಇವರಿಬ್ಬರ ಮಧ್ಯೆ ಮನಸ್ಥಾಪ ಉಂಟಾಗಿದೆ.

Crime News: ಗಂಡನ ಜತೆ ಜಗಳವಾಡಿ 4 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕೊಳಕ್ಕೆ ನೂಕಿದ ಮಹಿಳೆ; 3 ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shruti hegde

Updated on: Jul 25, 2021 | 11:52 AM

ನಾಲ್ಕು ಅಪ್ರಾಪ್ತ ಹೆಣ್ಣು ಮಕ್ಕಳನ್ನು ತಾಯಿಯೇ ಕೊಳದಲ್ಲಿ ಎಸೆದ ಮನಕಲಕುವ ಘಟನೆಯೊಂದು ನಡೆದಿದೆ. ಅಬ್ರೋಡ್​ನಲ್ಲಿದ್ದ ತನ್ನ ಪತಿಯೊಡನೆ(Husband) ಪತ್ನಿ(Wife) ದೂರವಾಣಿ ಕರೆ ಮಾಡಿ ಮಾತನಾಡಿದ್ದಾಳೆ. ಅವರಿಬ್ಬದ ನಡುವೆ ನಡೆದ ಸಣ್ಣ ಮನಸ್ತಾಪ ವಿಪರೀತಗೊಂಡು ಜಗಳಕ್ಕೆ ಕಾರಣವಾಗಿದೆ. ಬಳಿಕ ತಾಯಿ ಹೆಣ್ಣು ಮಕ್ಕಳನ್ನು(Daughters) ಕೊಳಕ್ಕೆ ನೂಕಿದ್ದಾಳೆ. ಮೂರು ಹೆಣ್ಣು ಮಕ್ಕಳು ಸಾವಿಗೀಡಾಗಿದ್ದಾರೆ(Death). ಒಂದು ಮಗುವನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂಬುದು ವರದಿಗಳಿಂದ ತಿಳಿದು ಬಂದಿದೆ.

ನೂರ್ಜಹಾನ್ ನಿಸಾನ್ ಮತ್ತು ಅಸ್ಲಾಮ್ ಅಲಂ ಇಬ್ಬರು ದಂಪತಿಗಳು. ಇವರಿಗೆ 4 ಜನ ಹೆಣ್ಣು ಮಕ್ಕಳು. ನೂರ್ಜಹಾನ್ ನಿಸಾನ್ ತನ್ನ ನಾಲ್ಕು ಜನ ಹೆಣ್ಣು ಮಕ್ಕಳೊಂದಿಗೆ ಬಿಹಾರ ಗೋಪಾಲಗಂಜ್​ ಜಿಲ್ಲೆಯಲ್ಲಿ ವಾಸಿಸುತ್ತಿರುತ್ತಾಳೆ. ಪತಿ ಅಸ್ಲಾಂ ಅಲಂ ಅಬ್ರಾಡ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಶುಕ್ರವಾರ ದೂರವಾಣಿ ಕರೆಯಲ್ಲಿ ಇವರಿಬ್ಬರ ಮಧ್ಯೆ ಮನಸ್ಥಾಪ ಉಂಟಾಗಿದೆ.

ಬಳಿಕವೇ ನಿಸಾನ್ ತಡ ಮಾಡದೇ ಬ್ಯಾಗ್​ಪ್ಯಾಕ್​ ಮಾಡಿಕೊಂಡು ತನ್ನ ಮೂಲ ನೆಲೆಯಾದ ಉತ್ತರಪ್ರದೇಶದ ಖುಷಿ ನಗರಕ್ಕೆ ಹೊರಟಿದ್ದಾರೆ. ಹೊರಡುವ ಮುನ್ನ ಮನೆಯ ಹತ್ತಿರದಲ್ಲಿದ್ದ ಕೊಳದಲ್ಲಿ ತನ್ನ ನಾಲ್ಕೂ ಹೆಣ್ಣು ಮಕ್ಕಳನ್ನು ನೂಕಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹೆಣ್ಣು ಮಕ್ಕಳ ರಕ್ಷಣೆಗೆ ಮುಂದಾಗಿದ್ದಾರೆ. ಒಂದು ಮಗುವಿನ ಜೀವ ಉಳಿದಿದ್ದು, ಇನ್ನು ಮೂರ್ವರು ಶವವಾಗಿ ಪತ್ತೆಯಾಗಿದ್ದಾರೆ.

ಗಿಲಬ್ಸಾ (8), ಅಫ್ರಿನಾ ಖತೂನ್ (5), ನುಸಬಾ ಖತೂನ್(3) ಮತ್ತು ಸಹೆಬಾ ಖತೂನ್ (2.5) ಇವರನ್ನು ತಾಯಿ ನಿಸಾನ್ ಕೊಳಕ್ಕೆ ನೂಕಿರುವ ವಿಷಯ ತಿಳಿದು ಬಂದಿದೆ. ಇವರಲ್ಲಿ ಗಿಲಬ್ಸಾ, ನುಸಬಾ ಮತ್ತು ಸಹೆಬಾ ಸಾವಿಗೀಡಾಗಿದ್ದಾರೆ ಮತ್ತು ಅಫ್ರೀನಾಳನ್ನು ಸ್ಥಳಿಯರು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಘಟನೆಯ ಬಳಿಕ ತಾಯಿ ನಿಸಾನ್​ರನ್ನು ಬಂಧಿಸಲಾಗಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಈ ಕುರಿತಂತೆ ವರದಿಗಳಿಂದ ಮಾಹಿತಿ ತಿಳಿದು ಬಂದಿದೆ.

ಇದನ್ನೂ ಓದಿ:

Crime News: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗೆ ಗಲ್ಲು ಶಿಕ್ಷೆ

Crime News: 26 ವರ್ಷದ ಹಿಂದಿನ ಕೊಲೆ ಆರೋಪ ಸಾಬೀತು; ಬಿಜೆಪಿ ನಾಯಕನಿಗೆ ಜೀವಾವಧಿ ಶಿಕ್ಷೆ

(Crime News women through 4 daughter in ponda after fight with husband at bihar)

ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್