Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ತಂಗಿಯಿಂದ ರಾಖಿ ಕಟ್ಟಿಸಿಕೊಂಡ ದಿನವೇ ಹೆಣವಾದ ಅಣ್ಣ!

ಪಂಜಾಬ್‌ನಲ್ಲಿ ಡ್ರಗ್ಸ್ ಸೇವನೆಯಿಂದ ಯುವಕರ ಸಾವು ಇನ್ನೂ ನಿಂತಿಲ್ಲ. ಅಮೃತಸರದ ಅಟ್ಟಾರಿ ಗಡಿ ಪ್ರದೇಶದ ಚಿದ್ದನ್ ಗ್ರಾಮದಲ್ಲಿ ರಕ್ಷಾಬಂಧನದ ದಿನದಂದು ಮಾದಕ ವ್ಯಸನಿಯೊಬ್ಬ ಮೃತಪಟ್ಟಿದ್ದಾನೆ.

Crime News: ತಂಗಿಯಿಂದ ರಾಖಿ ಕಟ್ಟಿಸಿಕೊಂಡ ದಿನವೇ ಹೆಣವಾದ ಅಣ್ಣ!
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Sep 01, 2023 | 5:09 PM

ಅಮೃತಸರ: ಪಂಜಾಬ್​ನ ಅಮೃತಸರದ (Amritsar) ಗಡಿ ಪ್ರದೇಶವಾದ ಅಟ್ಟಾರಿಯ ಚಿದ್ದನ್ ಗ್ರಾಮದಲ್ಲಿ ರಕ್ಷಾ ಬಂಧನದ (Raksha bandhan) ದಿನದಂದು ಮಾದಕ ವ್ಯಸನಿಯೊಬ್ಬ ಡ್ರಗ್ಸ್​ನಿಂದ ಸಾವನ್ನಪ್ಪಿದ್ದಾನೆ. ಗುರುವಾರ ಇಡೀ ಭಾರತ ರಾಖಿ ಹಬ್ಬವನ್ನು ಆಚರಿಸುತ್ತಿದ್ದರೆ ಚಿದ್ದನ್ ಗ್ರಾಮದಲ್ಲಿ ತಂಗಿಯಿಂದ ರಾಖಿ ಕಟ್ಟಿಸಿಕೊಂಡ ಅಣ್ಣ ಡ್ರಗ್ಸ್​ ಇಂಜೆಕ್ಷನ್ ಚುಚ್ಚಿಕೊಂಡು ಸಾವನ್ನಪ್ಪಿದ್ದಾನೆ. ನವದೀಪ್ ಕೌರ್ ಎಂಬ ಯುವತಿಯ ಅಣ್ಣ ದಿಲ್ ಎಂಬಾತ ಡ್ರಗ್ಸ್​ಗೆ ಬಲಿಯಾಗಿ ಮೃತಪಟ್ಟ ಯುವಕ.

ಪಂಜಾಬ್‌ನಲ್ಲಿ ಡ್ರಗ್ಸ್ ಸೇವನೆಯಿಂದ ಯುವಕರ ಸಾವು ಇನ್ನೂ ನಿಂತಿಲ್ಲ. ಅಮೃತಸರದ ಅಟ್ಟಾರಿ ಗಡಿ ಪ್ರದೇಶದ ಚಿದ್ದನ್ ಗ್ರಾಮದಲ್ಲಿ ರಾಖಿ ದಿನದಂದು ಮಾದಕ ವ್ಯಸನಿಯೊಬ್ಬ ಮೃತಪಟ್ಟಿದ್ದಾನೆ. ಆತ ತನ್ನ ಕುಟುಂಬದಲ್ಲಿ ಒಬ್ಬನೇ ಮಗನಾಗಿದ್ದು, ಆತನ ಸಾವಿನಿಂದ ಕುಟುಂಬ ಕಂಗಾಲಾಗಿದೆ. ಆ ಗ್ರಾಮದಲ್ಲಿ ಮನೆ ಮನೆಯಲ್ಲೂ ಡ್ರಗ್ಸ್​ ಮಾರಾಟವಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪೈಲಟ್ ಸಹೋದರನಿಗೆ ಸಾವಿರಾರು ಅಡಿ ಎತ್ತರದಲ್ಲಿ ವಿಮಾನ ಹಾರಾಡುತ್ತಿರುವಾಗಲೇ ರಾಖಿ ಕಟ್ಟಿದ ಸಹೋದರಿ

ಗುರುವಾರ ಇಡೀ ಭಾರತ ರಾಖಿ ಹಬ್ಬವನ್ನು ಆಚರಿಸುತ್ತಿದೆ. ಆದರೆ ರಾಖಿ ಹಬ್ಬದಂದು ನನ್ನ ಅಣ್ಣ ನನ್ನಿಂದ ದೂರವಾಗಿದ್ದಾನೆ ಎಂದು ಮೃತನ ಸಹೋದರಿ ನವದೀಪ್ ಕೌರ್ ಬೇಸರ ಹೊರಹಾಕಿದ್ದಾರೆ. ರಕ್ಷಾಬಂಧನದ ದಿನ ಬೆಳಗ್ಗೆ ನಾನು ಅಣ್ಣನ ಕೈಗೆ ರಾಖಿ ಕಟ್ಟಿದ್ದೆ. ಅದಾದ ನಂತರ ಆತ ತನ್ನ ಸ್ನೇಹಿತರನ್ನು ಭೇಟಿಯಾಗಲು ಹೊರಟಿದ್ದ ಎಂದು ಆಕೆ ಹೇಳಿದ್ದಾರೆ.

ಮಧ್ಯಾಹ್ನದ ನಂತರ ಮನೆಗೆ ಬಂದ ಆತ ಎಲ್ಲಿಂದಲೋ ಡ್ರಗ್ಸ್ ಪ್ಯಾಕೆಟ್ ತಂದು ಸೀದಾ ಬಾತ್ ರೂಮಿಗೆ ಹೋದ. ಅಲ್ಲಿ ಇಂಜೆಕ್ಷನ್ ಮೂಲಕ ಡ್ರಗ್ಸ್​ ಚುಚ್ಚಿಕೊಂಡು ಆತ ಸಾವನ್ನಪ್ಪಿದ್ದಾನೆ. ಬಹಳ ಹೊತ್ತಾದರೂ ಬಾತ್ ರೂಂ ಬಾಗಿಲು ತೆರೆಯದೇ ಇದ್ದಾಗ ಆತನ ತಂದೆ ಬಾಗಿಲು ಒಡೆದರು. ಆ ದಿಲ್‌ನ ಹೆಣವಾಗಿ ಬಿದ್ದಿದ್ದ. ಅವನ ತೋಳಿಗೆ ಡ್ರಗ್ ಇಂಜೆಕ್ಷನ್ ಚುಚ್ಚಿಕೊಂಡಿತ್ತು ಎಂದು ಆಕೆ ಹೇಳಿದ್ದಾರೆ.

ಅಪರಾಧಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ