AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ತಂಗಿಯಿಂದ ರಾಖಿ ಕಟ್ಟಿಸಿಕೊಂಡ ದಿನವೇ ಹೆಣವಾದ ಅಣ್ಣ!

ಪಂಜಾಬ್‌ನಲ್ಲಿ ಡ್ರಗ್ಸ್ ಸೇವನೆಯಿಂದ ಯುವಕರ ಸಾವು ಇನ್ನೂ ನಿಂತಿಲ್ಲ. ಅಮೃತಸರದ ಅಟ್ಟಾರಿ ಗಡಿ ಪ್ರದೇಶದ ಚಿದ್ದನ್ ಗ್ರಾಮದಲ್ಲಿ ರಕ್ಷಾಬಂಧನದ ದಿನದಂದು ಮಾದಕ ವ್ಯಸನಿಯೊಬ್ಬ ಮೃತಪಟ್ಟಿದ್ದಾನೆ.

Crime News: ತಂಗಿಯಿಂದ ರಾಖಿ ಕಟ್ಟಿಸಿಕೊಂಡ ದಿನವೇ ಹೆಣವಾದ ಅಣ್ಣ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Sep 01, 2023 | 5:09 PM

Share

ಅಮೃತಸರ: ಪಂಜಾಬ್​ನ ಅಮೃತಸರದ (Amritsar) ಗಡಿ ಪ್ರದೇಶವಾದ ಅಟ್ಟಾರಿಯ ಚಿದ್ದನ್ ಗ್ರಾಮದಲ್ಲಿ ರಕ್ಷಾ ಬಂಧನದ (Raksha bandhan) ದಿನದಂದು ಮಾದಕ ವ್ಯಸನಿಯೊಬ್ಬ ಡ್ರಗ್ಸ್​ನಿಂದ ಸಾವನ್ನಪ್ಪಿದ್ದಾನೆ. ಗುರುವಾರ ಇಡೀ ಭಾರತ ರಾಖಿ ಹಬ್ಬವನ್ನು ಆಚರಿಸುತ್ತಿದ್ದರೆ ಚಿದ್ದನ್ ಗ್ರಾಮದಲ್ಲಿ ತಂಗಿಯಿಂದ ರಾಖಿ ಕಟ್ಟಿಸಿಕೊಂಡ ಅಣ್ಣ ಡ್ರಗ್ಸ್​ ಇಂಜೆಕ್ಷನ್ ಚುಚ್ಚಿಕೊಂಡು ಸಾವನ್ನಪ್ಪಿದ್ದಾನೆ. ನವದೀಪ್ ಕೌರ್ ಎಂಬ ಯುವತಿಯ ಅಣ್ಣ ದಿಲ್ ಎಂಬಾತ ಡ್ರಗ್ಸ್​ಗೆ ಬಲಿಯಾಗಿ ಮೃತಪಟ್ಟ ಯುವಕ.

ಪಂಜಾಬ್‌ನಲ್ಲಿ ಡ್ರಗ್ಸ್ ಸೇವನೆಯಿಂದ ಯುವಕರ ಸಾವು ಇನ್ನೂ ನಿಂತಿಲ್ಲ. ಅಮೃತಸರದ ಅಟ್ಟಾರಿ ಗಡಿ ಪ್ರದೇಶದ ಚಿದ್ದನ್ ಗ್ರಾಮದಲ್ಲಿ ರಾಖಿ ದಿನದಂದು ಮಾದಕ ವ್ಯಸನಿಯೊಬ್ಬ ಮೃತಪಟ್ಟಿದ್ದಾನೆ. ಆತ ತನ್ನ ಕುಟುಂಬದಲ್ಲಿ ಒಬ್ಬನೇ ಮಗನಾಗಿದ್ದು, ಆತನ ಸಾವಿನಿಂದ ಕುಟುಂಬ ಕಂಗಾಲಾಗಿದೆ. ಆ ಗ್ರಾಮದಲ್ಲಿ ಮನೆ ಮನೆಯಲ್ಲೂ ಡ್ರಗ್ಸ್​ ಮಾರಾಟವಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪೈಲಟ್ ಸಹೋದರನಿಗೆ ಸಾವಿರಾರು ಅಡಿ ಎತ್ತರದಲ್ಲಿ ವಿಮಾನ ಹಾರಾಡುತ್ತಿರುವಾಗಲೇ ರಾಖಿ ಕಟ್ಟಿದ ಸಹೋದರಿ

ಗುರುವಾರ ಇಡೀ ಭಾರತ ರಾಖಿ ಹಬ್ಬವನ್ನು ಆಚರಿಸುತ್ತಿದೆ. ಆದರೆ ರಾಖಿ ಹಬ್ಬದಂದು ನನ್ನ ಅಣ್ಣ ನನ್ನಿಂದ ದೂರವಾಗಿದ್ದಾನೆ ಎಂದು ಮೃತನ ಸಹೋದರಿ ನವದೀಪ್ ಕೌರ್ ಬೇಸರ ಹೊರಹಾಕಿದ್ದಾರೆ. ರಕ್ಷಾಬಂಧನದ ದಿನ ಬೆಳಗ್ಗೆ ನಾನು ಅಣ್ಣನ ಕೈಗೆ ರಾಖಿ ಕಟ್ಟಿದ್ದೆ. ಅದಾದ ನಂತರ ಆತ ತನ್ನ ಸ್ನೇಹಿತರನ್ನು ಭೇಟಿಯಾಗಲು ಹೊರಟಿದ್ದ ಎಂದು ಆಕೆ ಹೇಳಿದ್ದಾರೆ.

ಮಧ್ಯಾಹ್ನದ ನಂತರ ಮನೆಗೆ ಬಂದ ಆತ ಎಲ್ಲಿಂದಲೋ ಡ್ರಗ್ಸ್ ಪ್ಯಾಕೆಟ್ ತಂದು ಸೀದಾ ಬಾತ್ ರೂಮಿಗೆ ಹೋದ. ಅಲ್ಲಿ ಇಂಜೆಕ್ಷನ್ ಮೂಲಕ ಡ್ರಗ್ಸ್​ ಚುಚ್ಚಿಕೊಂಡು ಆತ ಸಾವನ್ನಪ್ಪಿದ್ದಾನೆ. ಬಹಳ ಹೊತ್ತಾದರೂ ಬಾತ್ ರೂಂ ಬಾಗಿಲು ತೆರೆಯದೇ ಇದ್ದಾಗ ಆತನ ತಂದೆ ಬಾಗಿಲು ಒಡೆದರು. ಆ ದಿಲ್‌ನ ಹೆಣವಾಗಿ ಬಿದ್ದಿದ್ದ. ಅವನ ತೋಳಿಗೆ ಡ್ರಗ್ ಇಂಜೆಕ್ಷನ್ ಚುಚ್ಚಿಕೊಂಡಿತ್ತು ಎಂದು ಆಕೆ ಹೇಳಿದ್ದಾರೆ.

ಅಪರಾಧಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್