AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadagiri Gang Rape: ಯಾದಗಿರಿಯಲ್ಲಿ ದೇವಸ್ಥಾನದಿಂದ ಬರುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Crime News | ಆಗಸ್ಟ್ 8ರಂದು ದೇವಸ್ಥಾನದಿಂದ ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯನ್ನು ಅಡ್ಡ ಹಾಕಿದ ಆರೋಪಿಗಳು ಯಾದಗಿರಿ- ಶಹಾಪುರ ಮಾರ್ಗದ ಮಧ್ಯೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

Yadagiri Gang Rape: ಯಾದಗಿರಿಯಲ್ಲಿ ದೇವಸ್ಥಾನದಿಂದ ಬರುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 10, 2021 | 3:56 PM

Share

ಯಾದಗಿರಿ: ಕೊವಿಡ್ ಅಟ್ಟಹಾಸದ ನಡುವೆಯೂ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಿಲ್ಲ. ಕೊಲೆ, ದರೋಡೆ, ಅತ್ಯಾಚಾರದಂತಹ ಪ್ರಕರಣಗಳು ನಡೆಯುತ್ತಲೇ ಇವೆ. ಈ ನಡುವೆ ಯಾದಗಿರಿಯಲ್ಲಿ ಹಾಡಹಗಲೇ 45 ವರ್ಷದ ಮಹಿಳೆಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆಯೊಂದು ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಕುಡಿತದ ಅಮಲಿನಲ್ಲಿದ್ದ ಆಟೋ ಚಾಲಕ ಸೇರಿ ಇಬ್ಬರಿಂದ ಈ ಕೃತ್ಯ ನಡೆದಿದೆ.

ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೈಕ್​ನಲ್ಲಿ ಮನೆಗೆ ತೆರಳುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿದ ಕಾಮುಕರು ಆಕೆಯನ್ನು ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ. ಆಗಸ್ಟ್ 8ರಂದು ದೇವಸ್ಥಾನದಿಂದ ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯನ್ನು ಅಡ್ಡ ಹಾಕಿದ ಆರೋಪಿಗಳು ಯಾದಗಿರಿ- ಶಹಾಪುರ ಮಾರ್ಗದ ಮಧ್ಯೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಈ ಬಗ್ಗೆ ಶಹಾಪುರ ಪೊಲೀಸ್​ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಾರೆ. ರಾಜು (21), ವೀರೇಶ್ (25) ಬಂಧಿತ ಆರೋಪಿಗಳಾಗಿದ್ದಾರೆ. ಕಂಠಪೂರ್ತಿ ಕುಡಿದಿದ್ದ ಕಾಮುಕರು ಆಟೋದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ. ಈ ಕೃತ್ಯಕ್ಕೆ ಬಳಸಿದ್ದ ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Crime News: ಪ್ರೀತಿಗಾಗಿ ಗೆಳೆಯನ ತಲೆಯನ್ನೇ ಕತ್ತರಿಸಿದ 17 ವರ್ಷದ ಯುವಕ; ತ್ರಿಕೋನ ಪ್ರೇಮಕತೆಯ ದುರಂತ ಅಂತ್ಯ

Crime News: ಅಕ್ರಮ ಸಂಬಂಧ ತಂದ ಕಂಟಕ; ಹೆಂಡತಿಯ ಪ್ರಿಯಕರನ ಗುಪ್ತಾಂಗಕ್ಕೆ ಶೂಟ್ ಮಾಡಿದ ಗಂಡ!

(Yadagiri Woman Gang Raped by Drunken Men while Returning from Temple)

Published On - 3:56 pm, Tue, 10 August 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ